Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Adani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    ಸುದ್ದಿ

    Adani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು

    vartha chakraBy vartha chakraಫೆಬ್ರವರಿ 6, 202377 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.6-

    ಅದಾನಿ ಸಮೂಹ ಸಂಸ್ಥೆಯ (Adani Group Companies) ಹೂಡಿಕೆ ಮತ್ತು ಸಾಲ ಹಗರಣವನ್ನು ಸಂಸತ್ತಿನ ಜಂಟಿ ಸದನ ಸಮಿತಿಯ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ Congress ‌ಮತ್ತು ಇತರೆ ಪ್ರತಿಪಕ್ಷಗಳು  ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿವೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಾಂಧಿ‌ ಪ್ರತಿಮೆ ಮುಂದೆ ಧರಣಿ ನಡೆಸಿದರೆ ಹಲವೆಡೆ SBI ಬ್ಯಾಂಕ್‍ಗಳು ಹಾಗೂ LIC ಶಾಖೆಗಳ ಮುಂದೆ ಪ್ರತಿಭಟನೆ ನಡೆಸಿದರು. ಅದಾನಿ ಗುಂಪಿನ ಹಗರಣವನ್ನು ಸಂಸತ್ತಿನ ಜಂಟಿ ಸದನ ಸಮಿತಿ ಅಥವಾ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಘೋಷಣೆ ಕೂಗಿ ಬ್ಯಾನರ್ ಪ್ರದರ್ಶನ ಮಾಡಿದರು.

    ಮೈಸೂರು ಬ್ಯಾಂಕ್ ವೃತ್ತ (Mysore Bank Circle) ದಲ್ಲಿ KPCC ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ಸೇರಿದ ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ನೂರಾರು ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.

    ಪ್ರತಿಭಟನಾಕಾರರನ್ನು ಉದ್ದೇಶಿಸಿ ರಾಮಲಿಂಗಾರೆಡ್ಡಿ ಮಾತನಾಡಿ ‘ಅದಾನಿ ಸಮೂಹದಲ್ಲಿ LIC 36 ಸಾವಿರ ಕೋಟಿ ಹೂಡಿಕೆ ಮಾಡಿದ್ದರೆ, SBI 80 ಸಾವಿರ ಕೋಟಿ ರೂ ಸಾಲ ನೀಡಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಬಾಯಿ ಬಿಡುತ್ತಿಲ್ಲ’ ಎಂದು ದೂರಿದರು. ‘ಅದಾನಿ ಬೆಂಬಲಕ್ಕೆ Modi ನಿಂತಿದ್ದು, ಅದರಿಂದಾಗಿ ಮೋದಿ ಉದ್ಯಮಿಗಳ 10 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ. ಈ ಹಣವೆಲ್ಲಾ ಯಾರದ್ದು?’ ಎಂದು ಪ್ರಶ್ನಿಸಿದರು. ‘ಜನ ಸಾಮಾನ್ಯರ ಉಳಿತಾಯದ ಹಣವನ್ನು ಮೋದಿ ಸರ್ಕಾರ ಉಳ್ಳವರಿಗೆ ನೀಡುತ್ತಿದೆ. ಅದಾನಿ ಸಮೂಹದ ಹಗರಣ ಕುರಿತು ತನಿಖೆಗೆ ಒತ್ತಾಯಿಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ’ ಎಂದರು. ‘ಕೇಂದ್ರ ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿ ಎಲ್‍ಐಸಿ ಅದಾನಿ ಕಂಪನಿಗಳ ಷೇರುಗಳ ಮೇಲೆ 29 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಸಾರ್ವಜನಿಕ ಹಣಕಾಸು ಬ್ಯಾಂಕ್ ಆಗಿರುವ ಎಸ್‍ಬಿಐನಿಂದ ಅದಾನಿ ವ್ಯವಹಾರಗಳಿಗೆ 27 ಸಾವಿರ ಕೋಟಿ ರೂಪಾಯಿ ಸಾಲ ನೀಡಿದೆ. ಅನುಚಿತ ಮಾರ್ಗದಲ್ಲಿ ಅದಾನಿ ಸಮೂಹ ವಹಿವಾಟು ನಡೆಸುತ್ತಿದೆ ಎಂದು ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್ಬರ್ಗ್ ವರದಿ ಮಾಡಿದ ಬಳಿಕ ಅದಾನಿ ಕಂಪನಿಯ ಷೇರು ಮೌಲ್ಯ ಕುಸಿಯಲಾರಂಭಿಸಿದೆ. ಇದರಿಂದ ಸರ್ಕಾರಿ ಸ್ವಾಮ್ಯದ ಹಣಕಾಸು ಸಂಸ್ಥೆಗಳಿಗೆ ಸುಮಾರು ಒಂದು ಬಿಲಿಯನ್ ಡಾಲರ್ ನಷ್ಟವಾಗಿದೆ ಎಂಬ ಅಂದಾಜುಗಳಿವೆ’ ಎಂದು ಪ್ರತಿಭಟನಾ ನಿರತರು ಆಪಾದಿಸಿದರು.

    ಪ್ರತಿಭಟನೆಯಲ್ಲಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ರಾಜ್‍ಕುಮಾರ್, ಮಾಜಿ ಮಹಾಪೌರರಾದ ಮಂಜುನಾಥ್ ರೆಡ್ಡಿ, ಗಂಗಾಂಭಿಕೆ, ಉದಯ್‍ಶಂಕರ್ ಸೇರಿ ಕೆಪಿಸಿಸಿ ಪದಾಧಿಕಾರಿಗಳು, ಮಾಜಿ ಮಹಾಪೌರರುಗಳು, ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.

    #adanigroups #Congress #gauthamadani #narendramodi Bangalore BJP Congress Government Karnataka KPCC lic m modi mysor Mysore News Politics sbi ಅದಾನಿ ಕಾಂಗ್ರೆಸ್ ರಾಜಕೀಯ ವ್ಯವಹಾರ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous ArticleKPTCL ನೇಮಕದಲ್ಲಿ ಅಕ್ರಮ – 40 ಜನರ ಪಟ್ಟಿ ಬಿಡುಗಡೆ
    Next Article ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಪ್ರಧಾನಿ ಮೋದಿ ಕರೆ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 13win ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldFrups ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • playboy888_loOn ರಲ್ಲಿ Alcoholಗೆ‌ Full‌ ಡಿಮಾಂಡ್
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe