Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಬಿಎಸ್‌ವೈ: ರಾಜಕೀಯದಿಂದ ನಿವೃತ್ತಿಯಾಗ್ತಾರಾ ಮಾಜಿ ಸಿಎಂ?
    ಸುದ್ದಿ

    ವಿಜಯೇಂದ್ರಗೆ ಶಿಕಾರಿಪುರ ಬಿಟ್ಟುಕೊಟ್ಟ ಬಿಎಸ್‌ವೈ: ರಾಜಕೀಯದಿಂದ ನಿವೃತ್ತಿಯಾಗ್ತಾರಾ ಮಾಜಿ ಸಿಎಂ?

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ/ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.
    ಶಿವಮೊಗ್ಗದಲ್ಲಿ ಯಡಿಯೂರಪ್ಪ ಈ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ವಿಜಯೇಂದ್ರ ಅವರ ಸ್ಪರ್ಧೆಯ ಬಗ್ಗೆ ಇದ್ದ ಊಹಾಪೋಹಗಳಿಗೆ ತಾತ್ಕಾಲಿಕ ತೆರೆ ಬಿದ್ದಿದೆ.
    ಬಿಜೆಪಿ ಹೈಕಮಾಂಡ್ ಈ ಸಂಬಂಧ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ.
    ಆದರೆ, ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ನನ್ನ ಬದಲಾಗಿ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಇದು ಯಡಿಯೂರಪ್ಪ ಅವರ ರಾಜಕೀಯ ನಿವೃತ್ತಿಯ ಮುನ್ಸೂಚನೆ ಎಂದೇ ಹೇಳಲಾಗುತ್ತಿದೆ. ಸಕ್ರಿಯ ರಾಜಕಾರಣದಿಂದ ಯಡಿಯೂರಪ್ಪ ದೂರ ಸರಿದರೆ ಅದು ಬಿಜೆಪಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಯಡಿಯೂರಪ್ಪ ವೀರಶೈವ ಸಮುದಾಯದ ಹಿರಿಯ ನಾಯಕ. ಅವರನ್ನು ಸರಿಗಟ್ಟುವ ನಾಯಕ ಸದ್ಯ ಯಾರೂ ಇಲ್ಲ. ಪಕ್ಷವನ್ನು  ತಳಮಟ್ಟದಿಂದ ಸಂಘಟಿಸಿದವರಲ್ಲಿ ಯಡಿಯೂರಪ್ಪ ಕೂಡ ಪ್ರಮುಖರು. ಯಡಿಯೂರಪ್ಪ ದೂರ ಸರಿದರೆ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದರೆ ಅದು ನೇರವಾಗಿ ಬಿಜೆಪಿ ಮತ ಬ್ಯಾಂಕ್ ಗಳ ಮೇಲೆ ಪ್ರಭಾವ ಬೀರಲಿದೆ.
    ಚುನಾವಣೆಗೆ 9 ತಿಂಗಳು ಬಾಕಿ ಇರುವಾಗಲೇ ಯಡಿಯೂರಪ್ಪ ನೀಡಿರುವ ಹೇಳಿಕೆ ಇದೀಗ ಭಾರೀ ಸಂಚಲನ ಮೂಡಿಸಿದೆ.
    ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ,ವೈ. ವಿಜಯೇಂದ್ರ ತಂದೆಯ ನಿರ್ಧಾರ ಹಾಗೂ ಪಕ್ಷದ ಸೂಚನೆಗಳಿಗೆ ನಾನು ಎಂದಿಗೂ ಬದ್ಧನಾಗಿರುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ತಂದೆ ಸ್ಫರ್ಧಿಸದೇ ಇದ್ದರೂ ಅವರು ಯಾವುದೇ ಅಧಿಕಾರದಲ್ಲಿ ಇರದೇ ಇದ್ದರೂ ಸಹ ಅವರು ಪಕ್ಷದ ಸಂಘಟನೆ ಮಾಡಲಿದ್ದಾರೆ. ಅವರಿಗೆ ಶಕ್ತಿ ಇರುವವರೆಗೂ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆ ಮಾಡಲಿದ್ದಾರೆ. ನಮ್ಮ ತಂದೆ ಹಿಸ್ಟರಿಯಲ್ಲಿ ರಾಜಕೀಯ ನಿವೃತ್ತಿ ಎಂಬ ಮಾತೇ ಉದ್ಭವಿಸುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭಗವತಿ ನೀರಾವರಿ ಯೋಜನೆಗೆ ಅಸ್ತು..
    Next Article ಬಾಳೆ ಬೆಳೆ ಕಡಿದ ವೈಮನಸ್ಸು :ತುಮಕೂರಿನಲ್ಲಿ ಅವಮಾನವೀಯ ಘಟನೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • udunu ರಲ್ಲಿ ಅರಣ್ಯ ಸಚಿವರ ನಿರ್ದೇಶನದ ಬೆನ್ನಲ್ಲೇ Action | Forest Minister
    • xfkrw ರಲ್ಲಿ ಹಂದಿ ಹೊಡೆಯಲು ಹೋದವರು ವಾಪಸ್ ಬರಲೇ ಇಲ್ಲ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe