Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    ರಾಜಕೀಯ

    ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP

    vartha chakraBy vartha chakraಏಪ್ರಿಲ್ 23, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.23- ಲೋಕಸಭಾ ಮಹಾಸಮದಲ್ಲಿ ರಾಜಕೀಯ ನಾಯಕರ ವಾಕ್ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ (BJP) ರಾಜ್ಯದ ಜನರಿಗೆ ಪಿಕ್ ಪ್ಯಾಕೆಟ್ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ.
    ಬಿಜೆಪಿಯವರು ತಾವು ಮಾಡಿದ ಪಿಕ್‍ ಪ್ಯಾಕೆಟ್ ಅನ್ನು ಕಾಂಗ್ರೆಸ್‍ನವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಪಕ್ಷದ ಅಧ್ಯಕ್ಷ ತೋಳ್ಕಪಿಯನ್ ತಿರುಮವಳವನ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಜಾಹೀರಾತಿನ ವಿರುದ್ಧ ಕಿಡಿಕಾರಿದರು.

    ರಾಜ್ಯದಲ್ಲಿ ವಿದ್ಯುತ್ ಬಿಲ್ ಅನ್ನು ಏರಿಕೆ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಮ್ಮ ಸರ್ಕಾರ ಎಲ್ಲಾ ಗ್ರಾಹಕರಿಗೂ ಗೃಹಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಬಿಲ್ ರಿಯಾಯಿತಿ ನೀಡಿ ಜನರಿಗೆ ಹೊರೆಯಾಗದಂತೆ ಎಚ್ಚರಿಕೆ ವಹಿಸಿದೆ ಎಂದು ತಿಳಿಸಿದರು ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ಕಳೆದ ತಿಂಗಳೂ 1.50 ರೂ.ನಷ್ಟು ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಿದೆ. ಆದರೆ ಬಿಜೆಪಿಯವರು ಜಾಹೀರಾತಿನಲ್ಲಿ ನಮ್ಮ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದಲ್ಲಿ ಜನರ ಜೇಬಿನ ಕಳ್ಳತನ ಮಾಡುತ್ತಿದೆ.

    ಶೇ.40 ರಷ್ಟು ಲಂಚದ ಪ್ರಕರಣ ಬಿಗ್ ಪಿಕ್‍ಪ್ಯಾಕೆಟ್‍ಗೆ ದೊಡ್ಡ ಉದಾಹರಣೆ. ಅದನ್ನೆಲ್ಲಾ ಮರೆತು ಬಿಜೆಪಿ ಕಾಂಗ್ರೆಸ್ ವಿರುದ್ಧ ಪಿಕ್‍ಪ್ಯಾಕೆಟ್ ಆರೋಪ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.
    ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪಕ್ಷ ಸಾಂಕೇತಿಕ ಹೋರಾಟ ನಡೆಸಿದೆ. ಕೇಂದ್ರದಿಂದ ನಮಗೆ ನಿರಂತರ ಅನ್ಯಾಯವಾಗುತ್ತಿರುವುದನ್ನು ಜನರ ಗಮನಕ್ಕೆ ತರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಹಾಸನದಲ್ಲಿ ಕಣ್ಣೀರು ಹಾಕಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಯಾವ ಅನ್ಯಾಯವಾಗಿದೆ ಎಂದು ದೇವೇಗೌಡರು ಕಣ್ಣೀರು ಹಾಕಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿತ್ತು.

    ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರದ ಜನ ಮುಖ್ಯಮಂತ್ರಿ ಮಾಡಿದ್ದಾರೆ, ಹಾಸನದವರಲ್ಲ. ಅವರಿಗೆ ತಮ್ಮ ಕೊಡುಗೆ ಏನು ಎಂದು ಹೇಳಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಹೇಳಿದರು.
    ವಿಕೆಸಿ ಪಕ್ಷದ ಸಂಸದರು ಅತ್ಯಂತ ಪ್ರಭಾವಿ ಹಾಗೂ ಇಂಡಿಯಾ ಮೈತ್ರಿ ಕೂಟದ ಪಾಲುದಾರರಾಗಿದ್ದಾರೆ. ಅವರ ಪಕ್ಷದಿಂದ ಬೆಂಗಳೂರು ಗ್ರಾಮಾಂತರದಲ್ಲಿ ಚಂದ್ರಶೇಖರ್, ಕೋಲಾರದಲ್ಲಿ ಎಂ.ಸಿ.ವೇಣು, ಬೆಂಗಳೂರು ದಕ್ಷಿಣದಲ್ಲಿ ರಾಜ್‍ಕುಮಾರ್‍ರವರು ಸ್ಪರ್ಧೆ ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸಿ ಈ ಮೂರೂ ಜನ ಚುನಾವಣೆ ನಿವೃತ್ತಿ ಘೋಷಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

    Verbattle
    Verbattle
    Verbattle
    BJP ಕಳ್ಳತನ ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ಲಂಚ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi
    Next Article ಉತ್ತರ ಕರ್ನಾಟಕಕ್ಕೆ ಲಗ್ಗೆ ಹಾಕಲು ಸಜ್ಜಾದ ಪ್ರಧಾನಿ ಮೋದಿ | North Karnataka
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    3 ಪ್ರತಿಕ್ರಿಯೆಗಳು

    1. king_taEi on ಫೆಬ್ರವರಿ 12, 2026 2:26 ಫೂರ್ವಾಹ್ನ

      If you’re looking for an exciting challenge, try playing king thimbles game today!
      Though they evolved, king thimbles still focus on safeguarding fingers while sewing.

      Reply
    2. 1ace_qwsr on ಫೆಬ್ರವರಿ 12, 2026 5:26 ಅಪರಾಹ್ನ

      Dive into the thrilling world of online gambling with 1ace and enjoy an unforgettable gaming experience!
      In addition, current research focuses on discovering additional uses for 1ace.

      Reply
    3. pas88 on ಫೆಬ್ರವರಿ 13, 2026 9:58 ಅಪರಾಹ್ನ

      pas88 login

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • LinwoodGah ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.