Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » SSLC ಮತ್ತು PUC ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ
    ರಾಜ್ಯ

    SSLC ಮತ್ತು PUC ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ

    vartha chakraBy vartha chakraಫೆಬ್ರವರಿ 26, 2023Updated:ಫೆಬ್ರವರಿ 28, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.26- ಹತ್ತನೆ ತರಗತಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ.
    ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ಸರಿಯಾಗಿ ತರಗತಿಗಳು ನಡೆದಿರಲಿಲ್ಲ ಈ ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿತ್ತು.
    ಇದೇ ರೀತಿಯ ಕೃಪಾಂಕವನ್ನು 2022-23ನೇ ಸಾಲಿನ ಮಾರ್ಚ್- ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೂ ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.
    ಎರಡು ವರ್ಷಗಳ ಕೋವಿಡ್ ಕಾರಣದಿಂದ ಕಲಿಕೆ ಮೇಲೆ ಉಂಟಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಹೊರಬಂದಿಲ್ಲ. ಕಲಿಕೆಯಲ್ಲಿ ಚೇತರಿಕೆಯನ್ನು ಕಂಡಿರದ ಕಾರಣ 2023ರಲ್ಲಿಯೂ ಕೃಪಾಂಕ ನೀಡಲು ನಿರ್ಧರಿಸಲಾಗಿದೆ. ಒಟ್ಟಾರೆ ಕನಿಷ್ಠ ಅಂಕ ಗಳಿಸುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕ ನೀಡಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ನಿರ್ಣಯಿಸಿದೆ.
    ಎಸ್‍ಎಸ್‍ಎಲ್‍ಸಿಯಲ್ಲಿ 6 ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದರೆ, ಉಳಿದ ಮೂರು ವಿಷಯಗಳಿಗೆ ಕನಿಷ್ಠ 1 ರಿಂದ ಗರಿಷ್ಠ 26 ಅಂಕಗಳವರೆಗೆ ಕೃಪಾಂಕ ದೊರೆಯಲಿದೆ. ಅಂದರೆ, ಒಟ್ಟಾರೆ 625 ಅಂಕಗಳಿಗೆ ಕನಿಷ್ಠ 219 ಅಂಕ ಪಡೆಯಲು ಬೇಕಾಗುವ ಅಂಕಗಳನ್ನು ನೀಡಲಿದೆ.
    100 ಅಂಕಗಳ ಪರೀಕ್ಷೆಯಲ್ಲಿ 20 ಅಂಕಗಳಿಗೆ ಮೌಖಿಕ ಮತ್ತು 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. 80 ಅಂಕಗಳಿಗೆ ಕನಿಷ್ಠ 28 ಅಂಕಗಳನ್ನು ಪಡೆದಿರಬೇಕು. ಆದರೆ, ಕೆಲವು ವಿದ್ಯಾರ್ಥಿಗಳು ಕೆಲವು ವಿಷಯಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಕೆಲವು ವಿಷಯಗಳಲ್ಲಿ ಕಡಿಮೆ ಅಂಕಗಳನ್ನು ಪಡೆದಿರುತ್ತಾರೆ.ಇಂತಹ ವಿದ್ಯಾರ್ಥಿಗಳಿಗೆ ಕೃಪಾಂಕ ನೆರವಾಗಲಿದೆ. ಉತ್ತೀರ್ಣರಾಗಲು ಕನಿಷ್ಠ ಅರ್ಹತಾ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡಬಾರದು ಎಂಬ ಉದ್ದೇಶದಿಂದ ಈ ವಿದ್ಯಾರ್ಥಿಸ್ನೇಹಿಯಾಗಿ ನಿಯಮ ರೂಪಿಸಲಾಗಿದೆ.
    ಅದೇ ರೀತಿ ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ ಕನಿಷ್ಠ 210 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿ ಎರಡು ವಿಷಯಗಳಲ್ಲಿ ಶೇಕಡ 5 ರಷ್ಟು ಅಂದರೆ ತಲಾ 5 ಅಂಕ ಸೇರಿ ಗರಿಷ್ಠ 10 ಅಂಕಗಳನ್ನು ಪಡೆಯಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ತಿಳಿಸಿದೆ.

    Verbattle
    Verbattle
    Verbattle
    SSLC ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ
    Next Article ಪತ್ನಿಯ ಕೊಂದು ಬ್ಯಾರಲ್ ನಲ್ಲಿ ಶವ ಇಟ್ಟ ಪತಿರಾಯ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mnebtu ರಲ್ಲಿ ವೋಟಿನ ಬೇಟೆಗಾಗಿ ಭಾವನೆಗಳೊಂದಿಗೆ ಓಟ – budget ನಲ್ಲಿಲ್ಲ ಅಭಿವೃದ್ಧಿಯ ನೋಟ
    • casino en ligne fiable ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.