ಹುಬ್ಬಳ್ಳಿ-
‘ಒಟ್ಟಾರೆ ವ್ಯವಸ್ಥೆಯಲ್ಲಿ ಏನೋ ಒಂದು ಬದಲಾವಣೆಯಾಗಬಹುದು ಎಂದು ಭಾರಿ ನಿರೀಕ್ಷೆಯೊಂದಿಗೆ BJP ಗೆ ಸೇರ್ಪಡೆಯಾಗಿದ್ದೆ. ಆದರೆ,ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ’ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾಡಬೇಕಾದ್ದನ್ನು ಬಿಟ್ಟು ಶಾಲೆಗೆ ಕೇಸರಿ ಬಣ್ಣ ಹೊಡೆಸುತ್ತಿದ್ದಾರೆ. ಶಾಲಾ, ಕಾಲೇಜುಗಳಲ್ಲಿ ಸರಿಯಾಗಿ ಪರೀಕ್ಷೆ ನಡೆಯುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಎಲ್ಲ ಹುದ್ದೆಗಳ ಭರ್ತಿಗೆ ದುಡ್ಡು ಕೇಳುತ್ತಿದ್ದಾರೆ. ಇದನ್ನು ಸರ್ಕಾರ ಎನ್ನಲಾಗುತ್ತದೆಯೇ?’ ಎಂದು ಪ್ರಶ್ನಿಸಿದರು.
‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಲಾರೆ. ಕಾರಣ ಈಗಿನ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಆರ್ಥಿಕವಾಗಿ ಸ್ಥಿತಿವಂತನಲ್ಲ. ಇದರ ಬದಲಿಗೆ ಸೇವಾ ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ’ ಎಂದು ಹೇಳಿದರು. ‘ಈಗ ಚುನಾವಣೆಗೆ ಸ್ಪರ್ಧಿಸಬೇಕೆಂದರೆ ನಿಮ್ಮ ಬಳಿ ಎಷ್ಟು ಹಣ ಇದೆ ಎಂದು ಕೇಳುತ್ತಾರೆ. ಈಗ ಪಕ್ಷಕ್ಕಿಂತ, ಅದರ ನಾಯಕರು ಪ್ರಬಲರಾಗಿದ್ದಾರೆ. ಮುಂದೆ ನಡೆಯುವುದು ರಿಯಲ್ ಎಸ್ಟೇಟ್ ಉದ್ಯಮಿಗಳ ಚುನಾವಣೆ. ಅವರು ಟಿಕೆಟ್ಗಾಗಿ 10 ಕೋಟಿ ರೂ. ಗಳನ್ನು ನೀಡಲೂ ಸಹ ಸಿದ್ಧರಿದ್ದಾರೆ. ದುಡ್ಡಿನ ಮತ್ತು ಜಾತಿಯ ರಾಜಕಾರಣವೇ ವಿಜೃಂಭಿಸುತ್ತಿದೆ’ ಎಂದು ವಿಶ್ಲೇಷಿಸಿದರು.
‘ಹಿಂದಿನ ಹೋರಾಟ ಮತ್ತು ಚಳವಳಿಗಳನ್ನು ಸ್ವಾಮೀಜಿಗಳ ಕೈಗಳಿಗೆ ಕೊಟ್ಟಿದ್ದೇವೆ. ಮೀಸಲಾತಿ ಕುರಿತು ಸಹ ಅವರೇ ಚಳವಳಿ ಮಾಡುತ್ತಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕ’ ಎಂದು ಕಳವಳ ವ್ಯಕ್ತಪಡಿಸಿದರು.
‘ಪ್ರಜಾಪ್ರಭುತ್ವದ ಆತ್ಮವೇ ಚುನಾವಣೆ. ಆದರೆ, ಎಲ್ಲ ಪಕ್ಷದ ಮುಖಂಡರು ಮ್ಯಾಜಿಕ್ ನಂಬರ್ ಹೇಳುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಮ್ಯಾಜಿಕ್ ನಂಬರ್ ನಿರ್ಣಯಿಸುವವರು ಮತದಾರರು. ಆದರೆ, ಬಿಜೆಪಿ ತನಗೆ ಯಾರು ಮತ ನೀಡುವುದಿಲ್ಲವೋ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಕೆಲಸ ಮಾಡುತ್ತಿದೆ. ಇಂತಹ ಅಯೋಗ್ಯತನದ ರಾಜಕೀಯವನ್ನು ನಾನು ಜೀವನದಲ್ಲಿ ಕಂಡಿಲ್ಲ. ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡುತ್ತಿರುವುದು ನಾಚಿಕೆಗೇಡು. ಜನತಂತ್ರ ವ್ಯವಸ್ಥೆಗೆ ಮಾಡಿದ ದೊಡ್ಡ ಅಪಮಾನವಿದು’ ಎಂದು ಆಕ್ರೋಶ ಹೊರಹಾಕಿದರು.
4 ಪ್ರತಿಕ್ರಿಯೆಗಳು
clomiphene price walmart where to buy clomid order clomid prices can you get generic clomiphene without insurance buy generic clomid buy cheap clomid without dr prescription cost generic clomiphene online
With thanks. Loads of knowledge!
More articles like this would make the blogosphere richer.
buy propranolol for sale – propranolol canada buy methotrexate 2.5mg generic