Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi
    Trending

    ಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi

    vartha chakraBy vartha chakraನವೆಂಬರ್ 28, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕನ್ನಡ ಚಿತ್ರರಂಗದ ಮಳೆ ಹುಡುಗಿ ಖ್ಯಾತಿಯ ಪೂಜಾ ಗಾಂಧಿ (Pooja Gandhi) ಇತ್ತೀಚೆಗೆ ಹಲವು ಕಾರಣಗಳಿಂದ ಸುದ್ದಿ ಮಾಡುತ್ತಿದ್ದಾರೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ‘ಮುಂಗಾರು ಮಳೆ’ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ ಪಂಜಾಬ್ ಮೂಲದ ನಟಿ ಪೂಜಾ ಗಾಂಧಿ, ತಾವು ಕನ್ನಡ ಕಲಿಯುವುದಷ್ಟೇ ಅಲ್ಲದೆ ಉತ್ತರ ಭಾರತದ ಹಲವು ಆಸಕ್ತರಿಗೆ ಕನ್ನಡ ಕಲಿಸುವ ವ್ಯವಸ್ಥೆ ಕಲ್ಪಿಸುವ ಮೂಲಕ ಕನ್ನಡಿಗರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಪೂಜಾಗಾಂಧಿ ಅದರಲ್ಲೂ ಹೊಸತನ ತೋರುವ ಮೂಲಕ ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರೊಂದಿಗೆ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಅವರು ರಾಷ್ಟ್ರಕವಿ ಕುವೆಂಪು ಅವರು ನಾಡಿಗೆ ನೀಡಿದ ಮಂತ್ರ ಮಾಂಗಲ್ಯದ ಮೂಲಕ ವಿವಾಹ ಜೀವನ ಪ್ರವೇಶಿಸುತ್ತಿದ್ದಾರೆ ಈ ಮೂಲಕ ಪೂಜಾ ಗಾಂಧಿಯವರ ನಡೆ ಎಲ್ಲರ ಗಮನ ಸೆಳೆದಿದೆ.

    ಸಿನಿಮಾ ತಾರೆಯರ ಮದುವೆ ಎಂದರೆ ಅದೊಂದು ಅದ್ದೂರಿ ಹಾಗೂ ವೈಭವದಿಂದ ನಡೆಯುವ ಸಮಾರಂಭ ಎಂದೇ ಪ್ರತೀತಿ. ಈ ಸಮಾರಂಭಕ್ಕೆ ಹಲವಾರು ಖ್ಯಾತನಾಮರು ಸಾಕ್ಷಿಯಾಗುವ ಮೂಲಕ ಇಡೀ ವಿದ್ಯಮಾನ ಅದ್ದೂರಿತನದಿಂದ ಕೂಡಿರುವಂತಾಗುತ್ತದೆ. ಆದರೆ ಪೂಜಾ ಗಾಂಧಿ ಇಂತಹ ಎಲ್ಲ ವೈಭವ ಅದ್ದೂರಿ ಸಮಾರಂಭಗಳಿಂದ ಹೊರತಾಗಿ ತಮ್ಮ ಮದುವೆ ಇರಬೇಕೆಂದು ನಿರ್ಧರಿಸಿ ಅದರಂತೆ ಕುವೆಂಪು ಅವರ ಮಂತ್ರ ಮಾಂಗಲ್ಯದ ಮೂಲಕ ಆಯ್ದ ಕೆಲವೇ ಕೆಲವು ಗಣ್ಯರ ಸಮುಖದಲ್ಲಿ ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ ಬಾಲಿವುಡ್‌, ಕಾಲಿವುಡ್‌ನಲ್ಲಿ ನಟಿಸಿದ್ದ ಪೂಜಾ ಅವರ ಸಿನಿ ಬದುಕಿಗೆ ತಿರುವು ನೀಡಿದ್ದು, ಯೋಗರಾಜ್‌ ಭಟ್‌ ನಿರ್ದೇಶನದ ಮುಂಗಾರು ಮಳೆ. ಈ ಸಿನಿಮಾ ಬಳಿಕ ಮಳೆ ಹುಡುಗಿ ಎಂದೇ ಖ್ಯಾತಿ ಪಡೆದ ಇವರು ನಂತರದಲ್ಲಿ ಸಾಲು ಸಾಲಾಗಿ ಹಲವು ಸಿನಿಮಾಗಳಲ್ಲಿ ನಟಿಸಿದರು.ಇದರಲ್ಲಿ ‘ಮಿಲನ’, ‘ಕೃಷ್ಣ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳು ಹಿಟ್ ಆದವು.

    ಜೊತೆಗೆ ತಮಿಳು ಸಿನಿಮಾಗಳಲ್ಲೂ ಕಾಣಿಸಿಕೊಂಡರು. ‘ದಂಡುಪಾಳ್ಯ’, ‘ಅಭಿನೇತ್ರಿ’ ಸಿನಿಮಾಗಳ ಬಳಿಕ ಸಣ್ಣ ಬ್ರೇಕ್‌ ತೆಗೆದುಕೊಂಡಿದ್ದರು. 2020ರ ಆರಂಭದಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಈ ಅವಧಿಯಲ್ಲಿ ನಟನೆಯಿಂದ ದೂರವೇ ಉಳಿದಿದ್ದರು. ಇತ್ತೀಚೆಗೆ ‘ಸಂಹಾರಿಣಿ’ ಎಂಬ ಚಿತ್ರದಲ್ಲಿ ಪೂಜಾ ಕಾಣಿಸಿಕೊಂಡಿದ್ದರು.
    ಈ ಹಿಂದೆ ಆನಂದ್ ಗೌಡ ಎಂಬುವರೊಂದಿಗೆ‌ ನಿಶ್ಚಿತಾರ್ಥ ನಡೆದಿತ್ತಾದರೂ ಅದು ಮುರಿದು ಬಿದ್ದಿತ್ತು.

    Verbattle
    Verbattle
    Verbattle
    Entertainment Karnataka News Pooja Gandhi ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    Next Article ರಶ್ಮಿಕಾ ಮಂದಣ್ಣ ಎನ್ ಹೇಳ್ತಾರೆ ಕೇಳಿ | Rashmika Mandanna
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ಫೆಬ್ರವರಿ 7, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesBency ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Tracymix ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.