ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಡಾಯದ ಧಗೆಯಲ್ಲಿ ಬಸವಳಿದ BJP
    ಸುದ್ದಿ

    ಬಂಡಾಯದ ಧಗೆಯಲ್ಲಿ ಬಸವಳಿದ BJP

    vartha chakraBy vartha chakraಏಪ್ರಿಲ್ 13, 2023Updated:ಏಪ್ರಿಲ್ 14, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.12- ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕು ಎಂದು ಸಾಕಷ್ಟು ಅಳೆದು ತೂಗಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರು ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕೆಲವರು ಪಕ್ಷಕ್ಕೆ ಗುಡ್ ಬೈ ಹೇಳತೊಡಗಿದ್ದಾರೆ.ಈ ರಾಜೀನಾಮೆ ಪರ್ವ ಕಮಲ ಪಾಳಯದಲ್ಲಿ ಕಂಪನ ಸೃಷ್ಟಿಸಿದೆ.
    ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಗೂಳಿಹಟ್ಟಿ ಶೇಖರ್, ಸೊಗಡು ಶಿವಣ್ಣ, ಶಾಸಕರಾದ ರಘುಪತಿ ಭಟ್ ಸೇರಿದಂತೆ ಹಲವರು ಬಂಡಾಯ ಅಭ್ಯರ್ಥಿಗಳಾಗಿ ಅಥವಾ ಬೇರೆ ಪಕ್ಷದ ಹುರಿಯಾಳುಗಳಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿರುವುದು ಬಿಜೆಪಿ ನಾಯಕರಿಗೆ ತಲೆನೋವು ತರಿಸಿದೆ.
    ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೇ ಬಿಜೆಪಿಗೆ ಗುಡ್‍ಬೈ ಹೇಳಿದ್ದರೆ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಕೂಡ ಪಕ್ಷ ಬಿಡುವ ಸುಳಿವು ಕೊಟ್ಟಿದ್ದು, ಜನಾರ್ದನರೆಡ್ಡಿ ನೇತೃತ್ವದ ಕೆಕೆಪಿಪಿ ಪಕ್ಷವನ್ನು ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.
    ಸುಮಾರು 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ವರಿಷ್ಠರ ಮನವೊಲಿಕೆಗೂ ಜಗ್ಗದ ಅಸಮಾಧಾನಿತರು ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬೇರೆ ಬೇರೆ ಪಕ್ಷಗಳತ್ತ ಮುಖ ಮಾಡುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

    Laxman Savadi

    ಬೆಳಗಾವಿ ಜಿಲ್ಲೆ, ಅಥಣಿ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಗಾಣಿಗ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೂ ರಾಜೀನಾಮೆ ಘೋಷಿಸಿರುವುದು ಕಮಲ ಪಾಳಯಕ್ಕೆ ಬರಸಿಡಿಲಿನಂತೆ ಅಪ್ಪಳಿಸಿದೆ.
    ಮೂಲಗಳ ಪ್ರಕಾರ, ಸವದಿ ಗುರುವಾರ ಕಾಂಗ್ರೆಸ್ ಸೇರುವ ಸಾಧ್ಯತೆ ಹೆಚ್ಚಳವಾಗಿದ್ದು, ಅಥಣಿಯಿಂದಲೇ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.
    ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದ ಆಕಾಂಕ್ಷಿಯಾಗಿದ್ದ ಮ್ಯಾಸ ನಾಯಕ, ಚಳ್ಳಕೆರೆಯಿಂದ ಚಿತ್ರನಟ ಶಶಿಕುಮಾರ್ ಸೇರಿದಂತೆ ಅನೇಕರು ಪಕ್ಷದ ತೀರ್ಮಾನದ ವಿರುದ್ಧ ಸಡ್ಡು ಹೊಡೆಯುವ ಮುನ್ಸೂಚನೆ ಕೊಟ್ಟಿದ್ದಾರೆ.
    ತುಮಕೂರು ನಗರದ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಕೂಡ ಸಡ್ಡು ಹೊಡೆಯುವ ಸಾಧ್ಯತೆ ಇದೆ. ಹಾಲಿ ಶಾಸಕ ಜ್ಯೋತಿ ಗಣೇಶ್‍ಗೆ ಟಿಕೆಟ್ ಘೋಷಣೆ ಮಾಡಿರುವುದು ಅವರ ಕಣ್ಣು ಕೆಂಪಾಗಿಸಿದೆ.ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸೊಗಡು ಶಿವಣ್ಣ ಘೋಷಣೆ ಮಾಡಿರುವುದು ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಂತಾಗಿದೆ.
    ಸವದಿ‌ ಮನವೊಲಿಕೆ :
    ಮತ್ತೊಂದೆಡೆ ಕಾಂಗ್ರೆಸ್ ಸೆರಲು ಸಜ್ಜುಗೊಂಡಿರುವ ಹಿರಿಯ ನಾಯಕ ಲಕ್ಷ್ಮಣ ಸವದಿ ಅವರನ್ನ ಸಮಾಧಾನಪಡಿಸುವ ಕೆಲಸ ಆರಂಭವಾಗಿದೆ.ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಭರವಸೆ ನೀಡಿದ್ದು ಪಕ್ಷ ತೊರೆದಂತೆ ಮನವಿ ಮಾಡಲಾಗಿದೆ.

    ಸಿ ಎಂ ಮನವಿ:
    ಈ ನಡುವೆ ಯಾವುದೇ ಕಾರಣಕ್ಕೂ ಲಕ್ಷ್ಮಣ ಸವದಿ ಆತುರದ ನಿರ್ಧಾರ ತೆಗೆದುಕೊಳ್ಳಬಾರದು. ಪಕ್ಷದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಉತ್ತಮ ಭವಿಷ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೂ ಲಕ್ಷ್ಮಣ ಸವದಿಗೂ ಅವಿನಾಭಾವ ಸಂಬಂಧವಿದೆ. ಟಿಕೆಟ್ ಕೈತಪ್ಪಿರುವುದಕ್ಕೆ ಅವರು ಅಸಮಾಧಾನಗೊಂಡಿರುವುದು ನಿಜ. ಅವರ ಜತೆ ನಾನು ದೂರವಾಣಿ ಮೂಲಕ ಮಾತನಾಡಿದ್ದೇನೆ. ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದ್ದೇನೆ. ಬರುವ ದಿನಗಳಲ್ಲಿ ಅವರಿಗೆ ಪಕ್ಷ ಉತ್ತಮವಾದ ಸ್ಥಾನಮಾನ ನೀಡಲಿದೆ ಎಂಬ ಆಶ್ವಾಸನೆ ನೀಡಿದರು.
    ಲಕ್ಷ್ಮಣ ಸವದಿ ನನ್ನ ಬಗ್ಗೆ ಹೇಳಿರುವುದು ಅಪ್ರಸ್ತುತ. ನಾನು ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಕ್ಕೂ ಹೋಗುವ ಪ್ರಯತ್ನ ಮಾಡಿರಲಿಲ್ಲ. ಮನೆಯಲ್ಲೇ ಇದ್ದಾಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ದೂರವಾಣಿ ಮೂಲಕ ಕರೆ ಮಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ಕೊಟ್ಟರು. ನನ್ನ ಜತೆ ಆಗ ಸವದಿ, ಸಿ.ಸಿ.ಪಾಟೀಲ್, ಇದ್ದರು. ನಾನು ಸ್ಥಿತಪ್ರಜ್ಞ ಎಂದು ಪರೋಕ್ಷವಾಗಿ ಸವದಿ ಹೇಳಿಕೆಗೆ ತಿರುಗೇಟು ನೀಡಿದರು.
    ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದೆಹಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಅವರು ದೆಹಲಿಗೆ ಹೋಗಿದ್ದಾರೆ. ಅಲ್ಲಿ ಮಾತನಾಡುತ್ತಾರೆ, ಮುಂದೇನಾಗುತ್ತದೆಯೋ ನೋಡೋಣ ಎಂದರು.
    ಕೆಲವು ಅಸಮಾಧಾನಿತರ ಮೇಲೆ ನಾನೇ ಮಾತನಾಡಿದ್ದೇನೆ. ಬಹುತೇಕ ಎಲ್ಲ ಕ್ಷೇತ್ರಗಳಿಗೂ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ ಎಂದು ಬೊಮ್ಮಾಯಿ ಸಮರ್ಥಿಸಿಕೊಂಡರು.
    ಮೊದಲ ಹಂತದಲ್ಲಿ ವರಿಷ್ಠರು 189 ಕ್ಷೇತ್ರಗಳಿಗೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಎರಡು ದಿನಗಳಲ್ಲಿ ಉಳಿದಿರುವ ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಬಹುದು. ಈ ಬಾರಿ ನಮಗೆ ಖಂಡಿತವಾಗಿಯೂ ಬಹುಮತ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    BJP ಕಾಂಗ್ರೆಸ್ ಚುನಾವಣೆ ತುಮಕೂರು ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ಶೃತಿ ವಿರುದ್ಧ ದ್ವೇಷ ಭಾಷಣದ ಕೇಸ್
    Next Article Election ಇವರಿಗೆಲ್ಲಾ ಭಾರಿ Demand…!
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Tccuuy on ಮಾರ್ಚ್ 22, 2026 7:18 ಅಪರಾಹ್ನ

      Mostbet – o lugar certo para quem ama jogos e adora ganhar – https://mostbetpt.pro/ , Entre agora no Mostbet e comece com 200% a mais + 150 rodadas de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mbwrio ರಲ್ಲಿ ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    • RichardmoG ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Edwardheike ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.