Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ
    ಸುದ್ದಿ

    BJP ಬಿಡುಗಡೆ ಮಾಡಿದ ಕಲೆಕ್ಷನ್ ವಂಶಾವಳಿ

    vartha chakraBy vartha chakraಅಕ್ಟೋಬರ್ 20, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.20- ಹಿಂದಿನ ಬಿಜೆಪಿ (BJP) ಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನದ ಮೂಲಕ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಗೆ ಇದೀಗ ಬಿಜೆಪಿ ಅದೇ ಅಸ್ತ್ರವನ್ನು ಪ್ರಯೋಗ ತೊಡಗಿಸಿದೆ.
    ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ನ ಎಟಿಎಂ ಸರ್ಕಾರ ಎಂದು ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಇದೀಗ ಕಲೆಕ್ಷನ್ ವಂಶಾವಳಿ ಎಂಬ ಪೋಸ್ಟರ್ ಬಿಡುಗಡೆ ಮಾಡಿದೆ.

    ಕನ್ನಡ ಹಾಗೂ ಇಂಗ್ಲಿಷ್‍ನಲ್ಲಿರುವ ಈ ಎರಡು ಪೋಸ್ಟರ್ ಗಳಿಗೆ ಎಟಿಎಂ ಸರ್ಕಾರದ ಕಲೆಕ್ಷನ್ ವಂಶಾವಳಿ ಎಂದು ಶೀರ್ಷಿಕೆ ನೀಡಲಾಗಿದೆ. ಇತ್ತೀಚೆಗೆ ಉದ್ಯಮಿ ಅಂಬಿಕಾಪತಿ ಮನೆಯ ಮಂಚದ ಕೆಳಗೆ ಬಾಕ್ಸ್‌ ನಲ್ಲಿ ಸಿಕ್ಕ 500 ಮುಖಬೆಲೆಯ ನೋಟುಗಳನ್ನು ಪ್ರದರ್ಶಿಸಲಾಗಿದೆ ಪೋಸ್ಟರ್ ನ ಮೇಲ್ಭಾಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಲಭಾಗದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಡಭಾಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಧ್ಯಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಭಾಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಳಭಾಗದಲ್ಲಿ ಡಾ.ಯತೀಂದ್ರ, ಸಚಿವ ಭೈರತಿ ಸುರೇಶ್, ಅಂಬಿಕಾಪತಿ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಪ್ರದೀಪ್, ಪ್ರಮೋದ್, ಪ್ರಹ್ಲಾದ್, ಅವರ ಭಾವಚಿತ್ರಗಳನ್ನು ಹಾಕಲಾಗಿದೆ.

    ರಾಮಯ್ಯ ಮತ್ತು ಕೆಂಪಣ್ಣ ಅವರನ್ನು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಏಜೆಂಟ್‍ಗಳೆಂದು ಆರೋಪಿಸಲಾಗಿದೆ ಮತ್ತೊಂದು ಚಿತ್ರದಲ್ಲಿ ಪ್ರದೀಪ್, ಪ್ರಮೋದ್, ಪ್ರಹ್ಲಾದ್ ಅವರುಗಳನ್ನು ಕಲೆಕ್ಷನ್ ಏಜೆಂಟ್ ಎಂದು ಬಿಂಬಿಸಿದ್ದು, ಕಾಂಗ್ರೆಸ್ ಪಕ್ಷ ಲೂಟಿ ಕಂಪನಿ ಎಂದು ಆರೋಪಿಸಿದೆ.
    ಕೇಂದ್ರದ ಮಾಜಿ ಸಚಿವ ಸದಾನಂದಗೌಡ, ಶಾಸಕ ಎಲ್.ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣ ಸ್ವಾಮಿ ಅವರು ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದರು.

    ಪೈಪೋಟಿ ನಡೆಯುತ್ತಿದೆ:
    ಈ ವೇಳೆ ಮಾತನಾಡಿದ ಸದಾನಂದ ಗೌಡ,ಕಮಿಷನ್ ಹೊಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಆಪಾದಿಸಿದರು.
    ಕಳೆದ ಐದು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ. ಸಿಎಂ ಹಾಗೂ ಡಿಸಿಎಂ ನಡುವೆ ಕಮಿಷನ್ ಪಡೆಯುವುದರಲ್ಲಿ ಪೈಪೋಟಿ ಏರ್ಪಟ್ಟಿದೆ. ನಾನು ಹೆಚ್ಚು ಹೊಡೆಯಬೇಕು, ಅವರು ಹೆಚ್ಚು ಹೊಡೆಯಬೇಕೋ ಎಂದು ಸ್ಪರ್ಧೆಗಿಳಿದ್ದವರಂತೆ ವಸೂಲಿ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕಲೆಕ್ಷನ್ ಸರ್ಕಾರ ಮುಖ್ಯಸ್ಥ ಎಂದು ಟೀಕಾ ಪ್ರಹಾರ ನಡೆಸಿದರು.
    ಐದು ತಿಂಗಳಿನಿಂದ ಸರ್ಕಾರದ ಆಡಳಿತ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಕಲೆಕ್ಷನ್ ಸರ್ಕಾರ ಎಂದು ನಾವು ಹೇಳುತ್ತಿಲ್ಲ. ಜನರೇ ಹಾದಿಬೀದಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ದೆಹಲಿಯು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಕೇಂದ್ರಬಿಂದು ಎಂದು ದೂರಿದರು.

    ಕರ್ನಾಟಕದಲ್ಲಿ ವಸೂಲಿ ಮಾಡುವ ಕಮಿಷನ್ ಹಣದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಗೂ ಹೋಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಕಲೆಕ್ಷನ್ ಮಾಡಿ ಸುರ್ಜೆವಾಲಗೆ ನೀಡಿದರೆ ಶಿವಕುಮಾರ್ ವೇಣುಗೋಪಾಲ್‍ಗೆ ಕೊಡಬೇಕು, ಸಿಎಂ ಮತ್ತು ಡಿಸಿಎಂ ಬಣದ ಗುತ್ತಿಗೆದಾರರು ಕಮೀಷನ್ ಕಲೆಕ್ಷನ್‍ನ ಪ್ರಮುಖ ರೂವಾರಿಗಳೆಂದು ಆಪಾದಿಸಿದರು.
    ಸಿನಿಮಾ ಪೋಸ್ಟರ್ ಥರ ಈ ಪೋಸ್ಟರ್‍ಗಳನ್ನು ಹಾಕುತ್ತೇವೆ. ರಾಜ್ಯದ ಹಣ ಕೊಳ್ಳೆ ಹೊಡೆಯುವವರ ವಿರುದ್ಧ ನಾವಿದ್ದೇವೆ. ಇದಕ್ಕೆ ಬೇಕಾದರೆ ನಮ್ಮನ್ನು ಐಟಿ ವಕ್ತಾರರು ಅಂದರೂ ಅದಕ್ಕೆ ನಾವು ಸ್ವಾಗತ ಎಂದರು.

    ATM Sarkara BJP Congress Government Karnataka News ಕಲೆ ಕಾಂಗ್ರೆಸ್ ಸಿದ್ದರಾಮಯ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    Next Article ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 5, 2025 6:00 ಫೂರ್ವಾಹ್ನ

      ?Celebremos a cada cazador de emociones intensas !
      Jugar en casinos sin verificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino Retiro Sin VerificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casino sin registro.
      Jugar en casinoretirosinverificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casino sin verificaciГіn.
      Casino crypto sin kyc, entretenimiento confiable – п»їhttps://casinoretirosinverificacion.com/
      ?Que la suerte te beneficie con que el destino te brinde emocionantes botes destacados!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • emergency locksmith wallsend ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • elektrokarniz kypit_xbsl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • elektricheskie jaluzi_gpot ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe