Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJPಯಲ್ಲೂ ಬೆಳಗಾವಿ ರಾಜಕಾರಣದ ತಳಮಳ
    Trending

    BJPಯಲ್ಲೂ ಬೆಳಗಾವಿ ರಾಜಕಾರಣದ ತಳಮಳ

    vartha chakraBy vartha chakraಡಿಸೆಂಬರ್ 8, 202391 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಬೆಳಗಾವಿ ಪಾಲಿಟಿಕ್ಸ್ ದೊಡ್ಡಮಟ್ಟದಲ್ಲಿ ಸುದ್ದಿ ಮಾಡತೊಡಗಿದೆ ಈ ಬಾರಿ ವಿವಾದಕ್ಕೆ ಸಿಲುಕಿರುವುದು ಬಿಜೆಪಿ.
    ಇದಕ್ಕೆ ಪ್ರಮುಖ ಕಾರಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೋದರ ಹಾಗೂ ವಿಧಾನಪರಿಷತ್ ಸದಸ್ಯ ಚೆನ್ನ ರಾಜ ಹಟ್ಟಿಹೊಳಿ ಅವರ ಬೆಂಬಲಿಗರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಆಪ್ತ ಹಾಗೂ ಬಿಜೆಪಿ ಮುಖಂಡ ಪೃಥ್ವಿಸಿಂಗ್‌ ಪೃಥ್ವಿ ಸಿ ಮೇಲೆ ನಡೆದ ದಾಳಿ ಮತ್ತು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬೆಳಗಾವಿ ಬಿಜೆಪಿ ಮುಖಂಡ ಅಭಿಜಿತ್ ಜವಳ್ಕರ್ ಪ್ರಕರಣ .
    ಇದರ ಸಂಬಂಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ನಿಲುವಿಗೆ ಇದೀಗ ಹಲವು ಮಂದಿ ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

    ವಿಧಾನಸಭೆಯ ಕಲಾಪದಲ್ಲಿ ಬಿಜೆಪಿ (BJP) ಮುಖಂಡ ಹಾಗೂ ರಮೇಶ ಜಾರಕಿಹೊಳಿ ಆಪ್ತ ಪೃಥ್ವಿಸಿಂಗ್‌ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಮ್ಮ, ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ.
    ಹಲ್ಲೆ ನಡೆಸಿದ ಪ್ರಕರಣದಲ್ಲಿ, ಜವಳಕರ್ ಅವರನ್ನೇ ಬಂಧಿಸಿದ್ದನ್ನು ಆರ್. ಅಶೋಕ, ಅಭಯ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ ಅವರು ಶೂನ್ಯವೇಳೆಯಲ್ಲಿ ಪ್ರಶ್ನಿಸಿದ್ದರು.
    ಗುರುವಾರ ನಡೆದ ಕಲಾಪದಲ್ಲಿ,ಗೃಹ ಸಚಿವ ಜಿ. ಪರಮೇಶ್ವರ ಉತ್ತರ ನೀಡಿದರು.ಈ ಉತ್ತರ ವಿರೋಧಿಸಿ ಅಭಯ್ ಪಾಟೀಲ್, ಎಸ್.ಆರ್. ವಿಶ್ವನಾಥ್, ಸುನಿಲ್ ಕುಮಾರ್ ಮೊದಲಾದವರು ಸಭಾಧ್ಯಕ್ಷರ ಪೀಠದ ಮುಂದೆ ಧರಣಿಗೆ ಮುಂದಾದರೆ,ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಭಾತ್ಯಾಗದ ನಿರ್ಧಾರ ಕೈಗೊಂಡರು. ಇದು ಅಭಯ್ ಪಾಟೀಲ್ ಸೇರಿದಂತೆ ಹಲವು ಶಾಸಕರನ್ನು ಕೆರಳಿಸಿತು. ಬಹಿರಂಗವಾಗಿಯೇ ಅವರೆಲ್ಲಾ ಪ್ರತಿಪಕ್ಷ ನಾಯಕ ಅಶೋಕ್ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರ ನೇಮಕವಾಗಿತ್ತು ಮತ್ತು ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ ಅವರ ಆಯ್ಕೆ‌ ಮಾಡಿರುವ ಕ್ರಮದ ವಿರುದ್ಧ ಅಸಮಾಧಾನಗೊಂಡ ಹಲವು ನಾಯಕರು ಈ ರೀತಿಯಲ್ಲಿ ತಮ್ಮ ಬೇಸರ ಹೊರ ಹಾಕುತ್ತಿರುವುದು ಪಕ್ಷದ ನಾಯಕತ್ವಕ್ಕೆ ದೊಡ್ಡ ರೀತಿಯಲ್ಲಿ ಮುಜುಗರ ಪಡುವಂತೆ ಮಾಡುತ್ತಿದೆ.
    ಇದನ್ನು ನಿವಾರಿಸುವ ಸಲುವಾಗಿ ಪ್ರತಿಪಕ್ಷ ನಾಯಕ ಅಶೋಕ್ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ಬೆಳಿಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಿ ಹಲವು ಶಾಸಕರನ್ನು ಸಭೆಗೆ ಬರುವಂತೆ ಆಹ್ವಾನಿಸಿದರು.
    ಆದರೆ,ಅಭಯ್ ಪಾಟೀಲ್, ಯತ್ನಾಳ್, ವಿಶ್ವನಾಥ್, ಅರವಿಂದ ಬೆಲ್ಲದ ಸೇರಿದಂತೆ ಹಲವಾರು ಮಂದಿ ತಾವು ಸಭೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.ಇದು ನಾಯಕರ ನಿದ್ದೆಗೆಡುವಂತೆ ಮಾಡಿತು. ಒಂದು ವೇಳೆ ತಾವು ಸಭೆ ಕರೆದು ಇವರು ಗೈರು ಹಾಜರಾದರೆ ಅದೇ ದೊಡ್ಡ ಸುದ್ದಿಯಾಗುತ್ತದೆ ಎಂದು ಭಾವಿಸಿ ಸದ್ಯಕ್ಕೆ ಸಭೆ ನಡೆಸದಿರುವ ತೀರ್ಮಾನಕ್ಕೆ ಬಂದರು ಎಂದು ಗೊತ್ತಾಗಿದೆ.

    ಸಮನ್ವಯದ ಕೊರತೆ:
    ಬೆಳಗಾವಿ ವಿದ್ಯಮಾನದ ವಿಚಾರದಲ್ಲಿ ಸಮನ್ವಯ ಕೊರತೆಯಿಂದ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಜತೆ ಮಾತನಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಧಾನಸಭೆಯಲ್ಲಿ ಧರಣಿ ಮಾಡುವ ಮೂಲಕ ಸುಮ್ಮನೆ ಸಮಯ ವ್ಯರ್ಥ ಮಾಡುವುದು ಬೇಡ ಎಂದು ಎಲ್ಲರೂ ಹೇಳಿದ್ದರು. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆಯಾಗಬೇಕು ಎಂಬ ಹಿನ್ನೆಲೆಯಲ್ಲಿ ನಾನು, ಯತ್ನಾಳ್, ವಿಜಯೇಂದ್ರ, ಅಶ್ವತ್ಥ್‌ನಾರಾಯ ಸೇರಿಯೇ ಬೆಳಗಾವಿಯ ಪೊಲೀಸ್ ದೌರ್ಜನ್ಯದ ಬಗ್ಗೆ ಸಭಾತ್ಯಾಗ ನಡೆಸುವ ತೀರ್ಮಾನ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದರು.

    ನಮ್ಮ ತೀರ್ಮಾನ ಹಿಂದಿನ ಸಾಲಿನಲ್ಲಿ ಇದ್ದವರಿಗೆ ತಲುಪಿಸಲಾಗಿಲ್ಲ. ಸಮನ್ವಯ ಕೊರತೆಯಿಂದ ಈ ರೀತಿಯಾಗಿದೆ. ಯಾರು ಏನೇ ಹೇಳಿದರೂ ಅದು ಅವರ ವೈಯುಕ್ತಿಕ ಅಭಿಪ್ರಾಯ. ಅಸಮಾಧಾನಿತ ಶಾಸಕರನ್ನು ಕರೆಸಿ ಮಾತನಾಡುತ್ತೇನೆ ಎಂದು ಅವರು ಹೇಳಿದರು.
    ಸೋಮವಾರ ಸದನದಲ್ಲಿ ಭ್ರೂಣಹತ್ಯೆ, ಡಿಕೆಶಿ ವಿರುದ್ಧದ ಸಿಬಿಐ ಅನುಮತಿ ವಾಪಸ್, ಸಚಿವ ಜಮೀರ್ ಅಹಮದ್ ಅವರ ಸಭಾಧ್ಯಕ್ಷರ ಸ್ಥಾನದ ಬಗೆಗಿನ ಹೇಳಿಕೆ ವಿಚಾರ ಪ್ರಸ್ತಾಪ, ಉತ್ತರ ಕರ್ನಾಟಕ ಭಾಗದ ಚರ್ಚೆ ಸೇರಿದಂತೆ ಎಲ್ಲವನ್ನು ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
    ಹೊಂದಾಣಿಕೆ ರಾಜಕಾರಣ:
    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕೀಯ ಇದೆ ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ,ಈಗಲೂ ಅದೇ ಆಗುತ್ತಿದೆ ಎಂದು ಹೇಳಿದರು.

    BJP News Politics Trending Varthachakra ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಮೆಟ್ರೋ ಗೆ ಹೀಗೂ ಬರುತ್ತೆ ಆದಾಯ | Bengaluru Metro
    Next Article ಪೊಲೀಸರಿಗೆ ಕೊಟ್ಟ ದೂರನ್ನೇ ಬದಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Lakshmi Hebbalkar
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_npSn ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • Georgehes ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_ffsl ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe