Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»Trending»B-Tech ಪದವೀಧರರ ಐನಾತಿ ವಂಚನೆ
    Trending

    B-Tech ಪದವೀಧರರ ಐನಾತಿ ವಂಚನೆ

    vartha chakraBy vartha chakraಸೆಪ್ಟೆಂಬರ್ 12, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಸೆ.12 – ರಿವಾರ್ಡ್ ಪಾಯಿಂಟ್ ವೆಬ್ ಸೈಟ್ ನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ ಮೊತ್ತದ ಚಿನ್ನ ಬೆಳ್ಳಿಯನ್ನು ಖರೀದಿಸಿದ ಅಂಧ್ರದ ಚಿತ್ತೂರು ಮೂಲಕ ಖತರ್ನಾಕ್ ಬಿಟೆಕ್ ಪದವೀಧರರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಆಗ್ನೇಯ ವೀಭಾಗದ ಸಿಇಎನ್ ಪೊಲೀಸರು 4 ಕೋಟಿ 16 ಲಕ್ಷ 63 ಸಾವಿರ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.
    ಆಂಧ್ರಪ್ರದೇಶದ ಐಐಐಟಿ ಓಂಗೋಲ್ ನಲ್ಲಿ ಬಿಟೆಕ್ ಪದವಿ ಪಡೆದಿದ್ದ ಲಕ್ಷ್ಮೀಪತಿ ಬಂಧಿತ ಆರೋಪಿಯಾಗಿದ್ದು, ಆತನಿಂದ 11.13ಲಕ್ಷ ನಗದು,3.40ಕೋಟಿ ಮೌಲ್ಯದ 5.269 ಕೆಜಿ ಚಿನ್ನ,21.80 ಲಕ್ಷ ಮೌಲ್ಯದ 27.250ಕೆಜಿ ಬೆಳ್ಳಿ,7 ಬೈಕ್ ಗಳು,ಫ್ರೀಜ್ ಆದ 26 ಲಕ್ಷ ಸೇರಿ 4 ಕೋಟಿ 16 ಲಕ್ಷ 63 ಸಾವಿರ ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಲಾಗಿದೆ.

    ಓದಿದ್ದು, ಬಿಟೆಕ್‌ (B-Tech) ಆಗಿದ್ದರೂ ಸೈಬರ್‌ ಹ್ಯಾಕ್‌ ಕೆಲಸ ಮಾಡಿ ಕೋಟಿಗಟ್ಟಲೇ ಗಳಿಸಿದ್ದ ಬಂಧಿತ ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ರಿವಾರ್ಡ್ ಪಾಯಿಂಟ್ ವೆಬ್ ಸೈಟ್ ಹ್ಯಾಕ್ ಮಾಡುತ್ತಿದ್ದ ಆರೋಪಿಯು, ವಿವಿಧ ಕಂಪನಿಗಳಿಂದ ತಮ್ಮ ಗ್ರಾಹಕರಿಗೆ ಕೊಡುವ ಗಿಫ್ಟ್ ವೋಚರ್‌ಗಳನ್ನ ಹ್ಯಾಕ್ ಮಾಡಿ, ಅದರ ಲಾಭವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ.
    ಆರೋಪಿಯು ಇಲ್ಲಿಯವರೆಗೆ ರಿವಾರ್ಡ್ಸ್ 360 ವೆಬ್ ಸೈಟ್ ಹ್ಯಾಕ್ ಮಾಡಿ, ಗ್ರಾಹಕರಿಗೆ ಕೊಡುತ್ತಿದ್ದ ರಿವಾರ್ಡ್‌ ಗಿಫ್ಟ್‌ ಓಚರ್‌ಗಳನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದನು.

    ಈ ಬಗ್ಗೆ ರಿವಾರ್ಡ್ 360 ಕಂಪನಿ ನಿರ್ದೇಶಕರಿಂದ ಆಗ್ನೇಯ ವೀಭಾಗದ ಸಿಇಎನ್ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.ದೂರನ್ನು ಗಂಭೀರವಾಗಿ ಪರಿಗಣಿಸಿದ ಡಿಸಿಪಿ ಚಂದ್ರಶೇಖರ ಬಾಬಾ ಅವರು ರಚಿಸಿದ್ದ ವಿಶೇಷ ತಂಡ ಕಾರ್ಯಾಚರಣೆ ಕೈಗೊಂಡಾಗ ಆಂಧ್ರ ಮೂಲದ ವ್ಯಕ್ತಿಯಿಂದ ಕೃತ್ಯ ನಡೆಸಿದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.
    ಇದರ ಬೆನ್ನಲ್ಲೇ ಆರೋಪಿ ಲಕ್ಷ್ಮೀಪತಿಯನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಹ್ಯಾಕ್ ಮಾಡಿ ಬಂದಿದ್ದ ಎಲ್ಲ ಚಿನ್ನ, ಬೆಳ್ಳಿ, ಹಣವನ್ನ ಎಲ್ಲಿಯೂ ಖರ್ಚು ಮಾಡದೇ ಹಾಗೂ ಬೇರೆಯವರಿಗೂ ಹಂಚಿಕೊಳ್ಳದೇ ಎಲ್ಲವನ್ನು ತನ್ನ ಮನೆಯಲ್ಲೆ ಇಟ್ಟುಕೊಂಡಿದ್ದನು.
    ಆರೋಪಿಯ ಸೈಬರ್‌ ವಂಚನೆಯ ಬಗ್ಗೆ ಆಗ್ನೇಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಆದ ಬೆನ್ನಲ್ಲಿಯೇ ಸೈಬರ್‌ ಹ್ಯಾಕ್‌ ಮೂಲಕ ತಾನು ಪಡೆದುಕೊಂಡಿದ್ದ ಎಲ್ಲ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಆರೋಪಿ ಲಕ್ಷ್ಮೀಪತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರೆಸಿದ್ದಾರೆ ಎಂದು ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ ಡಿಸಿಪಿ ಚಂದ್ರಶೇಖರ ಬಾಬಾ ಅವರಿದ್ದರು.

    Bangalore education Government Karnataka News Tech ಚಿನ್ನ ಬೈಕ್
    Share. Facebook Twitter Pinterest LinkedIn Tumblr Email
    Previous ArticleKenyan ಮಹಿಳೆ ಒಳ ಉಡುಪಿನಲ್ಲಿತ್ತು 12ಕೋಟಿ ಮೌಲ್ಯದ ಡ್ರಗ್ಸ್
    Next Article 34 Drug Peddler ಗಳ ಬಂಧನ
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe