Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan
    Trending

    ಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan

    vartha chakraBy vartha chakraಏಪ್ರಿಲ್ 28, 202429 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.28-ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
    ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದಾರೆ. ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

    2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಹಾದೇವ್​ ಬೆಟ್ಟಿಂಗ್​ ಕೇಸ್ :
    ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹಾದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ ಇದುವರೆಗೆ ಭೂಪೇಶ್‌ ಬಘೇಲ್‌ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವೀಗ ಚರ್ಚೆಗೆ ಗ್ರಾಸವಾಗಿತ್ತು.

    ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ಲಂಚ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳ ಮಾರಾಟ ಜಾಲ ಪತ್ತೆ | Child Trafficking
    Next Article ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    ಫೆಬ್ರವರಿ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Randypaw ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Williamtrema ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • WalterDiorp ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ಫೆಬ್ರವರಿ 7, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.