Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುಮಾನಗಳ ಸರಮಾಲೆಯನ್ನ ಬಿಚ್ಚಿಟ್ಟ ಎಚ್ ಡಿ ಕೆ
    ಸುದ್ದಿ

    ಅನುಮಾನಗಳ ಸರಮಾಲೆಯನ್ನ ಬಿಚ್ಚಿಟ್ಟ ಎಚ್ ಡಿ ಕೆ

    vartha chakraBy vartha chakraಏಪ್ರಿಲ್ 14, 2022Updated:ಏಪ್ರಿಲ್ 14, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಮನಗರ‌‌‌‌‌‌‌‌‌‌: ಗುತ್ತಿಗೆದಾರ ಸಂತೋಷ್‌ ಸಾವಿನ ಹಿಂದೆ ಅನೇಕ ಅನುಮಾನಗಳು ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

    ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿಂದು ಡಾ// ಬಿ.ಆರ್ ಅಂಬೇಡ್ಕರ್ ರವರ ೧೩೧ನೇ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇವತ್ತು ಅಥವ ನಾಳೆ ರಾಜೀನಾಮೆ ಕೊಡಬಹುದು. ಅವರ ಹೈಕಮಾಂಡ್ ಈ ಬಗ್ಗೆ ಹೇಳುತ್ತಾರೆ ಅನ್ನಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಮೊದಲು ಅವರು ರಾಜೀನಾಮೆ ನೀಡುವುದು ಸೂಕ್ತ” ಎಂದರು.

    ಸಂತೋಷ್ ಸಾವಿನ ಹಿಂದೆ ಹಲವಾರು ಸಂಶಯಗಳಿವೆ.‌ ಜನರಲ್ಲಿ ಅನೇಕ ಪ್ರಶ್ನೆಗಳೂ ಇವೆ. ಸತ್ಯಾಂಶವನ್ನು ಹೊರ ತರಲು ತನಿಖೆಯಾಗಬೇಕು. ಇದು ಸರಕಾರದ ಜವಾಬ್ದಾರಿ ಎಂದು ಅವರು ಹೇಳಿದರು.

     ಮೃತ ವ್ಯಕ್ತಿ ನಾಲ್ಕು ಕೋಟಿ ರೂಪಾಯಿ ಕಾಮಗಾರಿ ಸರಕಾರದ ಕಾರ್ಯಾದೇಶ ಇಲ್ಲದೆ, ವರ್ಕ್ ಎಸ್ಟಿಮೇಟ್‌‌ ಇಲ್ಲದೇ ಕೆಲಸ ಮಾಡಿದ್ದು ಹೇಗೆ? ಅವರಿಗೆ ಕಾಮಗಾರಿ ಮಾಡಲು ಅನುಮತಿ ಕೊಟ್ಟವರು ಯಾರು? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

    ಯಾವ ಎಂಜಿನಿಯರ್ ಅಥವ ಸರಕಾರಿ ಸಂಸ್ಥೆ ಗಮನಕ್ಕೆ ಬಾರದೇ ಪೇಮೆಂಟ್ ನೀಡಬೇಕು ಎಂದರೆ ತಾಂತ್ರಿಕ ಸಮಸ್ಯೆ ಇದೆ. ಇದರ ನಡುವೆ ಪರ್ಸೆಂಟೆಜ್ ಮಾತುಗಳು ಕೇಳಿ ಬರುತ್ತಿವೆ. ಇವೆಲ್ಲದರ ಬಗ್ಗೆ ಸಮಗ್ರ ತನಿಖೆ ಆಗಬೇಕಿದೆ. ಈ ಕಾರಣಕ್ಕೆ ಸಂತೋಷ್ ಸಾವಿನ ಬಗ್ಗೆ ಹಲವು ಅನುಮಾನಗಳು ಕೂಡ ಇವೆ. ಅಲ್ಲದೆ, ಮೃತ ವ್ಯಕ್ತಿಯ ಜತೆ ಇಬ್ಬರು ಸ್ನೇಹಿತರು ಹೋಗಿದ್ದರು ಎಂದ ಅವರು; ಸಂತೋಷ್ ಮಾತ್ರ ಒಂದು ಕೊಠಡಿಗೆ ಹೋಗಿದ್ದಾರೆ, ಉಳಿದ ಇಬ್ಬರು ಒಂದು ಕೊಠಡಿಗೆ ಏಕೆ ಹೋಗಿದ್ದರು? ಇವರೆಲ್ಲ ಉಡುಪಿಗೆ ಏಕೆ ಹೋಗಿದ್ದರು? ಸರಕಾರವು ಪ್ರಾಮಾಣಿಕ ಹಾಗು ದಕ್ಷ ಅಧಿಕಾರಿಗಳನ್ನು ನೇಮಿಸಿ ಹಾಕಿ ತನಿಖೆ ನಡೆಸಿದರೆ ಸತ್ಯಾಸತ್ಯತೆ ಹೊರಬರುತ್ತದೆ ಎಂದರು.

    ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಕೊಲೆಯಾದ ಸಂದರ್ಭದಲ್ಲಿ ಬಿಜೆಪಿ ದಂಡೇ ಅಲ್ಲಿಗೆ ಹೋಯಿತು. ಅದಕ್ಕೆ ನಾವೇನು ಕಡಿಮೆ ಎಂದು ಸಾವಿನ ರಾಜಕಾರಣ ಮಾಡಲಿಕ್ಕೆ ಕಾಂಗ್ರೆಸ್‌ನ ನಾಯಕರ ದಂಡೇ ಈಗ ಸಂತೋಷ ಅವರ ಮನೆಗೆ ದಾಂಗುಡಿ ಇಟ್ಟಿದೆ. ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ನಾಯಕರೆಲ್ಲ ಕೈಕಟ್ಟಿ ಆ ಸಂತ್ರಸ್ತ ಹೆಣ್ಣುಮಗಳ ಮುಂದೆ ಕುಳಿತ ದೃಶ್ಯಗಳನ್ನು ನೋಡಿದರೆ ರಾಜಕೀಯ ಲಾಭ ಮಾಡಿಕೊಳ್ಳುವ ಉದ್ದೇಶ ಬಿಟ್ಟರೆ ಬೇರೇನೂ ಕಾಣದು ಎಂದು ಕುಮಾರಸ್ವಾಮಿ ಅವರು ಸಂಶಯ ವ್ಯಕ್ತಪಡಿಸಿದರು. ಈಶ್ವರಪ್ಪರ ಬಗ್ಗೆ ನಾನೇಕೆ ಸಾಪ್ಟ್ ಆಗಲಿ. ನನಗೆ ಯಾವ ರೀತಿಯ ಸಾಫ್ಟ್‌ ಕಾರ್ನರ್‌ ಇಲ್ಲ. ಅವರ ಮೇಲೆ ಆರೋಪ ಬಂದಿದೆ. ಮೊದಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    Politics
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬ್ಯಾಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿ
    Next Article ಮಹಾನ್ ನಾಯಕಿ ಕೈವಾಡ
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    • казино вулкан бесплатные играть ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Floydfox ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe