Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಗೆ ಕೇಳುತ್ತಾ ವಿಜಯೇಂದ್ರ ಮೊರೆ!
    ಪ್ರಚಲಿತ

    ಹೈಕಮಾಂಡ್ ಗೆ ಕೇಳುತ್ತಾ ವಿಜಯೇಂದ್ರ ಮೊರೆ!

    vartha chakraBy vartha chakraಡಿಸೆಂಬರ್ 18, 2025Updated:ಡಿಸೆಂಬರ್ 18, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜ್ಯ ಕಾಂಗ್ರೆಸ್ ನಲ್ಲಿ ಬೆಳವಣಿಗೆಗಳು ನಡೆದಿರುವಂತೆ ಪ್ರತಿಪಕ್ಷ ಬಿಜೆಪಿಯಲ್ಲೂ ಕೂಡ ವಿದ್ಯಮಾನಗಳು ಚುರುಕು ಪಡೆದುಕೊಂಡಿವೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಮತ್ತೊಂದು ಅವಧಿಗೆ ಮುಂದುವರಿಯಬೇಕು ಎಂದು ಪಣತೊಟ್ಟಿರುವ ವಿಜಯೇಂದ್ರ ಇದಕ್ಕಾಗಿ ಹೈಕಮಾಂಡ್ ಮೊರೆಹೊಕ್ಕಿದ್ದಾರೆ.
    ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಹಾಗೂ ಹಲವು ರಾಜ್ಯಗಳ ಅಧ್ಯಕ್ಷ ಸ್ಥಾನ ಘೋಷಣೆ ಬಾಕಿ ಉಳಿಸಿಕೊಂಡಿರುವ ಹೈಕಮಾಂಡ್ ಇದೀಗ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನಿತಿನ್ ನಬಿನ್ ಅವರನ್ನು ನೇಮಕ ಮಾಡಿದ ಬೆನ್ನೆಲ್ಲೇ ಬಾಕಿ ಇರುವ ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡುತ್ತಿದೆ.
    ಅದೇ ರೀತಿ ಕರ್ನಾಟಕದ ಬಿಜೆಪಿ ಅಧ್ಯಕ್ಷರ ಅಧಿಕೃತ ಘೋಷಣೆ ಕೂಡ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಎಂದು ಘೋಷಣೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಯಡಿಯೂರಪ್ಪ ಈಗಾಗಲೇ ವರಿಷ್ಠರಿಗೆ ಮನವಿ ಮಾಡಿದ್ದಾರೆ ಇದರ ಮುಂದುವರೆದ ಭಾಗವಾಗಿ ವಿಜಯೇಂದ್ರ ಇದೀಗ ದೆಹಲಿಗೆ ಆಗಮಿಸಿದ್ದು ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿ ತಮ್ಮನ್ನು ರಾಜ್ಯಾಧ್ಯಕ್ಷ ಎಂದು ವಿದ್ಯುಕ್ತವಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ.
    ವಿಜಯೇಂದ್ರ ಅವರು ಪಕ್ಷದ ಅಧ್ಯಕ್ಷರಾಗಿ ಈಗಾಗಲೇ ಎರಡು ವರ್ಷ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಹೀಗಾಗಿ ಮತ್ತೆ ರಾಜ್ಯಾಧ್ಯಕ್ಷ ಎಂದು ಅಧಿಕೃತವಾಗಿ ಘೋಷಣೆ ಮಾಡಿದರೆ ಅಂದಿನಿಂದ ಮೂರು ವರ್ಷದವರೆಗೆ ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ.
    ಆದರೆ ವಿಜಯೇಂದ್ರ ವಿರೋಧಿ ಬಣ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಹೇಳಿರುವ ಭಿನ್ನಮತಿಯ ನಾಯಕರು ಹಲವಾರು ಬಾರಿ ವರಿಷ್ಠರನ್ನು ಭೇಟಿ ಮಾಡಿ ಪಕ್ಷದ ಅಧ್ಯಕ್ಷರ ಬದಲಾವಣೆಗೆ ಮನವಿ ಮಾಡಿದ್ದರು
    ಆದರೆ ಇದೀಗ ಈ ಭಿನ್ನಮತೀಯ ನಾಯಕರು ತಮ್ಮ ಬೇಡಿಕೆಯನ್ನು ಬದಲಾಯಿಸಿದ್ದಾರೆ ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ತಮ್ಮ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಲು ನಾವು ಯಾವುದೇ ರೀತಿಯ ತಕರಾರು ಮಾಡುವುದಿಲ್ಲ ಇವರ ಅಧಿಕಾರಾವಧಿ ಇನ್ನು ಒಂದು ವರ್ಷ ಬಾಕಿ ಇದ್ದು ಅದನ್ನು ಪೂರ್ಣಗೊಳಿಸಲಿ ಆದರೆ ಯಾವುದೇ ಕಾರಣಕ್ಕೂ ಅವರನ್ನು ಈಗ ಪಕ್ಷದ ಅಧ್ಯಕ್ಷ ಎಂದು ಘೋಷಣೆ ಮಾಡಬಾರದು ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ನೇಮಕವಾಗಬೇಕು ಎಂದು ಮನವಿ ಮಾಡಿದ್ದಾರೆ.
    ವಿಜಯೇಂದ್ರ ವಿರುದ್ಧ ಹೊಂದಾಣಿಕೆ ರಾಜಕಾರಣದ ಆರೋಪ ಮಾಡುತ್ತಿರುವ ಈ ನಾಯಕರು ಈಗ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಎಂದು ಅಧಿಕೃತವಾಗಿ ಘೋಷಣೆ ಮಾಡಿದರೆ ವಿಧಾನಸಭಾ ಚುನಾವಣೆಯ ಅವಧಿಯಲ್ಲಿ ಕೂಡ ಅವರು ಅಧ್ಯಕ್ಷರಾಗಿರುತ್ತಾರೆ. ಚುನಾವಣೆಯಲ್ಲಿ ಅವರು ಹೊಂದಾಣಿಕೆ ಮಾಡಿಕೊಳ್ಳುವುದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ವಾದಿಸುತ್ತಿದ್ದಾರೆ.
    ಆದರೆ ಈ ಆರೋಪಗಳನ್ನೆಲ್ಲ ತಳ್ಳಿ ಹಾಕಿರುವ ವಿಜಯೇಂದ್ರಅವರು ಹಲವು ಹಿರಿಯ ನಾಯಕರ ಅಸಹಕಾರದ ನಡುವೆಯೂ ತಾವು ರಾಜ್ಯ ಸರ್ಕಾರದ ವಿರುದ್ಧ ಯಶಸ್ವಿ ಹೋರಾಟಗಳನ್ನು ನಡೆಸಿದ್ದೇನೆ ಈಗ ಪಕ್ಷದ ಅಧ್ಯಕ್ಷರಾಗಿ ತಮ್ಮನ್ನು ವಿದ್ಯುಕ್ತವಾಗಿ ಘೋಷಣೆ ಮಾಡಿದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರುತ್ತೇನೆ ಎಂದು ವಾಗ್ದಾನ ಮಾಡುತ್ತಿದ್ದಾರೆ.
    ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಮಾಜಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ತಮ್ಮನ್ನು ಪಕ್ಷದ ಅಧ್ಯಕ್ಷ ಎಂದು ಘೋಷಿಸಲು ಸಹಕರಿಸಬೇಕು ಎಂದು ಮನವಿ ಮಾಡುತ್ತಿರುವುದಾಗಿ ತಿಳಿದು ಬಂದಿದೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ಯಡಿಯೂರಪ್ಪ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್
    Next Article ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Daviddek ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Daviddek ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.