Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi
    Viral

    ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi

    vartha chakraBy vartha chakraಡಿಸೆಂಬರ್ 14, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ, ಡಿ.14- ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ (Belagavi) ನಿನ್ನೆ ತಡ ರಾತ್ರಿ ನಡೆದ ಕಾಂಗ್ರೆಸ್ ಶಾಸಕರ ಔತಣಕೂಟದಲ್ಲಿ ಬಿಜೆಪಿಯ ಮೂವರು ಶಾಸಕರುಗಳು ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.
    ಇದೊಂದು ಔತಣ ಕೂಟ ಇದರಲ್ಲಿ ಸ್ನೇಹಿತರಾದ ಶಾಸಕರು ಭಾಗವಹಿಸಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಕಾಂಗ್ರೆಸ್ ಹೇಳಿದರೇ ಇದು‌ ಶಿಸ್ತಿನ ಉಲ್ಲಂಘನೆ ಅಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
    ಬೆಳಗಾವಿ ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು ಸಭೆಯ ನಂತರ ಶಾಸಕರುಗಳಿಗೆ ಔತಣ ಕೂಟ ಆಯೋಜಿಸಲಾಗಿತ್ತು. ಈ ಔತಣ ಕೂಟದಲ್ಲಿ ಬಿಜೆಪಿ ಶಾಸಕರುಗಳಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪಾಲ್ಗೊಂಡಿದ್ದರು.
    ಇವರುಗಳು ಕಾಂಗ್ರೆಸ್ ಸೇರುತ್ತಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಮಶೇಖರ್ ಮತ್ತು ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ‌ ಕಣಕ್ಕಿಳಿಯಲಿದ್ದಾರೆ‌ ಎನ್ನಲಾಗಿದ್ದು,ಇವರ ಹಾಜರಿ ಕುತೂಹಲ ಮೂಡಿಸಿದೆ.

    ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ನಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ಜೆಡಿಎಸ್‌ನ ವಿಶ್ವನಾಥ್ ರವರು ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಸಮ್ಮಿಶ್ರ ಸರ್ಕಾರದ ಪಥನವಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದರು.
    ಬಿಜೆಪಿ ಸರ್ಕಾರದಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಚಿವರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿಯಿಂದ ಗೆದ್ದಿದ್ದ ಈ ಇಬ್ಬರು ಮತ್ತೆ ಕಾಂಗ್ರೆಸ್‌ನತ್ತ ವಾಲಿದ್ದರು.
    ಬಿಜೆಪಿಯಲ್ಲಿ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಇವರುಗಳು, ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದರು. ಈ ಎಲ್ಲದರ ಮಧ್ಯೆ ಅಧಿವೇಶನದಲ್ಲೂ ಬಿಜೆಪಿ ನಡೆಸುವ ಧರಣಿ ಸಭಾತ್ಯಾಗದಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಭಾಗಿಯಾಗುತ್ತಿರಲಿಲ್ಲ. ಈಗ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ಔತಣಕೂಟದಲ್ಲಿ ಇವರುಗಳು ಭಾಗಿಯಾಗಿರುವುದು ಕಾಂಗ್ರೆಸ್ ಸೇರುವುದನ್ನು ಖಚಿತಗೊಳಿಸಿದೆ.

    ಊಟಕ್ಕೆ ಬಂದಿದ್ದರು:
    ಬಿಜೆಪಿ ಶಾಸಕರುಗಳಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ರವರು ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿಲ್ಲ. ಭೋಜನ ಕೂಟಕ್ಕೆ ಬಂದಿದ್ದರು ಅಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
    ಔತಣಕೂಟಕ್ಕೆ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ವಿಶ್ವನಾಥ್ ಸೇರಿದಂತೆ ಅನ್ಯ ಪಕ್ಷದ ಹತ್ತು ಶಾಸಕರು ಬಂದಿದ್ದರು. ಇವರು ಸಿಎಲ್‌ಪಿ ಸಭೆಗೆ ಬಂದಿಲ್ಲ. ನಮ್ಮ ಶಾಸಕಾಂಗ ಪಕ್ಷದ ಸಭೆಗ ಅವರು ಏಕೆ ಬರುತ್ತಾರೆ ಅವರು ನಮ್ಮ ಪಕ್ಷದ ಶಾಸಕರಲ್ಲ ಎಂದು ಹೇಳಿದರು.
    ನಮ್ಮ ಆಹ್ವಾನದ ಮೇರೆಗೆ ಭೋಜಕೂಟ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಅಷ್ಟೇ ಎಂದು ಅವರು ಹೇಳಿದರು.

    ಶಿಸ್ತು ಉಲ್ಲಂಘನೆಯಲ್ಲ:
    ಕಾಂಗ್ರೆಸ್ ಶಾಸಕರ ಭೋಜನ ಕೂಟದ ಸಭೆಗೆ ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಇವರುಗಳು ಭಾಗಿಯಾಗಿರುವುದು ಪಕ್ಷದ ಶಿಸ್ತು ಉಲ್ಲಂಘನೆ ಅಲ್ಲ. ಅವರು ಊಟಕ್ಕೆ ಕರೆದಿದ್ದಾರೆ ಇವರು ಹೋಗಿದ್ದಾರೆ ಅಷ್ಟೇ. ಈ ಬಗ್ಗೆ ಎಸ್.ಟಿ. ಸೋಮಶೇಖರ್ ನನ್ನ ಬಳಿ ಮಾತನಾಡಿದ್ದಾರೆ ಎಂದು ಅಶೋಕ್ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
    ಭೋಜನಕೂಟದಲ್ಲಿ ಪಾಲ್ಗೊಂಡಿರುವ ಹೆಬ್ಬಾರ್ ಮತ್ತು ವಿಶ್ವನಾಥ್ ಜತೆಯೂ ಮಾತನಾಡುತ್ತೇನೆ. ಕಳೆದ ಮೂರು ತಿಂಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಏನೇ ಇರಲಿ ಎಲ್ಲವನ್ನು ಮಾತನಾಡಿ ಸರಿಪಡಿಸಿಕೊಳ್ಳೋಣಅವರು ಭೋಜನ ಕೂಟಕ್ಕೆ ಹೋಗಿದ್ದನ್ನೇ ಶಿಸ್ತು ಉಲ್ಲಂಘನೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಅಶೋಕ್ ಹೇಳಿದರು.

     

    ALSO READ | Latest Kannada News | Kannada News Portal

     

    #kannada belagavi Government kannada news Karnataka News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಸಂಸತ್ ಮೇಲೆ ದಾಳಿಗೆ ಮೈಸೂರಿನಲ್ಲಿ ಸ್ಕೆಚ್ | Lok Sabha Security Breach
    Next Article ಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. 26vgv on ಜೂನ್ 8, 2025 8:48 ಫೂರ್ವಾಹ್ನ

      cost clomiphene prices where to get clomiphene pill clomiphene nz prescription where can i buy cheap clomid no prescription can i buy clomid price where can i buy clomid clomid generico

      Reply
    2. order cialis online pharmacy on ಜೂನ್ 10, 2025 12:51 ಫೂರ್ವಾಹ್ನ

      I couldn’t turn down commenting. Well written!

      Reply
    3. flagyl metronidazole on ಜೂನ್ 11, 2025 7:10 ಅಪರಾಹ್ನ

      I am actually delighted to glance at this blog posts which consists of tons of useful facts, thanks towards providing such data.

      Reply
    4. jqsvr on ಜೂನ್ 19, 2025 6:29 ಫೂರ್ವಾಹ್ನ

      buy inderal online cheap – clopidogrel 75mg usa buy generic methotrexate

      Reply
    5. 3jn7j on ಜೂನ್ 22, 2025 3:15 ಫೂರ್ವಾಹ್ನ

      buy amoxicillin no prescription – diovan 80mg us ipratropium 100 mcg price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5ffqr ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    • Stephenanync ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಕ್ತು ಬಿಗ್ ರಿಲೀಫ್ | Darshan
    • hu61e ರಲ್ಲಿ ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe