Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಜ್ಜಿ, ಮೊಮ್ಮಗಳಿಗೆ Free ಆದ್ರೆ ಲವ್ ಬರ್ಡ್ಸ್ ಗೆ ಟಿಕೆಟ್ | Love Birds
    ಸುದ್ದಿ

    ಅಜ್ಜಿ, ಮೊಮ್ಮಗಳಿಗೆ Free ಆದ್ರೆ ಲವ್ ಬರ್ಡ್ಸ್ ಗೆ ಟಿಕೆಟ್ | Love Birds

    vartha chakraBy vartha chakraಮಾರ್ಚ್ 27, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.27- ಅಜ್ಜಿ,ಮೊಮ್ಮಗಳಿಗೆ ಬಸ್ ಪ್ರಯಾಣ ಉಚಿತ. ಆದರೆ ಅವರು ಕೊಂಡೊಯ್ಯುತ್ತಿದ್ದ ಲವ್ ಬರ್ಡ್ಸ್ ಗೆ (Love Birds) ಪ್ರಯಣದರ 444 ರೂಪಾಯಿ.. ಇದೇನಿದು ಅಂತಿರಾ ಈ ಸ್ಪೋರಿ ನೋಡಿ.
    ಬೆಂಗಳೂರಿನಿಂದ ಸಾಂಸ್ಕೃತಿಕ ನಗರ ಮೈಸೂರಿಗೆ ಪ್ರಯಾಣಿಸಲು ಅಜ್ಜಿ ಮತ್ತು ಮೊಮ್ಮಗಳು ಸಾರಿಗೆ ಸಂಸ್ಥೆಯ ಬಸ್ ಹತ್ತಿದರು.ಸರಿ ರಾಜ್ಯದ ಶಕ್ತಿ ಯೋಜನೆ ಜಾರಿಯಲ್ಲಿದೆ. ಹೀಗಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
    ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಹೊರಟ ಅಜ್ಜಿ-ಮೊಮ್ಮಗಳು ಉಚಿತವಾಗಿ ಪ್ರಯಾಣಿಸಿದರೆ,ಅವರು ಕೊಂಡೊಯ್ಯುತ್ತಿದ್ದ ನಾಲ್ಕು ಲವ್ ಬರ್ಡ್ಸ್ಗಳಿಗೆ ಕಂಡಕ್ಟರ್ ಬರೋಬ್ಬರಿ 444 ರೂ. ಟಿಕೆಟ್ ನೀಡಿದ್ದಾರೆ.
    ಇಂದು ಬೆಳಗ್ಗೆ 8.18ಕ್ಕೆ ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್ಆರ್ಟಿಸಿ ಬಸ್ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದರು.

    ಟಿಕೆಟ್ ವಿತರಿಸಿ ಮುಂದೆ ಹೋಗುತ್ತಿದ್ದ ಕಂಡಕ್ಟರ್ ಕ್ಷಣ ಕಾಲ ಅಲ್ಲೇ ನಿಂತು‌ ಅಜ್ಜಿ-ಮೊಮ್ಮಗಳನ್ನು ದಿಟ್ಟಿಸಿದ.ಮೊಮ್ಮಗಳ ಕೈಯಲ್ಲಿದ್ದ ಪಂಚರದೊಳಗಿದ್ದ ನಾಲ್ಕು ಲವ್ ಬರ್ಡ್ ಗಳಿರುವುದನ್ನು ಗಮನಿಸಿದರು.
    ತಕ್ಷಣವೇ ಅವುಗಳಿಗೆ ಟಿಕೆಟ್ ಕೊಡಬೇಕು ಎಂದು ಹೇಳಿದ ಕಂಡಕ್ಟರ್ ಒಂದು ಪಕ್ಷಿಗೆ 111ರೂ. ನಂತೆ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ ಟಿಕೆಟ್ ಹರಿದಿದ್ದಾರೆ.
    ಪಕ್ಷಿಗಳಿಗೆ ಟಿಕೆಟ್ ಪಡೆಯಲು ಅಜ್ಜಿ, ಮೊಮ್ಮಗಳು ಮೊದಲಿಗೆ ತಕರಾರು ಮಾಡಿದ್ದಾರೆ. ಇತರೆ ಪ್ರಯಾಣಿಕರು ಕೂಡಾ ಅವರಿಗೆ ಬೆಂಬಲ ನೀಡಿದ್ದಾರೆ. ಆಗ ಕಂಡಕ್ಟರ್ ತಾವು ಯಾರು ಯಾರಿಗೆ ಟಿಕೆಟ್ ಪಡೆಯಬೇಕು ಎಂಬ ಕುರಿತಾದ ಇಲಾಖೆಯ ಸುತ್ತೋಲೆಯನ್ನು ತೋರಿಸಿದರು. ಅಷ್ಟೇ ಅಲ್ಲ ಎರಡು ವರ್ಷದ ಹಿಂದೆ  2022ರಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಪಕ್ಷಿಗಳಿಗೆ ಟಿಕೆಟ್ ತಗೊಂಡಿಲ್ಲ ಎಂಬ ಕಾರಣಕ್ಕೆ ದಂಡತೆತ್ತಿದ್ದರು.

    ಹೈದರಾಬಾದ್ ನಿಂದ ಬೀದರ್ ಜಿಲ್ಲೆಯ ಔರಾದ್ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕನೊಬ್ಬ ಪಂಜರದಲ್ಲಿ ಲವ್ ಬರ್ಡ್ಸ್ ಪಕ್ಷಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಹಕ್ಕಿಗಳಿಗೆ ತಲಾ ಅರ್ಧ ಟಿಕೆಟ್ ಖರೀದಿಸುವಂತೆ ಕಂಡಕ್ಟರ್ ಮನವಿ ಮಾಡಿದ್ದರು, ಆದರೆ ಪ್ರಯಾಣಿಕ ಮಾತ್ರ ಅದಕ್ಕೆ ಒಪ್ಪಲಿಲ್ಲ. ಬಳಿಕ ಸಹ ಪ್ರಯಾಣಿಕರು ಕೂಡ ಪಕ್ಷಿಗಳಿಗೆ ಟಿಕೆಟ್ ಇಲ್ಲ ಎಂದು ವಾದ ಮಾಡಿದ್ದರು. ಬಳಿಕ ಕಂಡಕ್ಟರ್ ಸುಮ್ಮನಾಗಿದ್ದ. ಆದರೆ ದಾರಿ ಮಧ್ಯೆದಲ್ಲಿ ಟಿಕೆಟ್ ಚೆಕ್ ಮಾಡುವ ಸಿಬ್ಬಂದಿ ಬಸ್ ಹತ್ತಿ ಬಂದು ಚೆಕ್ ಮಾಡಿದಾಗ ಪಕ್ಷಿಗಳಿಗೆ ಯಾವುದೇ ರೀತಿಯ ಟಿಕೆಟ್ ತೆಗೆದುಕೊಂಡಿಲ್ಲವೆಂಬುದು ಕಂಡಕ್ಟರ್ಗೆ ದಂಡ ವಿಧಿಸಿದ್ದರು.
    ಈ ಘಟನೆಯನ್ನು ವಿವರಿಸುತ್ತಿದ್ದಂತೆ ಎಲ್ಲರೂ ಸುಮ್ಮನಾದರು‌.ನಂತರ ಅಜ್ಜಿ ತಮ್ಮೊಂದಿಗೆ ತಂದಿದ್ದ ಪಕ್ಷಿಗಳಿಗೆ ಟಿಕೆಟ್ ಪಡೆದು ಹಣ ನೀಡಿದರು.
    ಸರ್ಕಾರದ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್‌ ಸಿಕ್ಕರೆ, ನಾಲ್ಕು ಲವ್ ಬರ್ಡ್ಸ್ ಪಕ್ಷಿಗಳಿಗೆ ಟಿಕೆಟ್ ಹಣ ಕೊಡುವಂತಾಗಿದೆ.

    Love Birds
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು, ಚಾಮರಾಜನಗರ ಗೆಲ್ಲಲು ಸಿಎಂ ಪ್ಲಾನ್ | Mysuru
    Next Article ಅದಾನಿ ಬಿಜೆಪಿ ಟಿಕೆಟ್ ಕೊಡಿಸಿದ್ದು ಯಾರಿಗೆ ಗೊತ್ತಾ | Adani
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldAlicy ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Michaelcandy ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    • Michaelcandy ರಲ್ಲಿ ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಗಿಫ್ಟ್ | CT Ravi
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe