Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈಲು ಅಪಘಾತಕ್ಕೆ ಯತ್ನಿಸಿದ ಕೇಡಿಗಳು ಅರೆಸ್ಟ್ | Chamarajanagar-Mysuru express
    ಸುದ್ದಿ

    ರೈಲು ಅಪಘಾತಕ್ಕೆ ಯತ್ನಿಸಿದ ಕೇಡಿಗಳು ಅರೆಸ್ಟ್ | Chamarajanagar-Mysuru express

    vartha chakraBy vartha chakraನವೆಂಬರ್ 16, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ನ.16- ಚಾಮರಾಜನಗರದಿಂದ ಮೈಸೂರಿಗೆ ಬರುತ್ತಿದ್ದ ಎಕ್ಸ್​ಪ್ರೆಸ್ ರೈಲು ಗಾಡಿ (Chamarajanagar-Mysuru express) ಸಂ. 06275ರ ಲೋಕೋ ಪೈಲಟ್ (ಚಾಲಕ) ನಂಜನಗೂಡು ಮತ್ತು ಕಡಕೋಳ ರೈಲ್ವೆ ನಿಲ್ದಾಣಗಳ ನಡುವಿನ ಹಳಿಯಲ್ಲಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.
    ರೈಲ್ವೆ ಇಂಜಿನ್​ನ ಚಾಲಕನ ತ್ವರಿತ ಪ್ರತಿಕ್ರಿಯೆಯಿಂದಾಗಿ ಸಾವಿರಾರು ಪ್ರಯಾಣಿಕರ ಜೀವ ಉಳಿದಿದ್ದು, ದುರುದ್ದೇಶಪೂರಿತ ರೈಲು ಅವಘಡದ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರೈಲ್ವೆ ಎಸ್ ಪಿ ಡಾ.ಸೌಮ್ಯಲತಾ ಅವರು ತಿಳಿಸಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ಒಡಿಶಾ ಮೂಲದ ಸೋಮಯ್ ಮರಾಂಡಿ (22), ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂಬ ಮೂವರು ಆರೋಪಿಗಳನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಬಂಧಿಸಿದ್ದಾರೆ. ಈ ಮೂವರು ಉದ್ದೇಶಪೂರ್ವಕವಾಗಿ ಕಿಲೋ ಮೀಟರ್ ನಂ. 19/200-300 ರಲ್ಲಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ ಮತ್ತು ಮರದ ದಿಮ್ಮಿಗಳನ್ನು ಇರಿಸಿದ್ದರು. ಇದರಿಂದಾಗಿ ರೈಲು ಗಾಡಿ ಸಂ. 06275 ಅನ್ನು ತುರ್ತಾಗಿ ನಿಲ್ಲಿಸಬೇಕಾಯಿತು.

    ಮಾಹಿತಿ ಪಡೆದ ಮೈಸೂರಿನ ರೈಲ್ವೆ ಸಂರಕ್ಷಣಾ ದಳದ (ಆರ್‌ಪಿಎಫ್) ಸಹಾಯಕ ರಕ್ಷಣಾ ಆಯುಕ್ತರಾದ ಎಂ.ಎನ್.ಎ.ಖಾನ್, ಪೋಸ್ಟ್ ಕಮಾಂಡರ್​ ಆದ ಕೆ.ವಿ. ವೆಂಕಟೇಶ ಮತ್ತು ಅವರ ತಂಡ, ಆರ್‌ಪಿಎಫ್​ನ ಶ್ವಾನದಳ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತು. ಒಡಿಶಾದ ಮಯೂರ್‌ಬಂಜ್​ನ ಬಂಗಿರಿಪೋಸಿದ ಜಲ್ದಿಹಾ ಮೂಲದ ಸೋಮಯ್ ಮರಾಂಡಿ ಎಂಬಾತ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ, ತನ್ನ ಸಹಚರರೊಂದಿಗೆ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.
    ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ಸರ್ಕಾರಿ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ನ.13, 2023 ರಂದು ರೈಲ್ವೆ ಕಾಯಿದೆ-1989 ರ ಅನ್ವಯ 150(1)(ಎ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆಯು ನಡೆಯುತ್ತಿದ್ದು, ಜೀವಾವಧಿವರೆಗಿನ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ.

    ಘಟನೆಯ ಕಾರಣಕ್ಕಾಗಿ ರೈಲು ಸಂಖ್ಯೆ 06275 ಅನ್ನು ಸ್ವಲ್ಪ ಸಮಯದವರೆಗೆ – 18.39 ರಿಂದ 18.45 ಗಂಟೆಗಳವರೆಗೆ – ತಡೆಹಿಡಿಯಲಾಯಿತು. ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀಮತಿ ಶಿಲ್ಪಿ ಅಗರ್ವಾಲ್ ಅವರು ಲೋಕೋಪೈಲಟ್​ ಅವರ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಕಾರ್ಯಾಚರಣೆ ಬಗ್ಗೆ ಶ್ಲಾಘಿಸಿ, ಪ್ರಯಾಣಿಕರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ವಿಚಾರಿಸಿಕೊಂಡು ಕೃತಜ್ಞತೆ ಸಲ್ಲಿಸಿದ್ದಾರೆ.
    ಹಳಿಗಳ ಮೇಲೆ ಇಂತಹ ಕೃತ್ಯದಲ್ಲಿ ತೊಡಗಿ ಪ್ರಯಾಣಿಕರಿಗೆ ದೊಡ್ಡ ಆಪತ್ತು ತರುವ ಮತ್ತು ಜೀವಹಾನಿ ಉಂಟುಮಾಡುವ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಂತಹ ಚಟುವಟಿಕೆಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ರೈಲ್ವೆ ಆಡಳಿತವು ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ.

    Verbattle
    Verbattle
    Verbattle
    Government Karnataka m Mysuru News Trending ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Next Article ಸಂಸದರ ಪುತ್ರನ ವಿರುದ್ಧ ಲವ್, ಸೆಕ್ಸ್, ದೋಖಾ Case | Bellary MP
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Aaozqo on ಫೆಬ್ರವರಿ 11, 2026 8:47 ಅಪರಾಹ್ನ

      betmgm NH betmgm-play betmgm ND

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_qtKr ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • Tracymix ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • LinwoodGah ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.