Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BBMP‌ ಯಲ್ಲಿ ಲಂಚವತಾರ – ಮುಖ್ಯ ಆಯುಕ್ತರಿಗೆ ಕಪ್ಪ ಕೊಡಬೇಕಂತೆ?
    ಬೆಂಗಳೂರು

    BBMP‌ ಯಲ್ಲಿ ಲಂಚವತಾರ – ಮುಖ್ಯ ಆಯುಕ್ತರಿಗೆ ಕಪ್ಪ ಕೊಡಬೇಕಂತೆ?

    vartha chakraBy vartha chakraಅಕ್ಟೋಬರ್ 15, 202312 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.14 – ಲೋಕೋಪಯೋಗಿ ಇಲಾಖೆ ಹೊರತುಪಡಿಸಿ ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಲ್‌ ಪಾವತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಗುತ್ತಿಗೆದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ.
    ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನೇತೃತ್ವದ ನಿಯೋಗವು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಲ್ ಪಾವತಿಗಾಗಿ ದೊಡ್ಡ ಪ್ರಮಾಣದ ಲಂಚ ಕೊಡಬೇಕಾಗಿದೆ.ತಕ್ಷಣ ಅದಕ್ಕೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿತು.

    ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳ ದೊಡ್ಡ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಅದನ್ನು ಪರಿಹರಿಸುವಂತೆ ಕೋರಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರದ ವಿಷಯ ಪ್ರಸ್ತಾಪಿಸಿದ್ದು, ಕೆಲವು ಇಲಾಖೆಗಳಲ್ಲಿ ಬಾಕಿ ಬಿಲ್‌ ಪಾವತಿಗೆ ಭಾರಿ ಮೊತ್ತದ ಕಮಿಷನ್‌ಗೆ ಬೇಡಿಕೆ ಇಡಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ದೂರಿದ್ದಾರೆ.

    ಜಾರಕಿಹೊಳಿ ಬಿಗಿ:
    ಈ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ. ಕೆಂಪಣ್ಣ, ʼಲೋಕೋಪಯೋಗಿ ಇಲಾಖೆಯಲ್ಲಿ ಭ್ರಷ್ಟಾಚಾರ ತುಸು ನಿಯಂತ್ರಣದಲ್ಲಿದೆ. ಸಚಿವ ಸತೀಶ್‌ ಜಾರಕಿಹೊಳಿ ಅವರು ಬಿಗಿ ಕ್ರಮಗಳನ್ನು ಕೈಗೊಂಡಿರುವುದರಿಂದ ಇಲಾಖೆಯ ಮೇಲಿನ ಹಂತದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಬರುತ್ತಿದೆ ಎಂದು ಹೇಳಿದರು
    ಬಿಲ್ ಬಾಕಿ ಪಾವತಿ ಸೇರಿದಂತೆ ಯಾವುದೇ ವಿಷಯದಲ್ಲೂ ಲೋಕೋಪಯೋಗಿ ಇಲಾಖೆಯಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಿಂದಿನ ದಿನಗಳಿಗೆ ಹೋಲಿಸಿದರೆ ಈ ಇಲಾಖೆಯಲ್ಲಿ ಭ್ರಷ್ಟಾಚಾರದ ಪ್ರಮಾಣ ಕಡಿಮೆಯಾಗಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು ಎಂದು ತಿಳಿಸಿದರು. ಇದನ್ನು ಹೊರತುಪಡಿಸಿ ಉಳಿದ ಬಹುತೇಕ ಇಲಾಖೆಗಳಲ್ಲಿ ಬಿಲ್‌ ಪಾವತಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹೆಚ್ಚಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇವೆʼ ಎಂದರು.

    ಆಯುಕ್ತರೇ ಕಾರಣ:
    ಬಿಬಿಎಂಪಿಯಲ್ಲಿ ಬಾಕಿ ಬಿಲ್‌ ಪಾವತಿಯಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಪ್ರಧಾನ ಎಂಜಿನಿಯರ್‌ ಇಬ್ಬರೂ ಇದಕ್ಕೆ ಪ್ರಮುಖ ಕಾರಣ. ಮೂರು ವರ್ಷಗಳ ಹಳೆಯ ಬಿಲ್‌ಗಳ ಪಾವತಿಗೆ ಭಾರಿ ಮೊತ್ತದ ಕಮಿಷನ್‌ ಕೇಳಲಾಗುತ್ತಿದೆ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು ಎಂದು ತಿಳಿಸಿದರು.
    ಲಂಚಾವತರಾದಲ್ಲಿ ನಿರತರಾಗಿರುವ ಕೆಲವು ಅಧಿಕಾರಿಗಳ ಹೆಸರು ಸಮೇತ ದಾಖಲೆ ಜೊತೆಗೆ ಮುಖ್ಯಮಂತ್ರಿಯವರಿಗೆ ದೂರು ಹೇಳಿದ್ದೇವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಗುತ್ತಿಗೆದಾರರ ಸಂಘವು ಹೋರಾಟ ಆರಂಭಿಸಲಿದೆ ಎಂಬುದನ್ನೂ ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇವೆ’ ಎಂದು ಹೇಳಿದರು.

    ಚರ್ಚಿಸಿ ಕ್ರಮ:
    ನಮ್ಮ ಎಲ್ಲಾ ಮನವಿ ಆಲಿಸಿ,ದಾಖಲೆಗಳನ್ನು ಪಡೆದ ಮುಖ್ಯಮಂತ್ರಿಗಳು ಈ ವಿಷಯವಾಗಿ
    ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಚರ್ಚಿಸಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹದಿನೈದು ದಿನಗಳೊಳಗೆ ಈ ಸಮಸ್ಯೆಗೆ ಪರಿಹಾರ ದೊರಕಿದ್ದರೆ ಹೋರಾಟ ಕೈಗೆತ್ತಿಕೊಳ್ಳಲಾಗುವುದು’ ಎಂದರು.
    ವಿವಿಧ ಇಲಾಖೆಗಳಿಂಧ ₹ 20 ಸಾವಿರ ಕೋಟಿಯಷ್ಟು ಬಿಲ್‌ ಪಾವತಿ ಬಾಕಿ ಇದೆ. ಶೇ 50ರಷ್ಟನ್ನಾದರೂ ತ್ವರಿತವಾಗಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಬಿಲ್‌ ಪಾವತಿಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore bbmp Karnataka m News Politics Trending ಲಂಚ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಐ.ಟಿ.ದಾಳಿಯಲ್ಲಿ ಸಿಕ್ಕ ಹಣ:ಇವರ ಕೊರಳಿಗೆ ಉರುಳು | IT Raid
    Next Article Social Mediaದಲ್ಲಿ ಸರ್ಕಾರದ ವಿರುದ್ಧ ಟ್ರೋಲ್
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kdtwei ರಲ್ಲಿ ಸಿ.ಟಿ.ರವಿ ಬಂಧನ.
    • Ayihst ರಲ್ಲಿ ಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi
    • Glennhof ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.