Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತುಮಕೂರಿನ ಕೆರೆಗಳಿಗೆ ಬೆಂಗಳೂರಿನ ಕೊಳಚೆ ನೀರು | Tumkur
    Trending

    ತುಮಕೂರಿನ ಕೆರೆಗಳಿಗೆ ಬೆಂಗಳೂರಿನ ಕೊಳಚೆ ನೀರು | Tumkur

    vartha chakraBy vartha chakraಮಾರ್ಚ್ 3, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.03: ಬಯಲು ಸೀಮೆ ಜಿಲ್ಲೆಗಳ ಅಂತರ್ಜಲ ಅಭಿವೃದ್ದಿಗಾಗಿ ರಾಜ್ಯ ಸರ್ಕಾರ ಮತ್ತೊಂದು ಬೃಹತ್ ಯೋಜನೆ ರೂಪಿಸಿದೆ. ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರಿನ 70 ಕೆರೆಗಳಿಗೆ ಸಂಸ್ಕರಿತ ನೀರು ತುಂಬಿಸುವ ಯೋಜನೆ ಇದಾಗಿದೆ.
    ಮೊದಲ ಹಂತದಲ್ಲಿ 1081 ಕೋಟಿ ವೆಚ್ಚದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಬೆಂಗಳೂರು ನಗರದ ಕೊಳಚೆ ನೀರು ಸಂಸ್ಕರಿಸಿ ಹರಿಯಬಿಡಲಾಗಿತ್ತು.ಇದೀಗ ಮತ್ತೊಂದು ಹಂತದಲ್ಲಿ ರೂಪಿಸಿರುವ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ.

    ಈ ಬಗ್ಗರ ಮಾಹಿತಿ ನೀಡಿರುವ ಎಂದು ಸಣ್ಣ ನೀರಾವರಿ ಸಚಿವ ಎನ್‌ ಎಸ್‌ ಭೋಸರಾಜು,
    ವೃಷಾಭವತಿ ಕಣಿವೆಯ ಶುದ್ದೀಕರಿಸಿದ ನೀರನ್ನ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ವಿವಿಧ ಏತ ನೀರಾವರಿ ಯೋಜನೆಗಳ ಮೂಲಕ ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲ ಅಭಿವೃದ್ದಿಪಡಿಸುವ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
    ಈಗಾಗಲೆ ಕೆ.ಸಿ ವ್ಯಾಲಿ ಯೋಜನೆ, ಹೆಚ್‌.ಎನ್‌. ವ್ಯಾಲಿ ಯೋಜನೆ, ಆನೇಕಲ್‌ ಏತ ನೀರಾವರಿ ಮತ್ತು ಇತರೆ ಯೋಜನೆಗಳಿಂದ ಸುಮಾರು 860 ಎಂ.ಎಲ್‌.ಡಿ ರಷ್ಟು ಪ್ರತಿನಿತ್ಯ ಯಶಸ್ವಿಯಾಗಿ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಅಂತರ್ಜಲ ಮಟ್ಟ ಗಣನೀಯವಾಗಿ ಹೆಚ್ಚಿದ ಪರಿಣಾಮ, ಬೋರ್‌ ವೆಲ್‌, ಬಾವಿ ಮತ್ತು ಇತರೆ ನೀರಿನ ಮೂಲಗಳು ಪುನಶ್ಚೇತನಗೊಂಡಿವೆ.

    ಈ ಭಾಗದ ರೈತಾಪಿ ವರ್ಗದವರ ಆರ್ಥಿಕ ಮಟ್ಟ ಹೆಚ್ಚಳಕ್ಕೆ ಅನುವು ಮಾಡಿಕೊಟ್ಟಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೊಳಪಟ್ಟಿರುತ್ತದೆ ಎಂದಿದ್ದಾರೆ ಕಳೆದ ಕೆಲ ದಶಕಗಳಿಂದ ಬಯಲುಸೀಮೆ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸತತ ಮಳೆಯ ವೈಫಲ್ಯದಿಂದಾಗಿ ನದಿಗಳು, ಕೆರೆಗಳು, ಹಳ್ಳ ಕೊಳ್ಳಗಳು ನೀರಿಲ್ಲದೆ ಬರಡಾಗಿವೆ. ಈ ಭಾಗದ ರೈತಾಪಿ ವರ್ಗದವರು ಬೇರೆ ಯಾವುದೇ ನೀರಿನ ಮೂಲಗಳು ಇಲ್ಲದೇ ಕೊಳವೆ ಬಾವಿಗಳನ್ನು ಅವಲಂಬಿಸಿರುತ್ತಾರೆ. ಆದರೆ, ಅತಿಯಾದ ಅಂತರ್ಜಲ ಬಳಕೆಯಿಂದ ಅಂತರ್ಜಲ ಮಟ್ಟವು ಅಂಕಿ ಅಂಶಗಳ ಅನ್ವಯ ಸುಮಾರು 1000-1200 ಅಡಿಗಳಷ್ಟು ಬಹುತೇಕ ಕುಸಿದಿದೆ.

    ಈ ನಿಟ್ಟಿನಲ್ಲಿ ಅಂತರ್ಜಲ ವೃದ್ದಿಗಾಗಿ ಘನ ಸರ್ಕಾರವು ಬೆಂಗಳೂರು ನಗರದ ವೃಷಭಾವತಿ ವ್ಯಾಲಿ ಕಣಿವೆಯ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಸುಮಾರು 1081 ಕೋಟಿ ಮೊತ್ತದ ಮೊದಲನೇ ಹಂತದಲ್ಲಿ 70 ಕೆರೆಗಳಿಗೆ ನೀರನ್ನು ತುಂಬಿಸಲು ಯೋಜನೆಯನ್ನು ಕೈಗೆತ್ತಿಕೊಂಡಿದೆ. ಎರಡನೇ ಮತ್ತು ಮೂರನೇ ಹಂತದಲ್ಲಿ 189 ಕೆರೆಗಳನ್ನೊಳಗೊಂಡಂತೆ ಒಟ್ಟಾರೆಯಾಗಿ 259 ಕೆರೆಗಳಿಗೆ ಬೆಂಗಳೂರಿನಲ್ಲಿರುವ ರಾಜರಾಜೇಶ್ವರಿ ನಗರ ಬಿ.ಡಬ್ಲೂ.ಎಸ್‌.ಎಸ್‌.ಬಿ ನಾಯಂಡಹಳ್ಳಿ ತ್ಯಾಜ್ಯ ಸಂಸ್ಕರಣಾ ಘಟಕದಿಂದ 243 ಎಂ.ಎಲ್‌.ಡಿ, ಮೈಲಸಂದ್ರದ ತ್ಯಾಜ್ಯ ಸಂಸ್ಕರಣಾ ಘಟಕದಿಂದ 65 ಎಂ.ಎಲ್‌.ಡಿ ಒಟ್ಟಾರೆಯಾಗಿ 308 ಎಂ.ಎಲ್‌.ಡಿ ನೀರನ್ನ ಹರಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ ಎಂದು ವಿವರಿಸಿದ್ದಾರೆ.

    ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವೀತಿಯ ಹಂತದಲ್ಲಿ ಸಂಸ್ಕರಿಸಿದ 243 ಎಂ.ಎಲ್‌.ಡಿ ನೀರನ್ನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಇದಾಗಿದೆ. 15.06.2023 ರಂದು ನಡೆದ 2 ಸಚಿವ ಸಂಪುಟ ಸಭೆಯಲ್ಲೇ ಇದಕ್ಕೆ ಅನುಮೋದನೆ ನೀಡಲಾಗಿತ್ತು. 36 ತಿಂಗಳ ಅವಧಿಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು, 2 ಲಿಫ್ಟ್‌ಗಳ ಮೂಲಕ 70 ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಸದರಿ ಯೋಜನೆಯಿಂದ ಸಂಸ್ಕರಿಸಿದ ನೀರು ಮರುಬಳಕೆಗೆ ಅನುವು ಮಾಡಿಕೊಡುವದಲ್ಲದೆ, ಅಂತರ್ಜಲ ವೃದ್ದಿ ಮೊದಲ ಉದ್ದೇಶವಾಗಿದೆ. ತ್ಯಾಜ್ಯ ಕೊಳಚೇ ನೀರು ನೇರವಾಗಿ ಕೆರೆಗಳೀಗೆ-ನದಿ-ಕೊಳಗಳೀಗೆ ಹರಿಯವುದನ್ನ ತಡೆಗಟ್ಟುವ ಮೂಲಕ ಅವುಗಳ ಮಾಲಿನ್ಯವನ್ನು ನಿಯಂತ್ರಿಸಬಹುದಾಗಿದೆ ಎಂದು ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

    Verbattle
    Verbattle
    Verbattle
    Karnataka m News Politics tumkur ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಒಂಟಿ ತೋಳ ನಡೆಸಿದ ರಾಮೇಶ್ವರಂ ಕೆಫೆ ಸ್ಪೋಟ
    Next Article ಭಯದ ವಾತಾವರಣ ಸೃಷ್ಟಿಸಲು ಸ್ಪೋಟ ಪ್ರಕರಣ | Rameshwaram Cafe
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    1 ಟಿಪ್ಪಣಿ

    1. Hpulvi on ಫೆಬ್ರವರಿ 11, 2026 1:39 ಅಪರಾಹ್ನ

      betmgm Mississippi https://betmgm-play.com/ mgm sportsbook promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Tracymix ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • ทดลองเล่นสล็อต pg ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.