Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa
    ರಾಜಕೀಯ

    BJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa

    vartha chakraBy vartha chakraಮಾರ್ಚ್ 1, 2023Updated:ಮಾರ್ಚ್ 1, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.1- ಬಿಜೆಪಿಗೆ ಮಲೆ ಮಾದೇಶ್ವರನ ಆಶೀರ್ವಾದ ಲಭಿಸಿದೆ.ವಿಜಯ ಸಂಕಲ್ಪ ಯಾತ್ರೆಗೆ ಜನ ಬೆಂಬಲ ವ್ಯಕ್ತವಾಗಿದ್ದು,ಈ ಯಾತ್ರೆ ಮೂಲಕ ಬಿಜೆಪಿಗೆ ಬಹುಮತ ಲಭಿಸಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಅವರು ಬಳಿಕ ಸೋಲಿಗ ಜನಾಂಗದವರ ಸಂವಾದ ಸಭೆಯಲ್ಲಿ ಮಾತನಾಡಿದರು.
    ರಾಜ್ಯದ 4 ಕಡೆಗಳಿಂದ ಆರಂಭವಾಗುವ ಯಾತ್ರೆ 224 ಕ್ಷೇತ್ರಗಳಲ್ಲೂ ನಡೆಯಲಿದೆ. 150ಕ್ಕೂ ಹೆಚ್ಚು ರೋಡ್ ಷೋ, ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದೇವೆ. ಬೆಳಗಾವಿಯಲ್ಲಿ ಸಚಿವ ರಾಜನಾಥ ಸಿಂಗ್ ಅವರು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
    ಕಾಂಗ್ರೆಸ್ ನದ್ದು
    ಮತಬ್ಯಾಂಕ್, ಜಾತಿವಾದ, ಭ್ರಷ್ಟಾಚಾರದ ರಾಜಕಾರಣವಾದರೆ ,ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಎಲ್ಲರ ವಿಕಾಸ, ಎಲ್ಲರ ವಿಶ್ವಾಸದೊಂದಿಗೆ ರಾಜಕಾರಣ ಮಾಡುತ್ತಿದೆ ಇದರಿಂದ, ದೇಶವು 5ನೇ ಬೃಹತ್ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ ಎಂದು ಹೇಳಿದರು
    ಮೊಬೈಲ್ ಉತ್ಪಾದನೆ, ಕೈಗಾರಿಕೆ ಸೇರಿ ಭಾರತದ ಪ್ರಗತಿ ಅತ್ಯದ್ಭುತ ಅವಕಾಶ ವಂಚಿತರು, ಶೋಷಿತರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ಎಲ್ಲ ವರ್ಗದವರಿಗೆ ಸೌಲಭ್ಯಗಳನ್ನು ನೀಡಲು ನಮ್ಮ ಪಕ್ಷ ಶ್ರಮಿಸುತ್ತಿದೆ. ಇದಕ್ಕೆ ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಮಾಡಿದ್ದೇ ಸಾಕ್ಷಿ ಎಂದು ತಿಳಿಸಿದರು.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ,
    ವಿಜಯ ಸಂಕಲ್ಪ ಯಾತ್ರೆಯನ್ನು ಜೆ.ಪಿ.ನಡ್ಡಾ ಅವರು ಉದ್ಘಾಟಿಸಿರುವುದು ಪಕ್ಷದವರಿಗೆ ಸಂತಸ, ಸಂಭ್ರಮದ ವಿಚಾರವಾಗಿದೆ. ಈ ರಥ 224 ಕ್ಷೇತ್ರಗಳಲ್ಲಿ ಸುಮಾರು 8 ಸಾವಿರ ಕಿಮೀ ಉದ್ದಕ್ಕೆ 4 ರಥಗಳು ಸಂಚರಿಸಲಿವೆ ಎಂದು ವಿವರಿಸಿದರು.
    ರಾಜ್ಯದಲ್ಲಿ ಭಾಗ್ಯಲಕ್ಷ್ಮಿ ಯೋಜನೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ,ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೇಂದ್ರ- ರಾಜ್ಯ ಸರಕಾರಗಳು ಜಾರಿಗೊಳಿಸಿವೆ ಎಂದು ತಿಳಿಸಿದರು. ಪಕ್ಷದ ಸರಕಾರಗಳ ಜನಪರ ಯೋಜನೆಗಳನ್ನು ಗಮನಿಸಿ ಜನರು ಬಿಜೆಪಿಯನ್ನು ಗೆಲ್ಲಿಸುವುದು ಶತಸ್ಸಿದ್ಧ ಎಂದು ತಿಳಿಸಿದರು.
    ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅಲ್ಲಿ ನಾಯಕರೇ ಇಲ್ಲ ನಮ್ಮಲ್ಲಿ ಮೋದಿಜಿ, ಅಮಿತ್ ಶಾ ಅವರು ಸೇರಿದಂತೆ ಸಮರ್ಥ ನಾಯಕರಿದ್ದಾರೆ ಇದರಿಂದಾಗಿ ಮತ್ತೊಮ್ಮೆ ಬಿಜೆಪಿ ಗೆಲುವು ಖಚಿತ ಎಂದು ತಿಳಿಸಿದರು.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸೋಲಿಗರ ಸಮುದಾಯಕ್ಕೆ ವಿಶೇಷ ಗಮನ ನೀಡಲಿದ್ದೇವೆ. ಕಾಡಿನಲ್ಲಿ ವಾಸಿಸುವವರಿಗೆ ಸೌಲಭ್ಯ ಕೊಡಲು ಅರಣ್ಯ ಕಾಯ್ದೆಗೆ ಕೆಲವು ತಿದ್ದುಪಡಿ ತರಲಾಗುವುದು ಎಂದು ಪ್ರಕಟಿಸಿದರು.
    ಇಲ್ಲಿ ಶೀಘ್ರವೇ ಹೊಸ ಆಸ್ಪತ್ರೆ ತೆರೆಯುತ್ತೇವೆ. ಸ್ತ್ರೀ ಸಾಮಥ್ರ್ಯ ಯೋಜನೆಯಡಿ ಅನುದಾನವನ್ನು ಇಲ್ಲಿನ ಮಹಿಳಾ ಸಂಘಕ್ಕೆ ಕೊಡಲಾಗುವುದು. ಸಣ್ಣ, ಅತಿ ಸಣ್ಣ ಕೈಗಾರಿಕೆ ಮಾಡಲು ಗರಿಷ್ಠ ಅನುದಾನ ನೀಡಲಿದ್ದೇನೆ ಎಂದು ತಿಳಿಸಿದರು.
    ಕಾಡಿನ ಅಂಚಿನಲ್ಲಿರುವ ಜನರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದು ತಿಳಿಸಿದರು. ಸಾಮಾಜಿಕ ನ್ಯಾಯ ಒದಗಿಸಲು ಬದ್ಧ ಎಂದರು.
    ವಿಜಯ ಸಂಕಲ್ಪ ರಥ ಯಾತ್ರೆಗೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದೇವೆ. ಬಿಜೆಪಿ ಗೆಲುವಿನ ಸಂಕಲ್ಪ ಸಿದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಕೇಂದ್ರ- ರಾಜ್ಯ ಸರಕಾರಗಳ ಜನಕಲ್ಯಾಣ ಯೋಜನೆಗಳನ್ನು ಗಮನಿಸಿ ಜನರು ಬಿಜೆಪಿಗೆ ಮತ ಕೊಡಲಿದ್ದಾರೆ ಎಂದು ತಿಳಿಸಿದರು. ಮೀಸಲಾತಿ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಅವರು ತಿಳಿಸಿದರು. ಜನರ ಆಶೀರ್ವಾದ ಬಿಜೆಪಿಯ ಶಕ್ತಿಯಾಗಲಿದೆ ಎಂದು ನುಡಿದರು.
    ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಪ್ರಪಂಚದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ಬಿಜೆಪಿ. ಬೇಡರ ಕಣ್ಣಪ್ಪನ ಜಾತಿಗೆ ಸೇರಿದವರು ಸೋಲಿಗರು. ಅವರು ಕಷ್ಟಕರ ಜೀವನ ಮಾಡುತ್ತಿದ್ದಾರೆ. ಅವರಿಗೆ ಹೆಚ್ಚು ಶೈಕ್ಷಣಿಕ- ಔದ್ಯೋಗಿಕ ಅನುಕೂಲ ಮಾಡಿಕೊಡಲು ಬದ್ಧತೆಯನ್ನು ಪ್ರದರ್ಶಿಸಲಿದ್ದೇವೆ ಎಂದು ತಿಳಿಸಿದರು.
    ಈ ವೇಳೆ ವಿವಿಧ ಜನಪದ ಕಲಾತಂಡಗಳು, ಗೊರವರ ಕುಣಿತ, ವೀರಗಾಸೆ, ಬೇಡಗಂಪಣ ನೃತ್ಯ, ಮಂಗಳವಾದ್ಯ ಮತ್ತಿತರ ಸಾಂಸ್ಕೃತಿಕ ಕಲಾ ತಂಡಗಳ ನಡುವೆ ಯಾತ್ರೆಗೆ ಚಾಲನೆ ನೀಡಲಾಯಿತು. ರಥಯಾತ್ರೆಗೆ ಸಜ್ಜುಗೊಂಡಿರುವ ಬಸ್ ಮೇಲೆ ನಿಂತು ಬಿಜೆಪಿ ನಾಯಕರು ಜನರತ್ತ ಕೈ ಬೀಸಿದರು

    #vijay BJP ಕಾಂಗ್ರೆಸ್ ನ್ಯಾಯ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleAAP ಗೆ ಭಾಸ್ಕರ್ ರಾವ್ ಗುಡ್ ಬೈ-BJP ಸೇರಲು ನಿರ್ಧಾರ
    Next Article ಉತ್ಸವಮೂರ್ತಿ ಯಡಿಯೂರಪ್ಪ ವಿಸರ್ಜನೆಗೊಳ್ಳಲಿದ್ದಾರೆ!
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://femaleinvestorsmagazine.com/inscription-betclic-comment-ouvrir-votre-compte-51/ ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • ngggalsvs ರಲ್ಲಿ ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    • uclowbyac ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe