Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಯವರು ಎಡವಟ್ಟು ಗಿರಾಕಿಗಳು
    ಬೆಂಗಳೂರು

    BJP ಯವರು ಎಡವಟ್ಟು ಗಿರಾಕಿಗಳು

    vartha chakraBy vartha chakraಜನವರಿ 31, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ-
    ‘ಒಟ್ಟಾರೆ ವ್ಯವಸ್ಥೆಯಲ್ಲಿ ಏನೋ ಒಂದು ಬದಲಾವಣೆಯಾಗಬಹುದು ಎಂದು ಭಾರಿ ನಿರೀಕ್ಷೆಯೊಂದಿಗೆ BJP ಗೆ ಸೇರ್ಪಡೆಯಾಗಿದ್ದೆ. ಆದರೆ,ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಡಬೇಕಾದ್ದನ್ನು ಬಿಟ್ಟು ಶಾಲೆಗೆ ಕೇಸರಿ ಬಣ್ಣ ಹೊಡೆಸುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ?’ ಎಂದು ಪ್ರಶ್ನಿಸಿದರು.

    ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಾರೆ. ಕಾರಣ ಈಗಿನ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಆರ್ಥಿಕವಾಗಿ ಸ್ಥಿತಿವಂತನಲ್ಲ. ಇದರ ಬದಲಿಗೆ ಸೇವಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ’ ಎಂದು ಹೇಳಿದರು. ‘ಈಗ ಚುನಾವಣೆಗೆ ಸ್ಪರ್ಧಿಸಬೇಕೆಂದರೆ ನಿಮ್ಮ ಬಳಿ ಎಷ್ಟು ಹಣ ಇದೆ ಎಂದು ಕೇಳುತ್ತಾರೆ. ಈಗ ಪಕ್ಷಕ್ಕಿಂತ, ಅದರ ನಾಯಕರು ಪ್ರಬಲರಾಗಿದ್ದಾರೆ. ಮುಂದೆ ನಡೆಯುವುದು ರಿಯಲ್ ಎಸ್ಟೇಟ್ ಉದ್ಯಮಿಗಳ ಚುನಾವಣೆ. ಅವರು ಟಿಕೆಟ್‌ಗಾಗಿ 10 ಕೋಟಿ ರೂ. ಗಳನ್ನು ನೀಡಲೂ ಸಹ ಸಿದ್ಧರಿದ್ದಾರೆ. ದುಡ್ಡಿನ ಮತ್ತು ಜಾತಿಯ ರಾಜಕಾರಣವೇ ವಿಜೃಂಭಿಸುತ್ತಿದೆ’ ಎಂದು ವಿಶ್ಲೇಷಿಸಿದರು.
    ‘ಹಿಂದಿನ ಹೋರಾಟ ಮತ್ತು ಚಳವಳಿಗಳನ್ನು ಸ್ವಾಮೀಜಿಗಳ ಕೈಗಳಿಗೆ ಕೊಟ್ಟಿದ್ದೇವೆ. ಮೀಸಲಾತಿ ಕುರಿತು ಸಹ ಅವರೇ ಚಳವಳಿ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ’ ಎಂದು ಕಳವಳ ವ್ಯಕ್ತಪಡಿಸಿದರು.

    ‘ಪ್ರಜಾಪ್ರಭುತ್ವದ ಆತ್ಮವೇ ಚುನಾವಣೆ. ಆದರೆ, ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಮ್ಯಾಜಿಕ್ ನಂಬರ್ ನಿರ್ಣಯಿಸುವವರು ಮತದಾರರು. ಆದರೆ, ಬಿಜೆಪಿ ತನಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕೆಲಸ ಮಾಡುತ್ತಿದೆ. ಇಂತಹ ಅಯೋಗ್ಯತನದ ರಾಜಕೀಯವನ್ನು ನಾನು ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡು. ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನವಿದು’ ಎಂದು ಆಕ್ರೋಶ ಹೊರಹಾಕಿದರು.

    Verbattle
    Verbattle
    Verbattle
    BJP Election H vishwanath News Politics ಕಾಲೇಜು ಚುನಾವಣೆ ರಾಜಕೀಯ ಶಾಲೆ ಶಿಕ್ಷಣ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticleJDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    Next Article ವಿಮಾನದಲ್ಲಿ ಅರೆನಗ್ನಳಾಗಿ ರಂಪಾಟ
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • VaughnRug ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Williamtrema ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.