Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಗಸದಲ್ಲಿ ಲೋಹದ ಹಕ್ಕಿಗಳ ಧೀಶಕ್ತಿಯ ಅನಾವರಣ
    ಬೆಂಗಳೂರು

    ಆಗಸದಲ್ಲಿ ಲೋಹದ ಹಕ್ಕಿಗಳ ಧೀಶಕ್ತಿಯ ಅನಾವರಣ

    vartha chakraBy vartha chakraಫೆಬ್ರವರಿ 13, 2023Updated:ಮಾರ್ಚ್ 20, 202325 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು

    ‘ಭಾರತ ರಕ್ಷಣಾ ವ್ಯವಹಾರ ಕೇವಲ ಮಾರುಕಟ್ಟೆ ಮಾತ್ರ ಅಲ್ಲ ಅದು ಅಭಿವೃದ್ಧಿಯ ಪಾಲುದಾರ ಕೂಡ ಆಗಿದೆ. ನಮ್ಮ ರಕ್ಷಣಾ ತಂತ್ರಜ್ಞಾನ ಜಗತ್ತಿನಲ್ಲೇ ಪ್ರಭಾವಶಾಲಿಯಾಗಿದೆ. ಇದರಿಂದ ದೇಶವು ಪ್ರಾಮಾಣಿಕ ಹಾಗೂ ಸದೃಢವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದ್ದಾರೆ.  ಯಲಹಂಕ ವಾಯುನೆಲೆ (Yelahanka air base) ಯಲ್ಲಿ ಇಂದಿನಿಂದ ಫೆಬ್ರವರಿ 17ರವರೆಗೆ ಒಟ್ಟು 35 ಸಾವಿರ ಚದರ ಮೀಟರ್ ಪ್ರದೇಶದಲ್ಲಿ ನಡೆಯಲಿರುವ ‘ಏರೋ ಇಂಡಿಯಾ–2023’ (Aero India Show – 2023) ಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

    ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ಸೇರಿದಂತೆ ಹಲವು ಗಣ್ಯರೊಂದಿಗೆ ಸಮಾರಂಭದ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಲಿಕಾಪ್ಟರ್ಗಳು ತ್ರಿವರ್ಣ ಧ್ವಜ, ಸೇನೆ ಧ್ವಜ ಹಾಗೂ ಏರೋ ಇಂಡಿಯಾ ಧ್ವಜ ಹಾಗೂ ಸೂರ್ಯ ಕಿರಣ್ (Surya Kiran) ತ್ರಿವರ್ಣ ಬಣ್ಣದ ಮೂಲಕ ಸ್ವಾಗತಿಸಿದವು.

    ಇದರಿಂದ ಪುಳಕಿತರಾಗಿ ಮಾತು ಆರಂಭಿಸಿದ ಅವರು, ‘ಏರೋ ಇಂಡಿಯಾ ಕೇವಲ ಪ್ರದರ್ಶನ ಎಂದು ಪರಿಗಣಿಸುತ್ತಿದ್ದ ಕಾಲವೊಂದಿತ್ತು. ಕಳೆದ ಕೆಲವು ವರ್ಷಗಳಲ್ಲಿ, ದೇಶವು ಈ ಗ್ರಹಿಕೆಯನ್ನು ಬದಲಾಯಿಸಿದೆ. ಈಗ ಇದು ಕೇವಲ ಪ್ರದರ್ಶನವಲ್ಲ. ಭಾರತದ ಶಕ್ತಿಯಾಗಿದೆ. ಇದು ಭಾರತೀಯ ರಕ್ಷಣಾ ಉದ್ಯಮದ ವ್ಯಾಪ್ತಿ ಮತ್ತು ಆತ್ಮ ವಿಶ್ವಾಸದ ಪ್ರತೀಕವಾಗಿದೆ’ ಎಂದು ಹೇಳಿದರು.

    ‘ಈ ಪ್ರದರ್ಶನ ಭಾರತದ ಸಾಮರ್ಥ್ಯಗಳನ್ನು ವಿಸ್ತರಿಸುವ ಒಂದು ಉದಾಹರಣೆಯಾಗಿದೆ. ಇಲ್ಲಿ ಸುಮಾರು 100 ರಾಷ್ಟ್ರಗಳ ಉಪಸ್ಥಿತಿಯು ಭಾರತದ ಮೇಲಿನ ವಿಶ್ವದ ನಂಬಿಕೆಯನ್ನು ಹೆಚ್ಚಿಸಿದೆ ಎಂದು ತೋರಿಸುತ್ತದೆ. ಭಾರತ ಮತ್ತು ವಿಶ್ವದ 700ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸುತ್ತಿದ್ದಾರೆ. ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ’ ಎಂದು ತಿಳಿಸಿದರು.

    ಆನಂತರ ಆಗಸದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನ ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು. ಸೂರ್ಯಕಿರಣ್, ಹೆಲಿಕಾಪ್ಟರ್ ಗಳ ಕಸರತ್ತು ಕರತಾಡನಕ್ಕೆ ಪಾತ್ರವಾದರೆ  ನೇರವಾಗಿ ನಭಕ್ಕೆ ಚಿಮ್ಮಿದ ತೇಜಸ್ ನ (Tejas) ಸಾಮರ್ಥ್ಯ ನಿಬ್ಬೆರಗಾಗಿಸಿತು. ಸುಮಾರು ಒಂದು ಗಂಟೆಗಳ ಕಾಲ ನಭದಲ್ಲಿ ನಡೆದ ಲೋಹದ ಹಕ್ಕಿಗಳ ಚಮತ್ಕಾರ ಭಾರತದ ವೈಮಾನಿಕ ಸಾಮರ್ಥ್ಯದ ಧೀ ಶಕ್ತಿಯನ್ನು ಪರಿಚಯಿಸಿತು.

    1996ರಲ್ಲಿ ಆರಂಭವಾದ ವೈಮಾನಿಕ ಕ್ಷೇತ್ರದ ಶಕ್ತಿ ಪ್ರದರ್ಶನವು ದ್ವೈವಾರ್ಷಿಕವಾಗಿ ನಡೆಯುತ್ತಿದ್ದು, ಇದು 14ನೇ ಆವೃತ್ತಿ. ಏಷ್ಯಾದಲ್ಲೇ ಅತಿ ದೊಡ್ಡ ರಕ್ಷಣಾ ಮತ್ತು ವೈಮಾನಿಕ ಪ್ರದರ್ಶನ ಇದಾಗಿದ್ದು, ದೇಶದ ಯುದ್ಧ ವಿಮಾನಗಳು, ಹೆಲಿಕಾಪ್ಟರ್‌ ಗಳು, ರಕ್ಷಣಾ ಉಪಕರಣ‌ಗಳು ಮತ್ತು ವೈಮಾನಿಕ ಕ್ಷೇತ್ರದ ಸಾಧನೆಗಳನ್ನು ಬಿಂಬಿಸಲಿದೆ. ವೈಮಾನಿಕ ಕ್ಷೇತ್ರದ ಉದ್ಯಮದ ಸಾಮರ್ಥ್ಯಗಳು, ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನಕ್ಕೆ ಇದು ಅತಿ ದೊಡ್ಡ ವೇದಿಕೆಯಾಗಿದೆ.

    #bangalore aero india show 2023 air show bommai india m modi narendra modi rajnath singh surya kiran tejas yelahanka ತಂತ್ರಜ್ಞಾನ ನರೇಂದ್ರ ಮೋದಿ ಬೊಮ್ಮಾಯಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಗಣ್ಯರ ಹೆಸರಲ್ಲಿ BJP ರಥ ಯಾತ್ರೆ
    Next Article ಹುಲಿ ದಾಳಿ – ಮಗ ಸಾವು ತಂದೆಗೆ ಗಾಯ
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeremyPah ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • https://timpapa.com/ ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • promopmpa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe