Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    ಮಾಹಿತಿ

    ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ

    vartha chakraBy vartha chakraಅಕ್ಟೋಬರ್ 21, 2024Updated:ಅಕ್ಟೋಬರ್ 23, 202429 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರಸ್ತುತ ಎಲ್ಲ ಕಡೆಯಲ್ಲೂ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಬಿಟ್ಟು ಬಿಡದೇ ಕಾಡುತ್ತಿರುವ ಮಳೆಯಿಂದ ಜನರು ಹೊರಗೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಸೊಳ್ಳೆಗಳಿಂದ ಕಾಡುವ ರೋಗಗಳ ಸಮಸ್ಯೆ ಹೆಚ್ಚು. ಮನೆ ಸುತ್ತಮುತ್ತ ಸ್ವಚ್ಛವಿಲ್ಲದಿದ್ದರೆ, ಅಥವಾ ನೀರು ನಿಂತರೆ ಸೊಳ್ಳೆಗಳ ಕಾಟ ತಪ್ಪಿದ್ದಲ್ಲ. ಇದರಿಂದಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಅಪಾಯವೂ ಹೆಚ್ಚುತ್ತದೆ. ಇತ್ತೀಚೆಗೆ ಡೆಂಗ್ಯೂ ಕಾಯಿಲೆಗೆ ಸಂಬಂಧಿಸಿದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.

    ದೊಡ್ಡವರಿಗೆ ಹೋಲಿಸಿದರೆ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ಅವರಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಹೆಚ್ಚು. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆಗಳು ಹೆಚ್ಚು ಅಪಾಯಕಾರಿ ಮತ್ತು ಮಾರಣಾಂತಿಕವಾಗಿರಲೂಬಹುದು. ಹೀಗಾಗಿ ಡೆಂಗ್ಯೂ ತಡೆಗಟ್ಟಲು ಮಕ್ಕಳ ಬಗ್ಗೆ ವಿಶೇಷ ಕಾಳಜಿಯ ಅಗತ್ಯವಿದೆ.ಮಳೆ ಹಾಗೂ ಚಳಿಗಾಲದಲ್ಲಿ ಹೆಚ್ಚು ಎಚ್ಚರ ವಹಿಸಬೇಕಾಗುತ್ತದೆ. ಮಕ್ಕಳನ್ನು ಈ ಸೋಂಕುಗಳಿಂದ ರಕ್ಷಿಸಬೇಕಾಗಿದೆ.  ಡೆಂಗ್ಯೂ ಸೋಂಕಿನ ಹರಡುವಿಕೆಯಿಂದ ಮಕ್ಕಳನ್ನು ರಕ್ಷಿಸಲು ಏನು ಮಾಡಬಹುದು ಎಂಬುದನ್ನು ನೋಡೋಣ.

    ಮನೆ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು

    ಡೆಂಗ್ಯೂ ರೋಗ ಹರಡುವ ಸೊಳ್ಳೆಗಳು ನಿಂತ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತವೆ. ಹೀಗಾಗಿ ಮನೆ ಸುತ್ತಮುತ್ತ ಸ್ವಚ್ಛತೆ ಮುಖ್ಯ. ಎಲ್ಲಿಯಾದರೂ ಮಳೆನೀರು ಸಂಗ್ರಹವಾದರೆ, ಡೆಂಗ್ಯೂ ಸೊಳ್ಳೆಗಳು ಅದರಲ್ಲಿ ಸಂತಾನೋತ್ಪತ್ತಿ ಮಾಡಬಹುದು. ಹೀಗಾಗಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಕಾಲಕಾಲಕ್ಕೆ ಕೀಟನಾಶಕ ಸಿಂಪಡಿಸಬೇಕು. ಮನೆಯ ಶುಚಿತ್ವದ ಬಗ್ಗೆಯೂ ಕಾಳಜಿ ವಹಿಸಬೇಕು. ಸಂಜೆ ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚಬೇಕು.

    ಮಕ್ಕಳಿಗೆ ಪೂರ್ಣ ತೋಳಿನ ಬಟ್ಟೆ ಧರಿಸಿ

    ಡೆಂಗ್ಯೂ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಹೆಚ್ಚು ಸಕ್ರಿಯವಾಗಿರುತ್ತವೆ. ಹೀಗಾಗಿ ಮಕ್ಕಳು ಎಲ್ಲಾ ಸಮಯದಲ್ಲೂ ಪೂರ್ಣ ತೋಳುಗಳ ಬಟ್ಟೆ ಧರಿಸಬೇಕು. ಮನೆಯ ಹೊರಗೆ ಆಟವಾಡಲು ಹೋಗುವಾಗ ಅಥವಾ ಶಾಲೆಗೆ ಹೋಗುವಾಗಲೂ ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸಿದರೆ ಉತ್ತಮ. ಮತ್ತು ಇಂತಹ ಸಮಯದಲ್ಲಿ ಹೊರಗಿನ ಆಟಗಳಿಗೆ ಬ್ರೆಕ್ ಹಾಕಿ ಒಳಾಂಗಣ ಆಟಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟರೆ ಇನ್ನು ಉತ್ತಮ.

    ಸೊಳ್ಳೆ ಪರದೆ ಬಳಸಿ

    ಮಕ್ಕಳು ಮಲಗಿರುವಾಗ ಸೊಳ್ಳೆಗಳ ದಾಳಿ ಮಾಡುವುದು ಹೆಚ್ಚು. ಹೀಗಾಗಿ ಮಲಗುವಾಗ ಸೊಳ್ಳೆಗಳ ಭಯದಿಂದ ಮಕ್ಕಳನ್ನು ರಕ್ಷಿಸಲು ಸೊಳ್ಳೆ ಪರದೆ ಬಳಸಿ. ತೆರೆದ ಸ್ಥಳಗಳಲ್ಲಿ ಮಕ್ಕಳು ಮಲಗುವುದು ಒಳ್ಳೆಯದಲ್ಲ. ಕೋಣೆಯಲ್ಲಿ ಸೊಳ್ಳೆ ನಿವಾರಕ ಕಾಯಿಲ್‌ಗಳು ಅಥವಾ ಬ್ಯಾಟ್ ಕೂಡಾ ಬಳಸಬಹುದು. ಆರೋಗ್ಯದ ದೃಷ್ಟಿಯಿಂದ ಅವುಗಳು ಅಷ್ಟು ಸುರಕ್ಷಿತವಲ್ಲ. ಹೀಗಾಗಿ ಸೊಳ್ಳೆ ಪರದೆಗಳನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ.

    ರೋಗನಿರೋಧಕ ಶಕ್ತಿ ಹೆಚ್ಚಿಸಿ

    ರೋಗ ನಿರೋಧಕ ಶಕ್ತಿ ದುರ್ಬಲವಾಗಿರುವ ಮಕ್ಕಳಿಗೆ ಡೆಂಗ್ಯೂ ಬರುವ ಅಪಾಯ ಹೆಚ್ಚು. ಹೀಗಾಗಿ ಮಕ್ಕಳ ರೋಗನಿರೋಧಕ ಶಕ್ತಿಯ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಮಕ್ಕಳ ಆಹಾರದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಆಹಾರವಿರಲಿ. ಹಣ್ಣುಗಳು, ಹಸಿರು ತರಕಾರಿಗಳನ್ನು ತಿನ್ನಲು ಮಕ್ಕಳಿಗೆ ನೀಡಿ. ಕಿತ್ತಳೆ, ಕಿವಿ, ನಿಂಬೆ, ಸ್ಟ್ರಾಬೆರಿ, ಟೊಮೆಟೊ ಇತ್ಯಾದಿಗಳಲ್ಲಿ ಸಾಕಷ್ಟು ಖನಿಜಗಳು ಮತ್ತು ವಿಟಮಿನ್ ಸಿ ಇದ್ದು, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

    ವೈಯಕ್ತಿಕ ಸ್ವಚ್ಛತೆ ಬಗ್ಗೆ ಗಮನವಿರಲಿ

    ಸೊಳ್ಳೆಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಮಕ್ಕಳನ್ನು ರಕ್ಷಿಸಲು ಅವರ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯ. ಆಹಾರ ಪದಾರ್ಥಗಳನ್ನು ಸೇವಿಸುವ ಮೊದಲು ಕೈಗಳನ್ನು ತೊಳೆಯುವಂತೆ ಮಕ್ಕಳಿಗೆ ತಿಳಿಸಿ. ಕೈ ಮತ್ತು ಕಾಲುಗಳನ್ನು ಚೆನ್ನಾಗಿ ತೊಳೆಯುವ ಅಭ್ಯಾಸವನ್ನು ಮಾಡಿಕೊಳ್ಳಿ. ವೈಯಕ್ತಿಕ ಸ್ವಚ್ಛತೆಯನ್ನು ಅನುರಿಸುವಂತೆ ಗಮನ ಹರಿಸಿ. ಹಣ್ಣು ತರಕಾರಿಗಳನ್ನು ತೊಳೆದು ಸೇವಿಸುವುದು ಉತ್ತಮ.

    Dengue ಆರೋಗ್ಯ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಹ್ಲಾದ ಜೋಶಿ ಸೋದರ ಬಂಧನ.
    Next Article ಅಪಘಾತದಲ್ಲಿ ಮೂರು ನಿಮಿಷಕ್ಕೊಂದು ಸಾವು.
    vartha chakra
    • Website

    Related Posts

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    ಅಕ್ಟೋಬರ್ 4, 2025

    ದಿನೇಶ್ ಗುಂಡೂರಾವ್ ಗೆ ಲೋಕಾಯುಕ್ತ ನೋಟಿಸ್.

    ಸೆಪ್ಟೆಂಬರ್ 17, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bandar casino online ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • купить шишки ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JeremyPah ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe