Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath
    Trending

    ಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath

    vartha chakraBy vartha chakraಡಿಸೆಂಬರ್ 4, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬರುವ ಲೋಕಸಭಾ ಚುನಾವಣೆಯ ರಿಹರ್ಸಲ್ ಎಂದೇ ಪರಿಗಣಿಸಲಾದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ.
    ಆಡಳಿತ ವಿರೋಧಿ ಅಲೆ,ಭಿನ್ನಮತ ಕಮೀಷನ್ ಆರೋಪದಿಂದ ನಲುಗಿದ ಮಧ್ಯ ಪ್ರದೇಶದಲ್ಲಿ ಮತದಾರ ಈ ಬಾರಿ ‌ಕಾಂಗ್ರೆಸ್ ಗೆ ಮನ್ನಣೆ ನೀಡಲಿದ್ದಾನೆ ಎಂಬ ವಾತಾವರಣ ಮನೆ ಮಾಡಿತ್ತು. ಚುನಾವಣೆ ಪೂರ್ವ ನಡೆದ ಹಲವಾರು ಸಮೀಕ್ಷೆಗಳು ಬಿಜೆಪಿ ಆಡಳಿತ ಕೊನೆಯಾಗಲಿದೆ ಎಂದು ತಿಳಿಸಿದ್ದವು.

    ಆದರೆ, ನಂತರದಲ್ಲಿ ನಡೆದ ವಿದ್ಯಮಾನಗಳು ಹಾಗೂ ಕಾಂಗ್ರೆಸ್ ಚುನಾವಣಾ ಸಾರಥಿ ಕಮಲ್ ನಾಥ್ (Kamal Nath) ಅವರ ಧೋರಣೆ ಜಯವನ್ನು ಚಿನ್ನದ ಹರಿವಾಣದಲ್ಲಿಟ್ಟು ಬಿಜೆಪಿಗೆ ಕೊಡುವಂತಾಯಿತು ಎಂಬ ಸತ್ಯ ಬೆಳಕಿಗೆ ಬಂದಿದೆ.
    ಡಬಲ್ ಎಂಜಿನ್ ಸರ್ಕಾರಗಳು ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ್ದರ ಪರಿಣಾಮ ಫಲಿತಾಂಶ ಬರುತ್ತಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಜನರ ಹೃದಯದಲ್ಲಿದ್ದಾರೆ. ಈ ರಾಜ್ಯವೂ ಸಹ ಮೋದಿ ಅವರ ಹೃದಯದಲ್ಲಿದೆ. ರಾಜ್ಯದಲ್ಲಿ ಮೋದಿ ಅವರ ಬಗ್ಗೆ ಅಪಾರ ನಂಬಿಕೆ ಇದೆ. ಅವರು ಸಾರ್ವಜನಿಕ ರ್‍ಯಾಲಿಗಳನ್ನು ನಡೆಸಿ ಮಾಡಿದ ಮನವಿ ಜನರ ಹೃದಯವನ್ನು ಮುಟ್ಟಿದೆ. ಅದು ಫಲಿತಾಂಶದಲ್ಲಿ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
    ಇದು ಮೇಲ್ನೋಟಕ್ಕೆ ಸತ್ಯವೆಂದು ಕಂಡರೂ ವಾಸ್ತವ ಸಂಪೂರ್ಣ ಬೇರೆಯೆದ್ದೇ ಆಗಿದೆ.ಕಾಂಗ್ರೆಸ್ ನ ತಂತ್ರ,
    ಚುನಾವಣಾ ಪ್ರಚಾರ ಎಲ್ಲವೂ ಸರಿಯಾದ ದಿಕ್ಕಿನಲ್ಲಿ ಸಾಗಿತ್ತು. ಜೊತೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಕೂಡಾ ಸಾಕಷ್ಟು ಪರಿಣಾಮ ಬೀರಿತ್ತು. ಆದರೆ,ಎಲ್ಲವನ್ನೂ ಹಾಳು ಮಾಡಿದ್ದು ಕಮಲ್ ನಾಥ್ ಅವರ ಧೋರಣೆ ಹಾಗೂ ಕಾರ್ಯಶೈಲಿ.

    ಮೊದಲಿಗೆ ನಾನೇ ಸರ್ವೋತ್ತಮ ಎಂಬ ಕಮಲ್ ನಾಥ್ ಅವರ ಕಾರ್ಯಶೈಲಿ ಕಾರ್ಯಕರ್ತರನ್ನು ಪಕ್ಷದಿಂದ ದೂರ ಇರುವಂತೆ ಮಾಡಿದರೆ,ಇವರ ಅಹಂಕಾರದ ನಡವಳಿಕೆ ಇತರೆ ನಾಯಕರಿಗೆ ಮುಜುಗರ ತಂದೊಡ್ಡಿತು.
    ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ರಾಹುಲ್,ಪ್ರಿಯಾಂಕಾ ಯಾರೊಬ್ಬರ ಮಾತು ಕೇಳದ ಕಮಲ್‌ನಾಥ್ ತಮ್ಮ ಮೂಗಿನ ನೇರಕ್ಕೆ ನಿರ್ಧಾರ ತೆಗೆದುಕೊಂಡು ಅದನ್ನು ಎಲ್ಲರ ಮೇಲೂ ಹೇರಿದರು.ಚುನಾವಣೆ ಸಮಯ ಎಂದೂ‌ ಯಾವ ನಾಯಕರೂ ಇದನ್ನು ಬಹಿರಂಗವಾಗಿ ವಿರೋಧಿಸದಿದ್ದರೂ‌‌ ಕಾರ್ಯಕರ್ತರು ಮಾತ್ರ ಇದನ್ನು ಒಪ್ಪಲಿಲ್ಲ.
    ಇನ್ನೂ ಹಿಂದೂ ಪರವಾದ‌ ಮತಗಳ ಕ್ರೋಡೀಕರಣ ದೃಷ್ಟಿಯಿಂದ ಇವರ ನಡವಳಿಕೆ ಯಾರನ್ನೂ ನಂಬಿಸಲಿಲ್ಲ.ಪ್ರಬಲ ಹಿಂದುತ್ವ ಪ್ರತಿಪಾದನೆಯ ಬಿಜೆಪಿ ತಮ್ಮ ಆಯ್ಕೆ ಮಾಡಿಕೊಂಡ ಮತದಾರರು ಕಮಲ್ ನಾಥ್ ಅವರ ಹಿಂದುತ್ವ ನಿಲುವು ಒಪ್ಪಲಿಲ್ಲ. ಅದು‌ ಇವರ ಪಾಲಿಗೆ ಗಿಮಿಕ್ ಎಂದು ಕಾಣಿಸಿದರೆ, ದಲಿತ,ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮತದಾರರ ವಿಶ್ವಾಸಗಳಿಸುವಲ್ಲಿ ವಿಫಲವಾಯಿತು.
    ಇದರ ನಡುವೆ ದಿಗ್ವಿಜಯ್ ಸಿಂಗ್ ಸೇರಿದಂತೆ ಕೆಲವು ನಾಯಕರ ವರ್ತನೆಗಳು ಕಾಂಗ್ರೆಸ್ ಪಕ್ಷದ ಮತದಾರರ ಒಲವನ್ನು ಬಿಜೆಪಿಯತ್ತ ತಿರುಗುವಂತೆ ಮಾಡಿತು.

    Verbattle
    Verbattle
    Verbattle
    Kamal Nath Karnataka m News Politics Trending ಕಾಂಗ್ರೆಸ್ ಚಿನ್ನ ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಅನ್ನು ಸೋಲಿಸಿದ ವಯಸ್ಸು | State Elections
    Next Article ಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • LinwoodGah ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LeonardReawn ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.