Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ನಾಯಕರನ್ನು ಬಂಧಿಸಬೇಕಂತೆ…ಯಾಕೆ?
    Viral

    BJP ನಾಯಕರನ್ನು ಬಂಧಿಸಬೇಕಂತೆ…ಯಾಕೆ?

    vartha chakraBy vartha chakraಜನವರಿ 5, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.5: ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಹಳೆ ಪ್ರಕರಣಗಳ ಹೆಸರಲ್ಲಿ ಕರ ಸೇವಕರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ (BJP) ಕಾರ್ಯಕರ್ತರು ನಾನು ‌ಕರ ಸೇವಕ ನನ್ನನ್ನು ಬಂಧಿಸಿ ‌ಎಂದು ಬಿಜೆಪಿ ಆರಂಭಿಸಿರುವ ಅಭಿಯಾನಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
    ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರ ಪೋಟೋಗಳಿಗೆ ನಾನು ‌ಭ್ರಷ್ಟ ನನ್ನನ್ನು ಬಂಧಿಸಿ ಎಂಬ ಅಡಿ ಬರಹ ಹಾಕಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ.

    ನಾನೂ ಕರ ಸೇವಕ ನನ್ನನ್ನೂ ಬಂಧಿಸುವಂತೆ ಆಗ್ರಹಿಸಿ ಪೋಸ್ಟರ್ ಹಿಡಿದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಭಟನೆ ನಡೆಸಿದ್ದರು. ಈಗ ಕಾಂಗ್ರೆಸ್ ನಾನು ಆರ್‌ಟಿಜಿಎಸ್ ಮೂಲಕ ಲಂಚ ಪಡೆದಿದ್ದೇನೆ. 40 ಸಾವಿರ ಕೋಟಿ ಅಕ್ರಮದಲ್ಲಿ ಪಾಲುದಾರನಾಗಿದ್ದೇನೆ ನನ್ನನ್ನೂ ಬಂಧಿಸಿ ಎಂದು ವಿಜಯೇಂದ್ರ ಅವರ ಕೈಯಲ್ಲಿ ನಾಮಫಲಕ ಹಿಡಿದಿರುವ ರೀತಿಯಲ್ಲಿ ಭಾವಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಹರಿಬಿಟ್ಟಿದೆ.
    ಬಿಜೆಪಿ ನಾಯಕರು ನನ್ನನ್ನೂ ಬಂಧಿಸಿ ಎಂದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಪ್ರಶ್ನೆಗಳ ಸುರಿಮಳೆಗೈದಿದೆ.
    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರ ಭಾವಚಿತ್ರಗಳನ್ನು ಎಡಿಟ್ ಮಾಡಿ ಎಕ್ಸ್ ಖಾತೆಯಲ್ಲಿ ಹರಿಬಿಟ್ಟಿರುವ ಕಾಂಗ್ರೆಸ್, ಬಿಜೆಪಿ ನಾಯಕರು ನಿಜವಾಗಿಯೂ ಈ ನಾಮಫಲಕಗಳನ್ನು ಹಿಡಿದು ಈ ರೀತಿ ಪೋಸ್ಟರ್ ಇರಬೇಕು ಎಂದು ವ್ಯಂಗ್ಯಭರಿತವಾಗಿ ಹೇಳಿದೆ.
    ಅದೇ ರೀತಿ ಬಿಜೆಪಿ ಮುಖಂಡ ಸಿ.ಟಿ. ರವಿ ನಡೆಸಿದ ಫೊಟೊವನ್ನು ಎಡಿಟ್ ಮಾಡಿ ನಾನು ಕಾರು ಚಲಾಯಿಸಿ ಇಬ್ಬರ ಹತ್ಯೆ ಮಾಡಿದ್ದೇನೆ. ನನ್ನನ್ನೂ ಬಂಧಿಸಿ ಎಂದು ತಿರುರೇಟು ನೀಡಿದೆ. ಸಿ.ಟಿ ರವಿ ಅವರೇ ನಿಮ್ಮನ್ನು ಬಂಧಿಸಬೇಕಾದರೆ ಬೇರೆ ಕಾರಣಗಳು ಇವೆ ಅಲ್ಲವೆ ಎಂದು ಟಾಂಗ್ ನೀಡಿದೆ.

    ಮತ್ತೊಂದೆಡೆ ಬಿಜೆಪಿ (BJP) ಮುಖಂಡ ಕೆ.ಎಸ್ ಈಶ್ವರಪ್ಪ ಭಾವಚಿತ್ರವನ್ನೂ ಎಡಿಟ್ ಮಾಡಿ ನಾನು 40 ಪರ್ಸೆಂಟ್ ಕಮಿಷನ್ ನುಂಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣನಾಗಿದ್ದೇನೆ. ನನ್ನನ್ನೂ ಬಂಧಿಸಿ ಎಂದು ಎಕ್ಸ್‌ನಲ್ಲಿ ಲೇವಡಿ ಮಾಡಿದೆ.
    ಈಶ್ವರಪ್ಪ ಹಿಡಿಯಬೇಕಾದ ಪೋಸ್ಟರ್ ಇದಾಗಿದ್ದು, ಕೋರ್ಟ್‌ನಲ್ಲಿ ಬಿಜೆಪಿಗರ ಅಕ್ರಮಗಳು ಹಗರಣಗಳು ಸಾಬೀತಾದರೆ ನನ್ನನ್ನೂ ಬಂಧಿಸಿ ಎಂದು ಹೇಳುವುದೇ ಬೇಡ, ಬಂಧನ ಆಗೇ ಆಗುತ್ತದೆ ಎಂದು ಹೇಳಿದೆ.
    ಮತ್ತೊಂದೆಡೆ ಲೋಕಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ದಾಳಿಕೋರರಿಗೆ ಪಾಸ್ ನೀಡಿ ಸಹಕರಿಸಿದ್ದೇನೆ ನನ್ನನ್ನೂ ಬಂಧಿಸಿ ಎಂದು ಪ್ರತಾಪ್‌ಸಿಂಹ ಅವರ ಕೈಯಲ್ಲಿ ಪೋಸ್ಟರ್ ಹಿಡಿಸಿ ಕಾಂಗ್ರೆಸ್ ಎಡಿಟ್ ಮಾಡಿರುವ ಭಾವಚಿತ್ರಗಳನ್ನು ಅಪ್‌ಲೋಡ್ ಮಾಡಿದೆ.

    ಪ್ರತಾಪ್‌ಸಿಂಹ ಅವರೇ ನೀವು ಈ ಪೋಸ್ಟರ್ ಹಿಡಿದು ಕೂರುವ ಧೈರ್ಯ ತೋರಿಸಿ. ನಿಮ್ಮವರೇ ಹೇಳುವ ಧಮ್ಮು, ತಾಖತ್ತು ಪ್ರದರ್ಶಿಸಿ ಎಂದು ಕಾಂಗ್ರೆಸ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
    ಇನ್ನೊಂದೆಡೆ ಶಾಸಕ ಸುನಿಲ್‌ಕುಮಾರ್ ವಿರುದ್ಧವೂ ಕಿಡಿಕಾರಿರುವ ಕಾಂಗ್ರೆಸ್, ನಾನು ಪರಶುರಾಮನ ಮೂರ್ತಿಯ ಕಂಚನ್ನು, ಸರ್ಕಾರಿ ಸಿಮೆಂಟ್‌ನ್ನು ಕದ್ದಿದ್ದೇನೆ ನನ್ನನ್ನೂ ಬಂಧಿಸಿ ಎಂದು ಸುನಿಲ್‌ಕುಮಾರ್ ಅವರ ಫೋಟೊವನ್ನು ಎಡಿಟ್ ಮಾಡಿ ಕಾಂಗ್ರೆಸ್ ಬಿತ್ತರಿಸಿದೆ,
    ನನ್ನನ್ನೂ ಬಂಧಿಸಿ ಎಂದು ಹೇಳುತ್ತಿರುವ ಸುನಿಲ್‌ಕುಮಾರ್‌ರವರೇ ಪರಶುರಾಮ ಮೂರ್ತಿಗೆ ಕಂಚಿನ ಬದಲು ಫೈಬರ್ ಹಾಕಿದ್ದಕ್ಕೆ ನಿಮ್ಮನ್ನು ಬಂಧಿಸಬೇಕೇ ಅಥವಾ ಸರ್ಕಾರದ ಸಿಮೆಂಟ್ ಕಳ್ಳತನದ ಆರೋಪಕ್ಕೆ ಬಂಧಿಸಬೇಕೇ, ರಾಮನ ಹೆಸರಿನಲ್ಲಿ ರಾವಣ ಕೆಲಸ ಮಾಡುವ ಆರೋಪಿಗಳನ್ನು ಬಂಧಿಸಬೇಕಲ್ಲವೆ ಎಂದು ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆಗೈದು ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

    ALSO READ | Latest Kannada News | News in Kannada

    ಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna

    #kannada art BJP kannada news m News Politics somanna Trending Varthachakra ಈಶ್ವರಪ್ಪ ಕಳ್ಳತನ ಕಾಂಗ್ರೆಸ್ ಕಾರು ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    Next Article ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    1 ಟಿಪ್ಪಣಿ

    1. bypzx on ಜೂನ್ 3, 2025 9:00 ಅಪರಾಹ್ನ

      can i get clomiphene pills clomiphene brand name where buy clomid without prescription where can i get generic clomid price can i purchase clomid without insurance can you get cheap clomiphene without a prescription where buy generic clomid without dr prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • Wilburhal ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • Michelpog ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe