Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    Viral

    ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar

    vartha chakraBy vartha chakraಸೆಪ್ಟೆಂಬರ್ 14, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಜಮೀನು ವಿವಾದವೊಂದರಲ್ಲಿ ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಿಲುಕಿರುವ ಯೋಜನಾ ಸಚಿವ ಡಿ. ಸುಧಾಕರ್ (D Sudhakar) ವಿರುದ್ಧ ಪ್ರತಿಪಕ್ಷಗಳ ಹೋರಾಟ ತೀವ್ರಗೊಂಡಿದೆ.ಪ್ರಕರಣದ ಬಗ್ಗೆ ವಿಶೇಷ ಆಸಕ್ತಿವಹಿಸಿರುವ ಬಿಜೆಪಿ ಸುಧಾಕರ್ ರಾಜೀನಾಮೆಗೆ ಪಟ್ಟು ಹಿಡಿದಿದೆ.
    ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ ತೆರಳಿದ ಹಿರಿಯ ನಾಯಕ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗ ಸಚಿವರಿಂದ ದೌರ್ಜನ್ಯಕ್ಕೆ ಒಳಗಾದ ದಲಿತ ಮಹಿಳೆ ಮುನಿಯಮ್ಮ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ,ಕೆಲ ಕಾಲ ಸಂತ್ರಸ್ತರೊಂದಿಗೆ ಪ್ರತಿಭಟನೆ ನಡೆಸಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ,ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ ಇದೊಂದು ಕಪ್ಪುಚುಕ್ಕೆ ಎಂದು ಆರೋಪಿಸಿದರು.
    ಸುಧಾಕರ್ (D Sudhakar) ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು. ದಲಿತರ ಆಸ್ತಿ ಕಬಳಿಸಿ ದೌರ್ಜನ್ಯ ಮಾಡಿದ್ದು ಖಂಡನೀಯ. ರಸ್ತೆಗಳನ್ನು ಬಂದ್ ಮಾಡಿದ್ದು ಆಕ್ಷೇಪಾರ್ಹ. ಈ ಸರಕಾರ ದಲಿತರನ್ನು ರಕ್ಷಿಸಲು ಬಂದಿದೆಯೇ ಅಥವಾ ದೌರ್ಜನ್ಯ ಮಾಡಲು ಬಂದಿದೆಯೇ ಎಂದು ಆಗ್ರಹಿಸಿದರು.
    ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾತನಾಡಿ,
    ಇದೊಂದು ವಂಚನೆ ಪ್ರಕರಣ. ನ್ಯಾಯ ಕೋರಿ ಇಲ್ಲಿ ಬಂದಿದ್ದೇವೆ. ಇದರಲ್ಲಿ ಸಚಿವರಿದ್ದಾರೆ ಎಂದರೆ ಇದರ ಹಿಂದೆ ಸರಕಾರ ಇರುವುದು ಸ್ಪಷ್ಟ. ಆದ್ದರಿಂದ ತಕ್ಷಣವೇ ಈ ಸಚಿವರನ್ನು ಸಂಪುಟದಿಂದ ಹೊರ ಹಾಕಬೇಕು. ಇಲ್ಲವಾದರೆ ಅವರೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

    ಸರಕಾರ ಈ ಕುರಿತು ಕೂಲಂಕಷ ಪರಿಶೀಲನೆ ನಡೆಸಬೇಕು. ಶೆಡ್‍ಗಳನ್ನು ಒಡೆಯಲಾಗಿದೆ. ಪೊಲೀಸರು ಏನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದರು.
    ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಮಾತನಾಡಿ, ಜನರು ನಿಮಗೆ ಮತ ಕೊಟ್ಟು ಅಧಿಕಾರ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ, ದೀನದಲಿತರು, ಬಡವರ ಪರ ನೀವು ಎಂದು ಕಾಂಗ್ರೆಸ್ ಚುನಾವಣೆ ಹೇಳಿದ್ದು ಸುಳ್ಳೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
    ಆರೋಪಿ ಸಚಿವರನ್ನು ಸಂಪುಟದಿಂದ ವಜಾ ಮಾಡಿ. ಈ ಕುಟುಂಬಕ್ಕೆ ನ್ಯಾಯ ಕೊಡಿ. ಇಲ್ಲವಾದರೆ ಇನ್ನಷ್ಟು ತೀವ್ರವಾದ ಹೋರಾಟ ಮಾಡಿ ಜನರ ಕಣ್ಣನ್ನು ತೆರೆಸುತ್ತೇವೆ ಎಂದು ಎಚ್ಚರಿಸಿದರು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಸಚಿವರನ್ನು ಅವರ ಸ್ಥಾನದಿಂದ ವಜಾ ಮಾಡಿ. ದಲಿತ ಕುಟುಂಬಗಳಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದರು. ಈ ಜಾಗವನ್ನು ನೋಡಿದರೆ ಸುಧಾಕರರ ಗೂಂಡಾಗಿರಿ ಗೊತ್ತಾಗುತ್ತದೆ. ಇಲ್ಲಿ ದಲಿತ ಮಹಿಳೆ ಮತ್ತಿತರರು ನಿರಾಶ್ರಿತರಾಗಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ನ್ಯಾಯ ಕೊಡಬೇಕು ಎಂದು ಆಗ್ರಹಿಸಿದರು.
    ಸಚಿವರಾಗಿ ಕಾನೂನಿಗೆ ವಿರುದ್ಧವಾಗಿ ಜಾಗವನ್ನು ಕಬ್ಜಾ ಮಾಡಿದ್ದಾರೆ. ಇದು ಸರಿಯೇ? ಇವರನ್ನು ಖಾಲಿ ಮಾಡಿದ್ದು ಸರಿಯೇ? ಎಸ್‍ಸಿ, ಎಸ್‍ಟಿ ಮಹಿಳೆಯರು, ಪುರುಷರು ನಿರಾಶ್ರಿತರಾಗಿದ್ದಾರೆ. ಅವರು ಎಲ್ಲಿ ಬದುಕಬೇಕು ಎಂದು ಕೇಳಿದರು.
    25 ಕೋಟಿ ಸಾಲ ಹೇಗೆ ಸಿಕ್ಕಿದೆ? ಬ್ಯಾಂಕ್ ಇವರದೇ ಆದರೂ ಇವರು ಆಡಿದ್ದೇ ಆಟವೇ? ಕಾನೂನೇ ಪಾಲಿಸಿಲ್ಲವೇ? ಇದರ ಬಗ್ಗೆ ತನಿಖೆ ಆಗಬೇಕು. ಒತ್ತಾಯಪೂರ್ವಕ ಸಹಿ ಹಾಕಿಸಿಕೊಂಡಿದ್ದು, ಹೆಬ್ಬೆಟ್ಟು ಗುರುತು ಹಾಕಿಸಿದ್ದು ಕಾನೂನಿಗೆ ವಿರುದ್ಧವಾಗಿದೆ. ಇದರ ಬಗ್ಗೆಯೂ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

    ನೂರಾರು ಕೋಟಿ ಬೆಲೆಯ ಜಾಗವನ್ನು ಕನಿಷ್ಠ ಬೆಲೆಯಲ್ಲಿ ಕೊಂಡುಕೊಳ್ಳುವುದು ಯಾವ ನ್ಯಾಯ? ಮಾತೆತ್ತಿದರೆ ಸಾಮಾಜಿಕ ನ್ಯಾಯದ ಮಾತನಾಡುವ ಸಿದ್ದರಾಮಯ್ಯನವರು ಎಲ್ಲಿದೆ ಸಾಮಾಜಿಕ ನ್ಯಾಯ? ಎಲ್ಲಿದೆ ದಲಿತರಿಗೆ ನ್ಯಾಯ? ಎಂಬ ಪ್ರಶ್ನೆಗಳಿಗೆ ಉತ್ತರ ಕೊಡಬೇಕು. ಡಾ.ಅಂಬೇಡ್ಕರ್ ಫೋಟೊ ಇಟ್ಟು ಧರಣಿ ಕುಳಿತ ಇವರಿಗೆ ನ್ಯಾಯ ಕೊಡುವವರು ಯಾರು ಎಂದು ಕೇಳಿದರು. ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ದಲಿತ ಕುಟುಂಬಗಳಿಗೆ ನ್ಯಾಯ ಕೊಡಬೇಕು ಎಂದು ಅವರು ಒತ್ತಾಯವನ್ನು ಮುಂದಿಟ್ಟರು

    D Sudhakar Karnataka News Politics Trending ಕಾಂಗ್ರೆಸ್ ಚುನಾವಣೆ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir
    Next Article ಮನುಸ್ಮೃತಿ ಜಾರಿಗೆ ಹುನ್ನಾರ-ಎಚ್ಚರ ಅಗತ್ಯ | Manusmriti
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. akx3z on ಜೂನ್ 8, 2025 2:24 ಅಪರಾಹ್ನ

      cost cheap clomid without insurance order generic clomiphene online clomid bula homem how to get generic clomid without prescription buying generic clomid without prescription clomiphene calculator where buy cheap clomiphene no prescription

      Reply
    2. how to buy cialis online in australia on ಜೂನ್ 9, 2025 9:44 ಫೂರ್ವಾಹ್ನ

      More text pieces like this would make the интернет better.

      Reply
    3. 7y3xk on ಜೂನ್ 18, 2025 12:10 ಅಪರಾಹ್ನ

      inderal 10mg tablet – buy methotrexate 5mg online cheap cost methotrexate 10mg

      Reply
    4. rvpx9 on ಜೂನ್ 21, 2025 9:53 ಫೂರ್ವಾಹ್ನ

      buy amoxil tablets – ipratropium 100 mcg ca combivent online

      Reply
    5. diy5u on ಜೂನ್ 23, 2025 12:59 ಅಪರಾಹ್ನ

      buy zithromax 500mg without prescription – zithromax where to buy order bystolic 5mg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಕುಡಿದು ಮಾಡಿದ ರಂಪಾಟ.
    • Michaelodoky ರಲ್ಲಿ ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.
    • AlbertDuabe ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe