Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ
    ಕಲೆ

    ಸಾಹಿತಿ ಕಲಾವಿದರಿಂದ ಭರ್ಜರಿ ಲಾಬಿ

    vartha chakraBy vartha chakraಮೇ 23, 2023Updated:ಮೇ 23, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ, ಹೊಸದಾಗಿ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ನೇಮಕ ಮಾಡಲು ತೀರ್ಮಾನಿಸಿದ್ದು ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಬಾರಿ ಪೈಪೋಟಿ ಉಂಟಾಗಿದೆ.
    ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಾಟಕ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳ ನೇಮಕಾತಿ ಆದೇಶಗಳನ್ನು ರದ್ದುಪಡಿಸಲಾಗಿದೆ.
    ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಈ ಅಕಾಡೆಮಿ ಗಳಿಗೆ ಸಂಘ ಪರಿವಾರ ಮತ್ತು ಬಲಪಂಥೀಯ ವಿಚಾರಧಾರೆಯ ವ್ಯಕ್ತಿಗಳನ್ನು ನೇಮಕ ಮಾಡಲಾಗಿತ್ತು ಈ ಮೂಲಕ ಸಾಂಸ್ಕೃತಿಕ ಮತ್ತು ಸಾಹಿತ್ಯದ ಸಂಘಟನೆಗಳನ್ನು ಕೇಸರಿಕರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
    ಇಂತಹ ಆರೋಪಗಳ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರ ತಲೆಕೆಡಿಸಿಕೊಂಡಿರಲಿಲ್ಲ. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈ ಬಗ್ಗೆ ಕೇಳಿ ಬಂದ ಟೀಕೆಗಳಿಗೆ ಉತ್ತರ ನೀಡುವ ಗೋಜಿಗೂ ಹೋಗಿರಲಿಲ್ಲ. ಆದರೆ ಇವುಗಳಿಗೆ ನೇಮಕಗೊಂಡವರು ಮಾತ್ರ ತಮ್ಮ ನಿಲುವುಗಳನ್ನು ಬಲವಾಗಿ ಸಮರ್ಥಿಸಿದ್ದರು.
    ಇದೀಗ ನೂತನ ಸರ್ಕಾರ ಈ ಎಲ್ಲಾ ನೇಮಕಾತಿಗಳನ್ನು ರದ್ದುಪಡಿಸಿದೆ. ಈ ಬಗ್ಗೆ ಮೊದಲೇ ಸುಳಿವು ದೊರೆತಿದ್ಧ ಹಿನ್ನೆಲೆಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದ ಹಲವಾರು ಗಣ್ಯರು ಇವುಗಳ ನೇಮಕಕ್ಕಾಗಿ ತಮ್ಮದೇ ವಲಯದಲ್ಲಿ ಲಾಬಿ ಆರಂಭಿಸಿದ್ದಾರೆ.
    ವಿಶೇಷವೆಂದರೆ ಕಾಂಗ್ರೆಸ್ ವಿಚಾರಧಾರೆಯೊಂದಿಗೆ ನೇರವಾಗಿ ಗುರುತಿಸಿಕೊಂಡಿದ್ದ ಹಲವು ಸಾಹಿತಿಗಳು ಈ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರೆ, ಅಂದು ನಡೆದ ನೇಮಕಾತಿ ಮತ್ತು ಕೇಸರಿ ಕರಣ ಆರೋಪದ ಬಗ್ಗೆ ಯಾವುದೇ ಚಕಾರವೆತ್ತದೆ ಮೌನವಾಗಿದ್ದ ದೊಡ್ಡ ಸಂಖ್ಯೆಯ ಗಣ್ಯರು ಇದೀಗ ಈ ಸಂಸ್ಥೆಗಳಿಗೆ ನೇಮಕಗೊಳ್ಳಲು ಪೈಪೋಟಿ ನಡೆಸಿದ್ದಾರೆ.
    ಈಗಾಗಲೇ ಹಲವಾರು ಮಂದಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಸಚಿವರನ್ನು ಭೇಟಿ ಮಾಡಿ ತಮ್ಮ ವ್ಯಕ್ತಿಗತ ವಿವರಗಳ ದಾಖಲೆಗಳನ್ನು ನೀಡಿ ತಮಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ.
    ಇದಷ್ಟೇ ಅಲ್ಲದೆ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ , ದೇವನೂರು ಮಹಾದೇವ,ಕೆ.ಎಂ. ಮರುಳಸಿದ್ದಪ್ಪ ಸೇರಿದಂತೆ ಹಲವು ಖ್ಯಾತ ನಾಮರನ್ನು ಸಂಪರ್ಕಿಸಿ ತಮಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಉನ್ನತ ಹುದ್ದೆ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರಿಗೆ ಹಿರಿಯ ಸಾಹಿತಿಗಳಾದ ಬರಗೂರು ದೇವನೂರು ಮತ್ತು ಮರಳಸಿದ್ದಪ್ಪ ಅವರ ಬಗ್ಗೆ ವಿಶೇಷವಾದ ಗೌರವ ಮತ್ತು ಪ್ರೀತಿ ಇದೆ ಇವರು ಯಾರ ಹೆಸರನ್ನಾದರೂ ಶಿಫಾರಸು ಮಾಡಿದರೆ ಅದನ್ನು ಮರು ಮಾತಿಲ್ಲದೆ ಒಪ್ಪುತ್ತಾರೆ ಎಂಬ ಮಾತಿದೆ.
    ಹೀಗಾಗಿ ಬಿಕ್ಕಟ್ಟಿನ ಸಮಯದಲ್ಲಿ ಮೌನಕ್ಕೆ ಶರಣಾಗಿದ್ದ ಅನೇಕ ಮಂದಿ ಖ್ಯಾತ ಸಾಹಿತಿಗಳು ಲೇಖಕರು ಚಿತ್ರ ಕಲಾವಿದರು ಸಿನಿಮಾ ನಟರು ಸೇರಿದಂತೆ ಸಾಂಸ್ಕೃತಿಕ ಲೋಕದ ಗಣ್ಯರು ಇದೀಗ ಸರ್ಕಾರದಲ್ಲಿ ಯಾರ ಮಾತು ನಡೆಯುತ್ತದೆ ಎಂಬುದನ್ನು ಪರಿಶೀಲಿಸಿ, ಅವರಿಂದ ಶಿಫಾರಸು ಮಾಡಿಸಿಕೊಳ್ಳಲು ದುಂಬಾಲು ಬಿದ್ದಿದ್ದಾರೆ.
    ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರು ಈ ನೇಮಕಾತಿಯ ಸಮಯದಲ್ಲಿ ಡಾ. ಬರಗೂರು ರಾಮಚಂದ್ರಪ್ಪ ನೀಡಿರುವ ಸಾಂಸ್ಕೃತಿಕ ನೀತಿಯ ಶಿಫಾರಸುಗಳನ್ನು ಆಧರಿಸಿ ಅದಕ್ಕೆ ಅನುಗುಣವಾಗಿ ಮಾತ್ರ ನೇಮಕ ಮಾಡಬೇಕು ಶಿಫಾರಸು ಪತ್ರ ಲಾಭಿ ಮಾಡುವ ಸಾಂಸ್ಕೃತಿಕ ಲೋಕದ ಖ್ಯಾತ ನಾಮರಿಗೆ ಮನ್ನಣೆ ನೀಡಬಾರದು ಎಂಬ ತೀರ್ಮಾನ ಕೈಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ಸಾಹಿತ್ಯ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಐದು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ
    Next Article ಹೊಸ ಸರ್ಕಾರ ಕೊಡಲಿದೆಯ BJPಗೆ ಮರ್ಮಾಘಾತ?
    vartha chakra
    • Website

    Related Posts

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಸಿನಿಮಾ ನಟ ಪರಾರಿ !

    ಮೇ 22, 2025

    2 ಪ್ರತಿಕ್ರಿಯೆಗಳು

    1. Edwardpredy on ಮೇ 1, 2025 11:25 ಅಪರಾಹ್ನ

      ¡Hola expertos del azar !
      Activa tu bono de 100girosgratissindepositoespana y empieza hoy mismo. Gana premios sin poner dinero de tu bolsillo. Solo necesitas una cuenta activa.
      Recibe 100 euros gratis sin deposito al registrarte hoy – giros gratis españa.
      ¡Que tengas magníficas rondas inolvidables !

      Reply
    2. Dustinenviz on ಮೇ 10, 2025 5:22 ಅಪರಾಹ್ನ

      ¡Hola, usuarios de apuestas en línea !
      Los tГ©rminos y condiciones de los bonos sin depГіsito pueden incluir requisitos de apuesta.
      Los casinos ofrecen 10 euros gratis por registrarte, una excelente manera de comenzar sin riesgos. Explora una amplia variedad de juegos y encuentra tus favoritos. RegГ­strate hoy y aprovecha esta oferta exclusiva.
      Casino Ozwin regala 10 euros sin depГіsito – п»їhttps://www.youtube.com/watch?v=DvFWSMyjao4

      ¡Que tengas excelentes giros afortunados !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://glose.com ರಲ್ಲಿ ಸಿಟಿ ರವಿಯ ಕೊಳಕು ತೊಳೆಯಲು ಸಾಧ್ಯವಿಲ್ಲವಂತೆ.
    • Philliphig ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • build muscle steroid ರಲ್ಲಿ ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe