Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bankಗೆ ವಂಚಿಸಿದವ 20 ವರ್ಷದ ನಂತರ ಸಿಕ್ಕಿ ಬಿದ್ದ
    Trending

    Bankಗೆ ವಂಚಿಸಿದವ 20 ವರ್ಷದ ನಂತರ ಸಿಕ್ಕಿ ಬಿದ್ದ

    vartha chakraBy vartha chakraಆಗಷ್ಟ್ 6, 202431 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ, ಆ.6-ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧ ಬರೋಬರಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಅಪರೇಟರ್ ನನ್ನು ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆರೋಪಿಯಾಗಿರುವ ವಿ ಛಲಪತಿ ರಾವ್ ತನ್ನ ಗುರುತು, ಸ್ಥಳವನ್ನು ಮರೆಮಾಚಿ ಜೀವನ ನಡೆಸುತ್ತಿದ್ದ, ಕಂಪ್ಯೂಟರ್​ ಆಪರೇಟರ್​ನಿಂದ ಹಿಡಿದು ಸ್ವಾಮೀಜಿಯವರೆಗೂ ನಾನಾ ವೇಷ ಧರಿಸಿದ್ದರೂ ಸಿಬಿಐ ಅಧಿಕಾರಿಗಳು ಕೊನೆಗೂ ಆತನನ್ನು ಬಂಧಿಸಿದ್ದಾರೆ.
    ಆರೋಪಿಯು 2002ರಲ್ಲಿ ಹೈದಾರಾಬಾದ್​ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಚಂದುಲಾಲ್ ಬಿರಾದಾಲ್ ಶಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಬ್ಯಾಂಕ್​ಗೆ 50 ಲಕ್ಷ ರೂ. ವಂಚಿಸಿದ್ದರು.
    2006ರಲ್ಲಿ ಸಿಬಿಐ ಎರಡು ಚಾರ್ಜ್​ಶೀಟ್​ಗಳನ್ನು ಸಲ್ಲಿಸಿತ್ತು, ಪ್ರಕರಣದಲ್ಲಿ ಆರೋಪಿಯಾಗಿರುವ ಛಲಪತಿ ಪತ್ನಿ ಕಾಪಾಟಿಪುರ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
    ಏಳು ವರ್ಷಗಳ ನಂತರ ಅವರು ಪತಿ ಮೃತಪಟ್ಟಿದ್ದಾರೆಂದು ಹೇಳಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸಿದ್ದರು. ಹೈದರಾಬಾದ್ ನ್ಯಾಯಾಲಯ ಅವರ ಪರವಾಗಿ ಆದೇಶವನ್ನು ನೀಡಿತ್ತು. ತನ್ನ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತೆಲಂಗಾಣ ಹೈಕೋರ್ಟ್​ನಿಂದ ತಡೆಯಾಜ್ಞೆ ಪಡೆದಿದ್ದರು.
    2013ರಲ್ಲಿ ಸಿಬಿಐ ನ್ಯಾಯಾಲಯ ಛಲಪತಿಯನ್ನು ಘೋಷಿತ ಅಪರಾಧಿ ಎಂದು ಘೋಷಿಸಿತು. ಛಲಪತಿ ಸೇಲಂಗೆ ಓಡಿಹೋಗಿ ತನ್ನ ಹೆಸರನ್ನು ಎಂ ವಿನೀತ್ ಕುಮಾರ್ ಎಂದು ಬದಲಾಯಿಸಿ, ಆಧಾರ್ ಸಂಖ್ಯೆಯನ್ನು ಪಡೆದುಕೊಂಡರು. 2007ರಲ್ಲಿ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ, ಆದರೆ ಮೊದಲ ಮಗನ ಜತೆ ಸಂಪರ್ಕವನ್ನು ಹೊಂದಿದ್ದ ಎಂದು ಎರಡನೇ ಪತ್ನಿ ತಿಳಿಸಿದ್ದಾರೆ.
    ಸಿಬಿಐ ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಿದಾಗ, ಚಲಪತಿ ಅವರು 2014 ರಲ್ಲಿ ಸೇಲಂನಿಂದ ಪಲಾಯನ ಮಾಡಿದರು ಮತ್ತು ಭೋಪಾಲ್​ಗೆ ತೆರಳಿ ಅಲ್ಲಿ ಸಾಲ ವಸೂಲಾತಿ ಏಜೆಂಟ್ ಆಗಿ ಕೆಲಸ ಮಾಡಿದರು. ಉತ್ತರಾಖಂಡದ ರುದ್ರಪುರಕ್ಕೆ ಶಾಲೆಯೊಂದರಲ್ಲಿ ಕೆಲಸ ಮಾಡಲು ಶುರುಮಾಡಿದರು. 2016 ರಲ್ಲಿ ಔರಂಗಾಬಾದ್‌ನ ಆಶ್ರಮಕ್ಕೆ ತೆರಳಿದರು, ಅಲ್ಲಿ ಅವರು ತಮ್ಮ ಹೆಸರನ್ನು ಸ್ವಾಮಿ ವಿಧಿತಾತ್ಮಾನಂದ ತೀರ್ಥ ಎಂದು ಬದಲಾಯಿಸಿಕೊಂಡರು ಮತ್ತು ಮತ್ತೊಂದು ಆಧಾರ್ ಕಾರ್ಡ್ ಪಡೆದರು.
    2021 ರಲ್ಲಿ ಪಲಾಯನ ಮಾಡುವ ಮೊದಲು ಅವರು ಆಶ್ರಮಕ್ಕೆ 70 ಲಕ್ಷ ರೂಪಾಯಿಗಳನ್ನು ವಂಚಿಸಿದ್ದರು ಎಂಬುದು ನಂತರ ಗೊತ್ತಾಗಿದೆ. ತನಿಖೆಯ ವೇಳೆ, ಸಿಬಿಐ ತಮಿಳುನಾಡಿನ ತಿರುನಲ್ವೇಲಿಯ ನರಸಿಂಗನಲ್ಲೂರು ಗ್ರಾಮದಲ್ಲಿ ಅವರನ್ನು ಪತ್ತೆ ಮಾಡಿದೆ. ಲಪತಿ ಅವರನ್ನು ಹೈದರಾಬಾದ್‌ನಲ್ಲಿರುವ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆಗಸ್ಟ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Trending Varthachakra ಅಪರಾಧ ಸುದ್ದಿ ಕಳ್ಳತನ ನ್ಯಾಯ ಮದುವೆ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ
    Next Article ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • car title loan in toronto ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Gordondarce ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Bouclier Apextrail Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe