Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿವಾದ ಹುಟ್ಟುಹಾಕಿದ ನಟಿ‌ ಸಾಯಿ ಪಲ್ಲವಿ‌ ಹೇಳಿಕೆ
    ಸುದ್ದಿ

    ವಿವಾದ ಹುಟ್ಟುಹಾಕಿದ ನಟಿ‌ ಸಾಯಿ ಪಲ್ಲವಿ‌ ಹೇಳಿಕೆ

    vartha chakraBy vartha chakraಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶ್ರೀನಗರ: ಗೋವು ಕಳ್ಳಸಾಗಾಣಿಕೆದಾರರನ್ನು ಹೊಡೆದು ಕೊಲ್ಲುವಂಥ ಘಟನೆಗಳು ಹಾಗೂ ಕಾಶ್ಮೀರದಲ್ಲಿ ದಶಕಗಳ ಹಿಂದೆ ನಡೆದಿದ್ದ ನರಮೇಧದ ಘಟನೆಗಳು ಒಂದೇ ಎಂದು ಹೇಳುವ ಮೂಲಕ ತಮಿಳು ನಟಿ ಸಾಯಿ ಪಲ್ಲವಿ ವಿವಾದಕ್ಕೀಡಾಗಿದ್ದಾರೆ.
    ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ.
    ಇತ್ತೀಚೆಗೆ ಬಿಡುಗಡೆಯಾಗಿದ್ದ ‘ದ ಕಾಶ್ಮೀರ್‌ ಫೈಲ್ಸ್‌’ ಚಿತ್ರದ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುವಾಗ ಈ ರೀತಿ ಹೇಳಿದ್ದು, ಇದರ ಬಗ್ಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
    ಕೆಲವರು “ಇದೊಂದು ಮೂರ್ಖತನದ ಹೇಳಿಕೆ’ ಎಂದು ಟೀಕಿಸಿದ್ದರೆ, ಇನ್ನೂ ಕೆಲವರು “ಸತ್ಯವನ್ನು ನೇರವಾಗಿ ಹೇಳಿದ ನಿಮ್ಮ ಧೈರ್ಯ ಮೆಚ್ಚುವಂಥದ್ದು’ ಎಂದು ಹೊಗಳಿದ್ದಾರೆ.
    ಸಾಯಿ ಪಲ್ಲವಿ ಪ್ರಸ್ತುತ ತಮ್ಮ ಮುಂಬರುವ ತೆಲುಗು ಚಿತ್ರ ‘ವಿರಾಟ ಪರ್ವಂ’ ಪ್ರಚಾರದಲ್ಲಿದ್ದಾರೆ. ರಾಣಾ ದಗ್ಗುಬಾಟಿ ನಟಿಸಿರುವ ಈ ಚಲನಚಿತ್ರವು 1990ರ ದಶಕದ ನೈಜ ಘಟನೆಗಳಿಂದ ಪ್ರೇರಿತವಾಗಿದೆ. ಇದು ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯಲ್ಲಿ ಪ್ರೇಮಕಥೆಯನ್ನು ನಿರೂಪಿಸುತ್ತದೆ. ಸಾಯಿ ಪಲ್ಲವಿ ಅವರು ನಕ್ಸಲ್ ನಾಯಕ ರಾವಣ್ಣ(ರಾಣಾ ದಗ್ಗುಬಾಟಿ) ಯನ್ನು ಪ್ರೀತಿಸುವ ವೆನ್ನೆಲಾ ಪಾತ್ರದಲ್ಲಿ ನಟಿಸಿದ್ದಾರೆ.
    ಸಾಯಿ ಪಲ್ಲವಿ ಅಭಿನಯದ ‘ವಿರಾಟ ಪರ್ವಂ’ ಜೂನ್ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

    Entertainment News ಧಾರ್ಮಿಕ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಉಪಾಧ್ಯಕ್ಷನಾಗೋಕೆ ಹೊರಟ ಚಿಕ್ಕಣ್ಣ!
    Next Article ‘ಅಗ್ನಿಪಥ’ಕ್ಕೆ ಭಾರೀ ಅಡ್ಡಿ: ಬಿಹಾರ, ರಾಜಸ್ಥಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • RaymondCoods ರಲ್ಲಿ ಬಿಲ್ಲವ, ಬಂಟರ ಮತಗಳಿಸಲು ಸಂಭಾವಿತರ ಸಮಬಲದ ಹೋರಾಟ (ಉಡುಪಿ-ಚಿಕ್ಕಮಗಳೂರು ಕ್ಷೇತ್ರ-Udupi-Chikmaglur Constituency)
    • s1vyt ರಲ್ಲಿ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe