Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು PG ಗಳಿಗೆ ಮೂಗುದಾರ | BBMP
    Trending

    ಬೆಂಗಳೂರು PG ಗಳಿಗೆ ಮೂಗುದಾರ | BBMP

    vartha chakraBy vartha chakraನವೆಂಬರ್ 21, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.21 – ಮಹಾನಗರ‌ ಬೆಂಗಳೂರಿನ ಪಿ.ಜಿ. ಗಳಲ್ಲಿನ ಅಕ್ರಮಗಳು ಹಾಗೂ ಅವ್ಯವಸ್ಥೆಗಳಿಗೆ‌ ಕಡಿವಾಣ‌ ಹಾಕಲು ಬೆಂಗಳೂರು ಪೊಲೀಸ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಂದಾಗಿವೆ.
    ಅಕ್ರಮಗಳು‌ ಹಾಗೂ ಅವ್ಯವಸ್ಥೆ ಬಗ್ಗೆ ಪಿಜಿಯ ಅಕ್ಕ- ಪಕ್ಕದ ಮನೆಯವರಿಂದ ಬಿಬಿಎಂಪಿಗೆ ಬರುವ ದೂರುಗಳ ಹಿನ್ನೆಲೆಯಲ್ಲಿ ಬಿಬಿಎಂಪಿ ಪಿಜಿಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲು ಮುಂದಾಗಿದೆ.
    ಇದರ ಬೆನ್ನಲ್ಲೇ ನಗರದ ಪಿಜಿಗಳ ಅಂಕಿ ಅಂಶ ಕಲೆ ಹಾಕಲು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್  ಅವರು ಸಲಹೆ ನೀಡಿದ್ದಾರೆ.

    ಜೊತೆಗೆ ಪಿಜಿ,ಗಳಿಗೆ ವೆಬ್ ಪೋರ್ಟಲ್ ನೀಡಲಾಗಿದ್ದು ಅದಕ್ಕೆ ಪಿಜಿ ಮಾಲೀಕರು ಮಾಹಿತಿ ಅಪ್ಲೋಡ್ ಮಾಡಬಹುದು ಎಂದು ತಿಳಿಸಿದ್ದಾರೆ. ನಗರದಲ್ಲಿ ಸುಮಾರು 5 ಸಾವಿರ ಪಿಜಿ ಹಾಸ್ಟೆಲ್ ಗಳಿವೆ ಎಂದು ಸುದ್ದಿಗೋಷ್ಠಿಯಲ್ಲಿ  ಬಿ ದಯಾನಂದ್ ತಿಳಿಸಿದರು. ಪಿಜಿಗಳಲ್ಲಿ ಸುಮಾರು 4 ಲಕ್ಷ ಜನ ವಾಸವಾಗಿದ್ದಾರೆ. ಬೆಂಗಳೂರಿನ ಪೂರ್ವ, ಸೌತ್ ಈಸ್ಟ್, ವೈಟ್ ಫೀಲ್ಡ್ ಭಾಗದಲ್ಲಿ ಹೆಚ್ಚಾಗಿ ವಾಸವಾಗಿದ್ದಾರೆ. ಐಟಿ ಬಿಟಿ ಕಂಪನಿ ನೌಕರರು ಹೆಚ್ಚಾಗಿ ಪಿಜಿಗಳಲ್ಲಿ ವಾಸ ಮಾಡುತ್ತಿದ್ದಾರೆ ಪಿಜಿ ನಿವಾಸಿಗಳ ವಿವರ ಹೆಚ್ಚು ಗೊತ್ತಿಲ್ಲ. ಹೀಗಾಗಿ ಕಾನೂನಿನ ವಿಚಾರದಲ್ಲಿ ತೊಡಕುಗಳಾಗುತ್ತಿದೆ. ಪಿಜಿ, ಹಾಸ್ಟೆಲ್ ಗಳಿಗೆ ವೆಬ್ ಪೋರ್ಟಲ್ ಸಜೆಸ್ಟ್ ಮಾಡಿದ್ದೀವಿ. ಪಿಜಿ ಮಾಲೀಕರು ಇದಕ್ಕೆ ಮಾಹಿತಿ ಅಪ್ಲೋಡ್ ಮಾಡಬಹುದು. ಆದರೆ ಇದು ಕಡ್ಡಾಯವೇನಲ್ಲ. ಮಾಲೀಕರೇ ಸ್ವಯಂಪ್ರೇರಿತವಾಗಿ ಮಾಡಬಹುದು. ಮಾರತ್ತಹಳ್ಳಿಯ 167 ಪಿಜಿಗಳಲ್ಲಿ ಇದನ್ನ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಈ ಯೋಜನೆ ಈಗಾಗಲೇ ದೇಶದ ಹಲವಾರು ರಾಜ್ಯದಲ್ಲಿ ಇದೆ. ಇದರಿಂದ ಯಾರು ಬರಲಿದ್ದಾರೆ, ಯಾರು ಪಿಜಿಗಳಲ್ಲಿ ಇರಲಿದ್ದಾರೆ ಎಂಬ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.

    ಗೈಡ್ ಲೈನ್ ಬಿಡುಗಡೆ:
    ನಗರದಲ್ಲಿ ಬಿಬಿಎಂಪಿಯ ವಾಣಿಜ್ಯ ಪರವಾನಗಿ ಹಾಗೂ ಸುರಕ್ಷತೆಯ ನಿಯಮ ಉಲ್ಲಂಘಿಸಿ ಹಲವು ಪಿಜಿಗಳು ನಡೆಯುತ್ತಿವೆ. ಇದನ್ನು ಪರಿಶೀಲಿಸಲು ಹಾಗೂ ವಾಣಿಜ್ಯ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಲಾಗಿದೆ. ಆ ಬಳಿಕ ಮಾರ್ಗಸೂಚಿ ಹೊರಡಿಸಲಾಗುವುದು ಅಂತ ಬಿಬಿಎಂಪಿ‌ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
    ಮಾನವಸಂಪನ್ಮೂಲಗಳಿಗೆ ಅನುಗುಣವಾಗುವಂತ ರೀತಿಯಲ್ಲಿ ಪಿಜಿಯನ್ನ ನಿರ್ವಾಹಿಸುತ್ತಿಲ್ಲ. ದುಡ್ಡಿನ ಆಸೆಗೆ ನಿಯಮ‌ ಮೀರಿ ಒಂದು ರೂಂನಲ್ಲಿ ಹೆಚ್ಚಿನ ಜನರನ್ನು ಹಾಕಲಾಗುತ್ತಿದೆ. ಮೂಲ ಸೌಕರ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ. ಒಂದು ಪಿಜಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಶೌಚಾಲಯದ ವ್ಯವಸ್ಥೆ ಇಲ್ಲ. ಸ್ವಚ್ಚತೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ನಿಯಮ ಮೀರಿ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ಹೀಗೆ ಪಿಜಿಗಳಿರುವ ಏರಿಯಾಗಳಿಂದ ಸಾರ್ವಜನಿಕರಿಂದ ಸಾಕಷ್ಟು ಕಂಪ್ಲೇಂಟ್ ಬಂದಿವೆ. ಈ ನಿಟ್ಟಿನಲ್ಲಿ ಪಿಜಿಗಳಿಗೆ ಬಿಬಿಎಂಪಿಯಿಂದ ಹೊಸ ಗೈಡ್ ಲೈನ್ ರಿಲೀಸ್ ಮಾಡಲು ನಿರ್ಧಾರ ಕೈಗೊಂಡಿದ್ದು, ನಗರದಲ್ಲಿ ಬಿಬಿಎಂಪಿಯ ವಾಣಿಜ್ಯ ಪರವಾನಗಿ ಹಾಗೂ ಸುರಕ್ಷತೆಯ ನಿಯಮ ಉಲ್ಲಂಘಿಸಿ ಹಲವು ಪಿಜಿಗಳು ನಡೆಯುತ್ತಿವೆ. ಇದನ್ನು ಪರಿಶೀಲಿಸಲು ಹಾಗೂ ವಾಣಿಜ್ಯ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಲಾಗಿದೆ. ಆ ಬಳಿಕ ಮಾರ್ಗಸೂಚಿ ಹೊರಡಿಸಲಾಗುವುದು ಅಂತ ಬಿಬಿಎಂಪಿ‌ (BBMP) ಆಯುಕ್ತ ತುಷಾರ್ ಗಿರಿನಾಥ್ ಹೇಳುತ್ತಿದ್ದಾರೆ.

    Bangalore bbmp Government Karnataka m News ಕಲೆ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCricket Betting ಅಡ್ಡೆ ಮೇಲೆ ದಾಳಿ
    Next Article ಉಂಡೂ ಹೋದ ಕೊಂಡೂ ಹೋದ
    vartha chakra
    • Website

    Related Posts

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Vikiwkj ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Did Kamal Nath cause the defeat of Congress in MP?
    ಕಮಲ್ ನಾಥ್ ಹೇಗೆ ಕಾಂಗ್ರೆಸ್ ಸೋಲಿಸಿದರು ಗೊತ್ತಾ? #kannada
    Subscribe