Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮಿತ್ ಶಾ ಸೂಚನೆಗೂ ಬಗ್ಗದ ನಾಯಕರು | Amit Shah
    Trending

    ಅಮಿತ್ ಶಾ ಸೂಚನೆಗೂ ಬಗ್ಗದ ನಾಯಕರು | Amit Shah

    vartha chakraBy vartha chakraಏಪ್ರಿಲ್ 4, 2024ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಏ.4: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ ಭಿನ್ನಮತ ದೊಡ್ಡ ಸವಾಲಾಗಿದೆ.
    ಬಿಕ್ಕಟ್ಟು ಶಮನದ ಅಖಾಡಕ್ಕೆ ಪಕ್ಷದ ಹೈಕಮಾಂಡ್ ಧುಮುಕಿದೆ ಹಿರಿಯ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಅಪಸ್ವರ ಎತ್ತಿರುವ ಹಲವು ನಾಯಕರನ್ನು ಸಂಪರ್ಕಿಸಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವಂತೆ ಸೂಚಿಸುತ್ತಿದ್ದಾರೆ.
    ಅಮಿತ್ ಶಾ ಅವರ ಮನವಿ ಮತ್ತು ಸಲಹೆಗೆ ಸಮ್ಮತಿಸಿರುವ ಕೊಪ್ಪಳ ಬೀದರ್, ಬೆಳಗಾವಿ , ದಾವಣಗೆರೆ ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಭಿನ್ನಮತಿಯ ನಾಯಕರು ತಮ್ಮ ಮುನಿಸು ಮರೆತು ಪಕ್ಷದ ಅಧಿಕೃತ ಅಭ್ಯರ್ಥಿಗಳ ಪರವಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ.

    ಆದರೆ ಬೆಂಗಳೂರು ಕಾರವಾರ ಶಿವಮೊಗ್ಗ ತುಮಕೂರು ಮತ್ತು ರಾಯಚೂರು ಲೋಕಸಭಾ ಕ್ಷೇತ್ರದ ಬಂಡುಕೋರರು ಅಮಿತ್ ಶಾ ಅವರ ಸಲಹೆಗೆ ಸೊಪ್ಪು ಹಾಕದೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಯಾವುದೇ ರೀತಿಯ ಪ್ರಚಾರದಲ್ಲಿ ತೊಡಗದೆ ಮೌನಕ್ಕೆ ಶರಣಾಗಿದ್ದಾರೆ ಹಿರಿಯ ನಾಯಕರಾ ಈ ತಟಸ್ಥ ನಿಲುವು ಬಿಜೆಪಿ ಅಭ್ಯರ್ಥಿಗಳಿಗೆ ದೊಡ್ಡ ತಲೆನೋವು ತಂದೊಡ್ಡಿದೆ.
    ಬೆಳಗಾವಿಯ ಅಧಿಕೃತ ಅಭ್ಯರ್ಥಿಯ ಜಗದೀಶ್ ಶೆಟ್ಟರ್ ಪರವಾಗಿ ಕೆಲಸ ಮಾಡುವಂತೆ ಮಾಜಿ ಸಂಸದ ಪ್ರಭಾಕರ ಕೋರೆ ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿ ಮಠ ಮಾಜಿ ಶಾಸಕ ಸಂಜಯ ಪಾಟೀಲ್, ಸೇರಿದಂತೆ ಹಲವರಿಗೆ ಪಕ್ಷ ನೀಡಿರುವ ಸೂಚನೆ ಯಾವುದೇ ಪರಿಣಾಮ ಬೀರಿಲ್ಲ ಈ ನಾಯಕರು ತಮ್ಮ ನಿಲುವಿಗೆ ಬಲವಾಗಿ ಅಂಟಿಕೊಂಡಿದ್ದಾರೆ.
    ಮತ್ತೊಂದೆಡೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಶಾಸಕ ಅಭಯ ಪಾಟೀಲ್ ಅವರುಗಳು ಪಕ್ಷದ ಸೂಚನೆಯನ್ನು ಪಾಲಿಸುತ್ತೇವೆ ಎಂದು ತಿಳಿಸಿದರು ಇನ್ನೂ ಸಕ್ರಿಯವಾಗಿ ಅಭ್ಯರ್ಥಿಯ ಪರ ಪ್ರಚಾರಕ್ಕೆ ತೊಡಗಿಲ್ಲ ಮಾಜಿ ಸಚಿವರಾದ ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರು ಪಕ್ಷದ ನಾಯಕ ಅಮಿತ್ ಶಾ ಸೂಚನೆ ಪಾಲಿಸುತ್ತೇವೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಆದರೆ ಅವರ ನಿಲುವು ಏನು ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ ಇದು ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ತಲೆನೋವು ತಂದೊಡ್ಡಿದೆ.

    ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಮಾಜಿ ಸಚಿವ ಅನಂತಕುಮಾರ್ ಹೆಗಡೆ ತಮ್ಮ ಮನೆ ಬಿಟ್ಟು ಹೊರಗೆ ಬರುತ್ತಿಲ್ಲ ಅಮಿತ್ ಷಾ ಹೇಳಿದ ಎಲ್ಲ ಮಾತುಗಳನ್ನು ಕೇಳಿಸಿಕೊಂಡಿರುವ ಅವರು ಇಲ್ಲಿವರೆಗೆ ತಮ್ಮ ನಿಲುವು ಪ್ರಕಟಿಸಿಲ್ಲ ಅಷ್ಟೇ ಅಲ್ಲ ತಮ್ಮ ಬೆಂಬಲಿಗರಿಗೂ ಯಾವುದೇ ಸೂಚನೆ ನೀಡದಿರುವುದು ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಚಿಂತೆಗೀಡು ಮಾಡಿದೆ.
    ರಾಯಚೂರಿನಲ್ಲೂ ಭಿನ್ನಮತ ಬಗೆ ಹರಿದಿಲ್ಲ. ಮಾಜಿ ಸಂಸದ ಬಿವಿ ನಾಯಕ್ ಅವರು ಪಕ್ಷದ ಸಭೆಗಳಿಂದ ದೂರ ಉಳಿದಿದ್ದಾರೆ ಅವರನ್ನು ಸಂಪರ್ಕಿಸಲು ಹೈಕಮಾಂಡ್ ಮೂಲಕ ಅಭ್ಯರ್ಥಿ ರಾಜ ಅಮರೇಶ್ವರ ನಾಯಕ್ ಮಾಡಿದ ಪ್ರಯತ್ನ ವಿಫಲವಾಗಿದೆ.

    ಮೊದಲೇ ಯಡಿಯೂರಪ್ಪನವರ ಕುಟುಂಬದ ವಿರುದ್ಧ ಕೊತಕೊತ ಕುದಿಯುತ್ತಿರುವ ಹಿರಿಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಈಗ ಮತ್ತಷ್ಟು ಗರಂ ಆಗಿದ್ದಾರೆ. ದೆಹಲಿಗೆ ಬರುವಂತೆ ಸೂಚಿಸಿದ್ದ ಅಮಿತ್ ಶಾ, ಅವರನ್ನು ಭೇಟಿ ಮಾಡದೇ ವಾಪಸ್ ಕಳುಹಿಸಿದ್ದಾರೆ.
    ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಸಭೆಗೆ ಆಗಮಿಸಿದ್ದ ಅಮಿತ್ ಶಾ, ಈಶ್ವರಪ್ಪ ಅವರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈಶ್ವರಪ್ಪನವರ ಸಿಟ್ಟು ತಣ್ಣಗಾಗದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದ್ದರು ಸೂಚನೆಯ ಮೇರೆ ಈಶ್ವರಪ್ಪ ನಿನ್ನೆ ಬೆಳಗ್ಗೆ ದೆಹಲಿಗೆ ಪ್ರಯಾಣಿಸಿದ್ದರು. ಆದರೆ, ಇಡೀ ದಿನ ಕಾದರೂ ಅಮಿತ್ ಶಾ ದರ್ಶನ ಸಿಗದೇ ರಾಜ್ಯಕ್ಕೆ ಈಶ್ವರಪ್ಪ ವಾಪಸ್ಸಾಗಿದ್ದಾರೆ.

    ಅಷ್ಟೇ ಅಲ್ಲ ತಾವು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವುದು ಪಕ್ಷದ ನಿಲುವಾಗಿದೆ ಅದಕ್ಕಾಗಿಯೇ ಅಮಿತ್ ಶಾ ತಮ್ಮನ್ನು ಭೇಟಿಯಾಗಿಲ್ಲ ಎಂದು ಹೇಳಿರುವ ಈಶ್ವರಪ್ಪ ಅವರ ಸವಾಲು ಸಂಸದ ರಾಘವೇಂದ್ರ ಅವರಿಗೆ ದೊಡ್ಡ ಸಮಸ್ಯೆ ತಂದೊಡ್ಡುವ ಸಾಧ್ಯತೆಗಳಿವೆ.
    ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಸದಾನಂದ ಗೌಡ ಅವರು ಕ್ಷೇತ್ರದಿಂದ ಮತ್ತೊಮ್ಮೆ ಕಣಕ್ಕಿಳಿಯಲು ಬಯಸಿದರು ಆದರೆ ಅವರಿಗೆ ಪಕ್ಷ ಟಿಕೆಟ್ ನಿರಾಕರಿಸಿದೆ ಈ ಹಿನ್ನೆಲೆಯಲ್ಲಿ ಬಂಡಾಯದ ಬಾವುಟ ಹಾರಿಸಲು ಯತ್ನಿಸಿದ ಅವರು ಅಂತಿಮವಾಗಿ ಸುಮ್ಮನಾದರು ಪಕ್ಷದ ಅಭ್ಯರ್ಥಿ ಪರವಾಗಿ ಯಾವುದೇ ಚಟುವಟಿಕೆಯಲ್ಲಿ ತೊಡಗಿಲ್ಲ.
    ಪಕ್ಷದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಖುದ್ದಾಗಿ ಸದಾನಂದ ಗೌಡ ಅವರನ್ನು ಸಂಪರ್ಕಿಸಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರೂ ಸದಾನಂದ ಗೌಡ ಇನ್ನು ಕೂಡ ಅಖಾಡಕ್ಕೆ ತಲುಪಿಲ್ಲ ಅಷ್ಟೇ ಅಲ್ಲ ತಮ್ಮ ಬೆಂಬಲಿಗರಿಗೂ ಯಾವುದೇ ಸೂಚನೆಯನ್ನು ನೀಡಿಲ್ಲ.

    ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಶಕ್ತಿ ಕೇಂದ್ರ ಪ್ರಮುಖರ ಸಭೆಯಿಂದಲೂ ದೂರ ಉಳಿದ ಸದಾನಂದ ಗೌಡ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಇಲ್ಲಿಯವರೆಗೆ ಯಾವುದೇ ಪ್ರಚಾರದಲ್ಲಿ ತೊಡಗಿಲ್ಲ.
    ಇವರನ್ನು ಸಂಪರ್ಕಿಸಿದ ಅಮಿತ್ ಶಾ ವೈಮನಸ್ಯ ಮರೆತು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವಂತೆ ನೀಡಿದ ಸೂಚನೆಗೆ ಸದಾನಂದ ಗೌಡ ಸಮ್ಮತಿ ವ್ಯಕ್ತಪಡಿಸಿದರೂ ಇಲ್ಲಿಯವರೆಗೆ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ತೊಡಗಿಲ್ಲ.
    ತುಮಕೂರಿನಲ್ಲೂ ಮಾಜಿ ಸಚಿವ ಮಾಧುಸ್ವಾಮಿ ತಮ್ಮ ನಿಲುವು
    ಒಟ್ಟಾರೆ ಅಮಿತ್ ಶಾ ಅವರ ಮಧ್ಯ ಪ್ರವೇಶದ ನಂತರವೂ ಬಿಜೆಪಿಯಲ್ಲಿ ಉಂಟಾಗಿರುವ ಅಪಸ್ವರ ಮರೆಯಾಗಿಲ್ಲ.

    Amit Shah Karnataka m mi News Politics Trending ಈಶ್ವರಪ್ಪ ಚುನಾವಣೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜವಂಶಸ್ಥರು ಮತ್ತು ಜನಸಾಮಾನ್ಯರ ಸೆಣೆಸಾಟ (ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ) | Mysuru Kodagu Constituency
    Next Article ಗಿಡ ನೆಟ್ಟು ಪ್ರಚಾರ ಆರಂಭಿಸಿದ ಮನ್ಸೂರ್ ಅಲಿಖಾನ್ | Mansoor Ali Khan
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 20gfw ರಲ್ಲಿ ನಟಿ ರನ್ಯಾ ಚಿನ್ನ ಸಾಗಿಸೋದು ಹೇಗೆ ಗೊತ್ತಾ..
    • b7rb4 ರಲ್ಲಿ ಫೋನ್ ಕದ್ದಾಲಿಕೆ ಬಗ್ಗೆ ದೂರು ಸಲ್ಲಿಸಲು ಡಿಸಿಎಂ ಸೂಚನೆ.
    • Chriswot ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe