ಬೆಂಗಳೂರು, ಅ.5 – ಕಳ್ಳರಿಗೆ ಕಳ್ಳತನ ಮಾಡಲು ನಾನಾ ಮಾರ್ಗಗಳಿವೆ. ಈ ಮಾರ್ಗ ಗಳ ಮೂಲಕ ಕಳ್ಳಜಪದ್್ಗಯಹತರು ಹಣ,ಆಭರಣ ಮಾತ್ರವಲ್ಲದೆ ಮರ,ಸಿಮೆಂಟ್, ಕಲ್ಲು, ಮಣ್ಣು ಇತ್ಯಾದಿ ಬೆಲೆ ಬಾಳುವ ವಸ್ತುಗಳನ್ನು ಕದ್ದೊಯ್ಯುವುದನ್ನು ಕೇಳಿದ್ದೇವೆ.ಇದು ಮಾಮೂಲಿ ಕೂಡ.
ಆದರೆ ಇಲ್ಲೊಂದು ಕಳ್ಳತನದ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.ಅದೂ ಕೂಡ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೂಗಳತೆ ದೂರದಲ್ಲೇ ಈ ಕಳ್ಳತನ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಂದ ಹಾಗೆ ಕಳ್ಳತನವಾಗಿರುವ ವಸ್ತು ಯಾವುದು ಗೊತ್ತಾ..ಅದು ಬಸ್ ನಿಲ್ದಾಣ.!
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಮೀಪ ಕಳ್ಳರು ತಮ್ಮ ಕೈಚಳಕ ತೋರಿಸಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಬಿಎಂಟಿಸಿ ಪ್ರಯಾಣಿಕರ ತಂಗುದಾಣವನ್ನು ಕದ್ದೊಯ್ದಿದ್ದಾರೆ.
ಹೊಸದಾಗಿ ನಿರ್ಮಿಸಲಾಗಿದ್ದ ತಂಗುದಾಣ ವಾರದೊಳಗೆ ಮಾಯವಾಗಿದ್ದು ಅಚ್ಚರಿಗೆ ಕಾರಣವಾಗಿದೆ.
ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್ನಿಂದ ಬಿಎಂಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿತ್ತು.ಇದು ನಿರ್ಮಾಣಗೊಂಡ ಕೆಲವೆ ದಿನಗಳಲ್ಲಿ ಸ್ಥಳದಿಂದ ಬಸ್ ನಿಲ್ದಾಣ ನಾಪತ್ತೆಯಾಗಿದೆ.
ಖಾಸಗಿ ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ತಮ್ಮ ಸಂಸ್ಥೆಯ ವತಿಯಿಂದ ನ
ನಿರ್ಮಿಸಲಾಗಿದ್ದ ಬಸ್ ನಿಲ್ದಾಣ ಹೇಗಿದೆ, ಸಾರ್ವಜನಿಕರಿಗೆ ಎಷ್ಟರಮಟ್ಟಿಗೆ ಉಪಯೋಗವಾಗುತ್ತಿದೆ ಎನ್ನುವುದನ್ನು ನೋಡೋಣಾ ಎಂದುಕೊಂಡು ಅದನ್ನು ನೋಡಲು ಸ್ಥಳಕ್ಕೆ ಬಂದಾಗ ನಿಲ್ದಾಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದರಿಂದ ಅವಕ್ಕಾದ ಎನ್ ರವಿ ರೆಡ್ಡಿ, ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳ ಬಳಿ ವಿಚಾರಿಸಿದ್ದಾರೆ. ತಂಗುದಾಣವನ್ನು ತಾವು ತೆರುವು ಮಾಡಿಲ್ಲ ಎಂದು ಬಿಬಿಎಂಪಿ ಹೇಳಿದೆ. ಬಳಿಕ ಕಂಪನಿಯ ಅಧಿಕಾರಿಗಳು ಸೆಪ್ಟೆಂಬರ್ 30ರಂದು ಈ ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲಿಸರು, ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಬಸ್ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.