ಬೆಂಗಳೂರು:
‘BJP ವಿಜಯ ಸಂಕಲ್ಪ ಅಭಿಯಾನ (Vijay Sankalp Abhiyan) ದಡಿ ಸದಸ್ಯತ್ವ ನೊಂದಣಿ ಅಭೂತಪೂರ್ವ ಯಶಸ್ಸು ಕಂಡಿದೆ. ಅಭಿಯಾನದ ಅನ್ವಯ ಒಟ್ಟು 40,50,351 ಸದಸ್ಯತ್ವ ನೋಂದಣಿ ಮಾಡಿದ್ದೇವೆ’ ಎಂದು ಉನ್ನತ ಶಿಕ್ಷಣ, ಸಚಿವ ಹಾಗೂ ಅಭಿಯಾನದ ಸಂಚಾಲಕ ಡಾ.ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭಿಯಾನದಲ್ಲಿ 58,186 ಬೂತ್ಗಳ ಪೈಕಿ 39,572 ಬೂತ್ಗಳ ಸಂಪರ್ಕ ಮಾಡಲಾಗಿದೆ. 22,55,562 ಮನೆಗಳ ಸಂಪರ್ಕ ಮಾಡಿದ್ದೇವೆ. 13,35,254 ಮನೆಗಳ ಮೇಲೆ ಸ್ಟಿಕರ್ ಅಂಟಿಸಲಾಗಿದೆ. 4,91,067 ವಾಹನಗಳ ಮೇಲೆ ಸ್ಟಿಕರ್ ಅಂಟಿಸಲಾಗಿದೆ. 1.94 ಲಕ್ಷ ಗೋಡೆ ಬರಹ ಮಾಡಲಾಗಿದೆ. 31,260 ಬೂತ್ಗಳಲ್ಲಿ ‘ಮನ್ ಕಿ ಬಾತ್’ (Mann Ki Baat) ಅನ್ನು 5 ಲಕ್ಷ ಜನರು ಆಲಿಸಿದ್ದಾರೆ. ಅಲ್ಲದೆ, 32,489 ಡಿಜಿಟಲ್ ವಾಲ್ ಪೈಂಟಿಂಗ್ ಮಾಡಲಾಗಿದೆ ಎಂದು ವಿವರಿಸಿದರು.
‘ಬಿಜೆಪಿಯೇ ಭರವಸೆ ಎಂಬ ಅಭಿಯಾನ ಇದಾಗಿತ್ತು. ಕನಿಷ್ಠ 150 ಶಾಸಕರನ್ನು ಗೆಲ್ಲಲು ಇದು ಪೂರಕ. ಸಶಕ್ತ ಬೂತ್ ಮೂಲಕ ಬೂತ್ ವಿಜಯ ಅಭಿಯಾನ ನಡೆದಿದೆ. ಜನರ ಸಹಕಾರ, ಬೆಂಬಲ ಕೋರಿದ್ದೇವೆ’ ಎಂದು ತಿಳಿಸಿದರು. ‘ಮಂಗಳೂರು- ಉಡುಪಿಯಲ್ಲಿ ಶೇ 100 ಮನೆಗಳ ಸಂಪರ್ಕ ಆಗಿದೆ. ದ್ವೀಪವಾಸಿಗಳನ್ನೂ ಸಂಪರ್ಕಿಸಲಾಗಿದೆ. ಕೊಡಗು, ಶಿವಮೊಗ್ಗ, ಮೈಸೂರಿನಲ್ಲಿ ಶೇ 100 ಮನೆಗಳನ್ನು ಸಂಪರ್ಕಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರನ್ನೂ ಸಂಪರ್ಕಿಸಲಾಗಿದೆ’ ಎಂದು ಅವರು ತಿಳಿಸಿದರು.

‘ವಿಜಯ ಸಂಕಲ್ಪ ಅಭಿಯಾನವು ಪೂರ್ಣಗೊಂಡಿದ್ದು, ಮನೆಮನೆ ತಲುಪುವ ನಿಟ್ಟಿನಲ್ಲಿ ಅದನ್ನು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ- ರಾಜ್ಯ ಸರಕಾರಗಳ ಸಾಧನೆ ತಿಳಿಸುವುದು, ಗೋಡೆ ಬರಹ, ಕರಪತ್ರ ಹಂಚುವುದು, ಪಕ್ಷದ ಸದಸ್ಯತ್ವ ನೋಂದಣಿ ನಡೆದಿದೆ ಎಂದರು. 2 ಕೋಟಿ ಮನೆಗಳು, 1 ಕೋಟಿ ಸದಸ್ಯತ್ವ ನೋಂದಣಿ ಗುರಿ ಇತ್ತು’ ಎಂದು ವಿವರಿಸಿದರು.
‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಅಲ್ಲದೆ ಸಾಮಾನ್ಯ ಕಾರ್ಯಕರ್ತರಂತೆ ಸಕ್ರಿಯವಾಗಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಜನವರಿ 21ರಿಂದ ಫೆಬ್ರವರಿ 5ರವರೆಗೆ ಅಭಿಯಾನ ಅವಧಿಯನ್ನು ನಿಗದಿಗೊಳಿಸಿದ್ದೆವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಲಮಂಗಲದ ಬಳಿ ಚಾಲನೆ ನೀಡಿದ್ದರು. ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಬೆಂಗಳೂರಿನಲ್ಲಿ ಚಾಲನೆ ಕೊಟ್ಟಿದ್ದರು’ ಎಂದು ತಿಳಿಸಿದರು.
‘ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯದ ಸಚಿವರು, ಎಲ್ಲ ಚುನಾಯಿತ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಎಲ್ಲ ಮೋರ್ಚಾಗಳು, ಪ್ರಕೋಷ್ಠಗಳು ಅಭಿಯಾನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದವು’ ಎಂದರು.
BJP ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಅಭಿಯಾನದ ರಾಜ್ಯ ಸಹ ಸಂಚಾಲಕ ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ನಂದೀಶ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.


2 ಪ್ರತಿಕ್ರಿಯೆಗಳು
?Celebremos a cada explorador de tesoros !
Jugar en casinos sin verificaciГіn permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino sin KYC. Gracias a esta flexibilidad, cada sesiГіn se vuelve mГЎs cГіmoda al usar servicios como casino sin registro.
Jugar en casino sin dni permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com/. Gracias a esta flexibilidad, cada sesiГіn se vuelve mГЎs cГіmoda al usar servicios como casino crypto sin kyc.
Casino crypto sin kyc, juega sin preocupaciones – п»їhttps://casinoretirosinverificacion.com/
?Que la suerte te beneficie con que consigas admirables movidas triunfantes !
Привіт ті, хто стежить за плановими відключеннями !
Довіра до джерел інформації про графік відключення світла київська область є критично важливою. . Не слід покладатися на неперевірені повідомлення, оскільки вони можуть бути неточними. Важливо отримувати дані безпосередньо від енергетичних компаній.
Відстежуючи графіки відключення світла Київ, ви зможете покращити якість своїх буднів. Ці графіки сприяють більшому усвідомленню енергоспоживання. Не нехтуйте можливістю користуватися їх перевагами в своєму житті.
РЇРє навчитися створювати детек графік для бізнесу – п»їhttps://dtek.pp.ua/
Нехай вам будуть до вподоби чудові комфортні умови під час відключень !