ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Trending

    ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!

    vartha chakraBy vartha chakraಅಕ್ಟೋಬರ್ 16, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈನಲ್ಲಿ ಎನ್‌ ಸಿ ಪಿ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ,ಪಂಜಾಬಿ ಗಾಯಕ ಸಿಧು ಮೂಸೆವಾಲಾ ಮತ್ತು ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣ ಸೇರಿದಂತೆ, ಪ್ರಸ್ತುತ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿರುವ ಲಾರೆನ್ಸ್‌ ಬಿಷ್ಣೋಯ್‌ ಬಗ್ಗೆ ನೋಡುವುದಾದರೇ.

    ಲಾರೆನ್ಸ್‌ ಬಿಷ್ಣೋಯ್‌ ಯಾರಿವನು?

    ಲಾರೆನ್ಸ್ ಬಿಷ್ಣೋಯಿದು ಮೂಲತಃ ಕೃಷಿಕ ಕುಟುಂಬ. ಆತ ಹುಟ್ಟಿದ್ದು 1993ರ ಫೆಬ್ರವರಿ 12ರಂದು. ಪಂಜಾಬ್ ನ ಫಿರೋಜ್ ಪುರ್ ಜಿಲ್ಲೆಯಲ್ಲಿ. ಆತನ ನಿಜವಾದ ಹೆಸರು ಸತ್ವಿಂದರ್ ಸಿಂಗ್. ಈತ ಖ್ಯಾತ ಬಿಷ್ಣೋಯಿ ಸಮುದಾಯಕ್ಕೆ ಸೇರಿದ್ದು ಈತನ ತಂದೆ ಹರಿಯಾಣ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಕೆಲಸ ಮಾಡುತ್ತಿದ್ದವರು.

    ಫಿರೋಜ್ ಫುರ್ ನಲ್ಲೇ 12ನೇ ತರಗತಿಯವರೆಗೆ ವ್ಯಾಸಂಗ ಮಾಡಿದ ಆತ, ಆನಂತರ 2010ರಲ್ಲಿ ಚಂಡೀಗಡದಲ್ಲಿ ಪದವಿ ವ್ಯಾಸಂಗಕ್ಕೆ ಡಿಎವಿ ಕಾಲೇಜಿಗೆ ಸೇರಿದ್ದ. ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಎಲ್.ಎಲ್.ಬಿ ಅಧ್ಯಯನದ ಸಮಯದಲ್ಲಿ 2011-12ರ ವಿದ್ಯಾರ್ಥಿ ಸಂಘದ (ಎಸ್ಒಪಿಯು) ಅಧ್ಯಕ್ಷನಾದ.

    ಸ್ಟೂಡೆಂಟ್ ಪಾಲಿಟಿಕ್ಸ್ ಕರಗತ ಮಾಡಿಕೊಂಡು ಆಗ ಚಂಡೀಗಡದ ಅಂಡರ್ ವರ್ಲ್ಡ್ ನಲ್ಲಿ ಕುಖ್ಯಾತನಾಗಿದ್ದ ಗೋಲ್ಡಿ ಬ್ರಾರ್ ಎನ್ನುವವರ ಜೊತೆಗೆ ಆತ್ಮೀಯತೇ ಬೆಳೆಸಿಕೊಂಡ ಲಾರೆನ್ಸ್ ಬಿಷ್ಣೋಯಿ ಅಲ್ಲಿಂದಲೇ ಆತನ ಕ್ರಿಮಿನಲ್ ಚಟುವಟಿಕೆಗಳು ಪ್ರಾರಂಭವಾಗಿದ್ದು ಎಂದು ಹೇಳಲಾಗುತ್ತದೆ.

    ಚಂಡೀಗಢದ ಡಿಎವಿ ಕಾಲೇಜಿನಲ್ಲಿ ಆರಂಭದಲ್ಲಿ ಜಗ್ಗು ಭಗವಾನ್ ಪುರಿಯಾ ಎಂಬ ಡಾನ್ ಜೊತೆಗೆ ನಂತರ ಸಂಪತ್ ನೆಹ್ರಾ ಹಾಗೂ ಹರ್ಯಾಣ ಗ್ಯಾಂಗ್ ಸ್ಟರ್ ಕಾಲಾ ಜತೇದಿಯ ಜೊತೆ ಸೇರಿದ್ದ ಲಾರೆನ್ಸ್, ಮನಿ ಕಂಟ್ರೋಲ್ ವರದಿಯ ಪ್ರಕಾರ, ಆತನ ವಿರುದ್ಧ ಮೊದಲ ಕ್ರಿಮಿನಲ್ ಕೇಸ್ ದಾಖಲಾಗಿದ್ದು 2010ರಲ್ಲಿ, ವ್ಯಕ್ತಿಯೊಬ್ಬರ ಕೊಲೆ ಪ್ರಯತ್ನದ ಹಿನ್ನೆಲೆಯಲ್ಲಿ ಆತನ ಮೇಲೆ ಕೇಸ್ ದಾಖಲಾಗಿತ್ತು.

    2013ರಲ್ಲಿ ಕಾಲೇಜು ಯೂನಿಯನ್ ಚುನಾವಣೆಯ ಗೆದ್ದ ಅಭ್ಯರ್ಥಿಯನ್ನೇ ಗುಂಡಿಟ್ಟು ಕೊಂದಿದ್ದ. ಲೂಧಿಯಾನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ತನ್ನ ವಿರುದ್ದದ ಅಭ್ಯರ್ಥಿಯನ್ನು ಸಾಯಿಸಿದ್ದು ಈತನ ಮೇಲೆ ಪಂಜಾಬೀ ಗಾಯಕ ಸಿಧು ಮೂಸೆವಾಲ, ಕೆನಡಾದ ಗ್ಯಾಂಗ್​ಸ್ಟರ್ ಸುಖದೂಲ್ ಸಿಂಗ್ ಅಲಿಯಾಸ ಸುಖ ದುನೆಕೆ ಮೊದಲಾದವರ ಹತ್ಯೆ ಆರೋಪವಿದೆ. ಗುರ್ಲಾಲ್ ಬ್ರಾರ್ ಮತ್ತು ವಿಕಿ ಮಿದ್ದುಖೇಡ್ ಎಂಬ ಲಾರೆನ್ಸ್ ಗ್ಯಾಂಗ್ ಸದಸ್ಯರ ಹತ್ಯೆ ಹಿಂದೆ ಸುಖದೂಲ್ ಸಿಂಗ್ ಕೈವಾಡ ಇದ್ದರಿಂದ ಆತನನ್ನು ತಾನು ಮುಗಿಸಿದೆ ಎಂದು ಲಾರೆನ್ಸ್ ಹೇಳಿಕೊಂಡಿದ್ದಾರೆ.

    ಲಾರೆನ್ಸ್ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಲಿಕ್ಕರ್ ಹಾಗೂ ಮಾದಕ ವಸ್ತುಗಳ ಕಳ್ಳಸಾಗಣೆ ನಡೆಸುತ್ತಿದ್ದ. ಶ್ರೀಮಂತರನ್ನು ಪ್ರಮುಖ ಉದ್ಯಮಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಈತನನ್ನು 2014ರಲ್ಲಿ ಬಂಧಿಸಲಾಗಿತ್ತು ಆದರೆ, ಆತ ಕಸ್ಟಡಿಯಿಂದಲೇ ತಪ್ಪಿಸಿಕೊಂಡಿದ್ದ. ಪುನಃ 2016ರಲ್ಲಿ ಆತನನ್ನು ಪುನಃ ಬಂಧಿಸಲಾಗಿತ್ತು. ಆಗಿನಿಂದಲೂ ಆತ ಜೈಲಿನಲ್ಲೇ ಇದ್ದುಕೊಂಡು ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿದ್ದು ಆತನ ಗ್ಯಾಂಗ್  ಹೊರಗಡೆ ಸಕ್ರಿಯವಾಗಿ ಈತನ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದೆ ಅಂದಹಾಗೆ  ಬಿಷ್ಣೋಯ್ ಗ್ಯಾಂಗ್ ನಲ್ಲಿ ಪ್ರಸ್ತುತ 7೦೦ ಕ್ಕೂ ಹೆಚ್ಚು ಶೂಟರ್ ಗಳು ಕೆಲಸ ಮಾಡುತ್ತಿದ್ದಾರೆ.

    ಲಾರೆನ್ಸ್ ಬಿಷ್ಣೋಯ್ ರೌಡಿಸಂ ಮಾತ್ರವಲ್ಲ, ಮದ್ಯ ಸಾಗಾಣಿಕೆ, ಶಸ್ತ್ರಾಸ್ತ್ರ ಕಳ್ಳಸಾಗಾಣಿಕೆ ಇತ್ಯಾದಿ ಆದಾಯ ತರುವ ಅಪರಾಧ ಕೃತ್ಯ ಎಸಗುತಿದ್ದು ಒಟ್ಟು 36 ಕ್ರಿಮಿನಲ್ ​ಕೇಸ್ ಗಳು ಈತನ ವಿರುದ್ಧ ದಾಖಲಾಗಿವೆ ಜೊತೆಗೆ ಈತನಿಗೆ ಖಲಿಸ್ತಾನೀ ಉಗ್ರರರೊಂದಿಗೆ ನಂಟು ಇರುವುದನ್ನು ಎನ್​ಐಎ ತನ್ನ ತನಿಖೆಯಲ್ಲಿ ಪತ್ತೆ ಮಾಡಿದೆ.

    ಸದ್ಯ ಲಾರೆನ್ಸ್ ಬಿಷ್ಣೋಯ್​ನನ್ನು ಭದ್ರತಾ ದೃಷ್ಟಿಯಿಂದ ವಿವಿಧ ಜೈಲುಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಭರತ್​ಪುರ್ ಜೈಲು, ತಿಹಾರ್ ಜೈಲಿನಲ್ಲಿ ಈತನನ್ನು ಇಡಲಾಗಿತ್ತು. ಈಗ ಸಬರಮತಿ ಜೈಲಿನಲ್ಲಿದ್ದಾನೆ. ಜೈಲು ಅಧಿಕಾರಿಗಳ ಪ್ರಕಾರ ಈತ ವಿಒಐಪಿ ಮೂಲಕ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಮಾತನಾಡುತ್ತಾನೆ. ಜೈಲಿನಲ್ಲೇ ಇದ್ದುಕೊಂಡು ಟಿವಿ ನ್ಯೂಸ್ ಚಾನಲ್​ಗಳಿಗೆ ಈತ ಸಂದರ್ಶನ ನೀಡಿದ್ದು ಇದೆ.

    ಸಲ್ಮಾನ್ ಖಾನ್ ಹತ್ಯೆಗೆ ಕಾರಣವೇನು?

    ಕೃಷ್ಣಮೃಗಗಳು ಬಿಷ್ಣೋಯಿ ಸಮುದಾಯದವರು ಪೂಜಿಸುವಂಥ ಪ್ರಾಣಿ. ಹಿಂದೂಗಳು ಗೋವುಗಳನ್ನು ದೇವರು ಎಂದು ಭಾವಿಸಿ ಪೂಜಿಸುವಂತೆ ಉತ್ತರ ಭಾರತದಲ್ಲಿರುವ ಬಿಷ್ಣೋಯಿ ಸಮುದಾಯದವರು ಕೃಷ್ಣಮೃಗಗಳನ್ನು ದೇವರು ಎಂದು ಪೂಜಿಸುತ್ತಾರೆ. ಹಾಗಾಗಿ, ಸಲ್ಮಾನ್ ಖಾನ್ ಹಾಗೂ ಆತನ ಸಹಚರರು ಆ ಕೃಷ್ಣಮೃಗಗಳನ್ನು ಕೊಂದಿದ್ದು ಆ ಸಮುದಾಯದವರನ್ನು ಸಹಜವಾಗಿ ಕೆರಳಿಸಿದೆ. ಲಾರೆನ್ಸ್ ಕೂಡ ಅದೇ ಸಮುದಾಯಕ್ಕೆ ಸೇರಿದವನಾದ್ದರಿಂದ ಸಲ್ಮಾನ್ ಖಾನ್ ವಿರುದ್ಧ ಸೇಡು ತೀರಿಸಿಕೊಳ್ಳಲು ಆತ ಪ್ರತಿಜ್ಞೆ ಮಾಡಿದ್ದಾನೆ.

    Verbattle
    Verbattle
    Verbattle
    crime criminal case india News Salman Khan ಅಪರಾಧ ಸುದ್ದಿ ಉಗ್ರ ಕಾಲೇಜು ಕೊಲೆ ಚುನಾವಣೆ ವಿದ್ಯಾ ವಿದ್ಯಾರ್ಥಿ ಸರ್ಕಾರ ಹರಿಯಾಣ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ.
    Next Article ರಾಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆ – (ಎಂಎಸ್‌ಪಿ) ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PhillipMam ರಲ್ಲಿ ಕಾಲ್ತುಳಿತಕ್ಕೆ ಪ್ರತಾಪ್ ಸಿಂಹ ಕೊಟ್ಟ ಕಾರಣ ಕೇಳಿ.
    • Btvumoism ರಲ್ಲಿ ಕುಡಿದು ಮಾಡಿದ ರಂಪಾಟ.
    • JamesMes ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.