Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿದೆಯಂತೆ | BJP Karnataka
    Viral

    ರಾಜ್ಯದ ಬಿಜೆಪಿ ಒಂದು ಕುಟುಂಬದ ಮುಷ್ಟಿಯಲ್ಲಿದೆಯಂತೆ | BJP Karnataka

    vartha chakraBy vartha chakraಮಾರ್ಚ್ 21, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.21 – ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದ ಆಕ್ರೋಶಗೊಂಡಿರುವ ಸಂಸದ ಡಿ.ವಿ.ಸದಾನಂದಗೌಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
    ಕುಟುಂಬ ರಾಜಕಾರಣಕ್ಕೆ ಒತ್ತಾಸೆಯಾಗಿ ನನಗೆ ಟಿಕೆಟ್ ನಿರಾಕರಿಸಲಾಗಿದೆ.ಇದು ನನಗೆ ಬೇಸರ ತಂದಿದ್ದು ಯಾವುದೇ ಕಾರಣಕ್ಕೂ‌ ನಾನು ಕಾಂಗ್ರೆಸ್‌ಗೆ ಸೇರುವುದಿಲ್ಲ. ಆದರೆ,ಕರ್ನಾಟಕ ಬಿಜೆಪಿ ಒಂದು ಕುಟುಂಬದ ಮುಷ್ಠಿಯಲ್ಲಿರಲು ಬಿಡುವುದಿಲ್ಲ ಎಂದು ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನಗೆ ಕಾಂಗ್ರೆಸ್ ಸೇರುವಂತೆ ಆ ಪಕ್ಷದ ಪ್ರಮುಖರು ಆಹ್ವಾನ ನೀಡಿದ್ದು ನಿಜ. ಆದರೆ ನಾನು ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿ ಶುದ್ಧೀಕರಣ ಮಾಡುವುದೇ ನನ್ನ ಮುಂದಿನ ಉದ್ದೇಶ, ನನಗೆ ಟಿಕೆಟ್‌ ಸಿಗದೇ ಇರುವುದಕ್ಕೆ ನೋವಾಗಿದೆ. ಟಿಕೆಟ್ ಕೈ ತಪ್ಪಿಸಿದವರು ಯಾರು ಎಂಬುದು ನನಗೂ ಗೊತ್ತು. ನಿಮಗೂ ಗೊತ್ತು
    ನನಗೆ ಅನ್ಯಾಯ ಮಾಡಿದವರು ಮತ್ತು ನೋವುಂಟು ಮಾಡಿದವರು ಮುಂದಿನ ದಿನಗಳಲ್ಲಿ ಪಶ್ಚಾತಾಪ ಪಡಲಿದ್ದಾರೆ ಎಂದರು.
    ನನಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವುದಕ್ಕೆ ನಿಜವಾಗಿಯೂ ಬೇಸರವಾಗಿದೆ. ನಾನು ಚುನಾವಣಾ ಕಣದಿಂದ ದೂರ ಸರಿಯುವ ಉದ್ದೇಶ ಹೊಂದಿದ್ದೆ. ಆದರೆ ಒಬ್ಬರು ಮಾಜಿ ಮುಖ್ಯಮಂತ್ರಿ, ಇಬ್ಬರು ಮಾಜಿ ಡಿಸಿಎಂಗಳು ಮತ್ತು ಕೆಲವು ಮಾಜಿ ಮಂತ್ರಿಗಳು ಬಂದು ಚುನಾವಣೆಯಲ್ಲಿ ನಿಲ್ಲಲೇ ಬೇಕು ಎಂದು ಹೇಳಿದರು. ಆ ಬಳಿಕ ಟಿಕೆಟ್‌ ಬೇರೆಯವರಿಗೆ ಘೋಷಿಸಲಾಯಿತು ಎಂದರು.

    ಮೋದಿಯವರು ದೇಶವೇ ನನ್ನ ಪರಿವಾರ ಎಂದಿದ್ದಾರೆ. ಆದರೆ ಇಲ್ಲಿ ಒಂದು ಕುಟುಂಬದ ಹಿಡಿತಕ್ಕೆ ಪಕ್ಷ ಸಿಲುಕಿದೆ. ಒಂದು ಕುಟುಂಬ, ಒಂದು ಜಾತಿಯ ಪಕ್ಷ ಆಗಬಾರದು. ಇದು ಪಕ್ಷದ ಸಿದ್ಧಾಂತ ಮತ್ತು ಮೋದಿಯವರ ನಿಲುವಿಗೆ ವಿರುದ್ಧವಾದುದು ಎಂದು ಹೇಳಿದರು.
    ಕಾಂಗ್ರೆಸ್‌ನಿಂದ ಆಹ್ವಾನ ಬಂದಿದ್ದು ನಿಜ. ಕಾಂಗ್ರೆಸ್ ನವರು ನನಗೆ ಯಾವ ಕ್ಷೇತ್ರ ಬೇಕಾದರೂ ಟಿಕೆಟ್ ಕೊಡುತ್ತೇನೆ ಅಂದರು. ಗೆಲ್ಲಿಸಿಕೊಂಡೇ ಬರುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಆದರೆ ಬಿಜೆಪಿ ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ, ನಾನು ಪಕ್ಷಕ್ಕೆ ಕೊಡಬೇಕಾದ್ದು ಇದೆ. ಸದಾನಂದಗೌಡ ಕೊಟ್ಟ ಕುದುರೆ ಏರಲಾದವನು ಧೀರನು ಅಲ್ಲ ಶೂರನೂ ಅಲ್ಲ ಅಂತ ವಿಶ್ಲೇಷಣೆ ಆಯಿತು. ನಾನು ನನಗೆ ಕೊಟ್ಟ ಎಲ್ಲಾ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದೀನಿ ಎಂದು ಸಮರ್ಥಿಸಿಕೊಂಡರು.

    ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ರಾಜ್ಯದಲ್ಲಿ ಬಿಜೆಪಿ ಜನಪರ ಮತ್ತು ಜನ ಒಪ್ಪಿಕೊಳ್ಳುವ ಪಕ್ಷ ಆಗಬೇಕು. ಶೇ.40 ಕಮಿಷನ್ ಆರೋಪ, ಸ್ವಜನಪಕ್ಷಪಾತ ಆರೋಪ ಬರಬಾರದು. ಮೋದಿಯವರು ಹೇಳಿದಂತೆ ಜಾತಿವಾದ, ಕುಟುಂಬವಾದ ಹಾಗೂ ಭ್ರಷ್ಟಾಚಾರ ಇರಬಾರದು. ಹೀಗಾಗಿ, ಪಾರ್ಟಿಯ ಶುದ್ದಿಕರಣಕ್ಕೆ ವೇಗ ಕೊಡುತ್ತೇನೆ ಎಂದರು.
    ನಮ್ಮ ರಾಜ್ಯದಲ್ಲಿ ಬಿಜೆಪಿಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷದಲ್ಲಿ ತಾನು ತನ್ನ ಮಕ್ಕಳು, ಕುಟುಂಬ, ತನ್ನ ಚೇಳಾಗಳಿಗೆ, ತನ್ನ ಜಾತಿಯವರಿಗೆ ಮಾತ್ರ ಸೀಮಿತ ಎಂಬಂತಾಗಿದೆ. ಮೋದಿಯವರ ಜನಪರ ಪಕ್ಷವಾಗಬೇಕು. ಕುಟುಂಬ ರಾಜಕಾರಣದಿಂದ ಹೊರಬರಬೇಕು ಎಂದು ಹೇಳಿದರು.

    Verbattle
    Verbattle
    Verbattle
    BJP bjp karnataka Karnataka ಕಾಂಗ್ರೆಸ್ ಚುನಾವಣೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು | Sadhguru
    Next Article ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • casino-en-ligne-france.org ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LinwoodGah ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.