ಬೆಂಗಳೂರು,ಫೆ.2-
ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಮರ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧದ CD ಪ್ರಕರಣವನ್ನು CBI ತನಿಖೆಗೆ ವಹಿಸುವಂತೆ ಬಿಗಿ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಕಳೆದ ಎರಡು ದಿನಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಸುತ್ತಾಡಿ ಅವರ ಮೂಲಕ ಆದೇಶ ಹೊರಡಿಸಲು ಪ್ರಯತ್ನಿಸಿ, ಅದೀಗ ಸಾಧ್ಯವಾಗದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ.
ಇಂದು ಬೆಳಗ್ಗೆ CM ಬಸವರಾಜ ಬೊಮ್ಮಾಯಿ ಅವರನ್ನು ಮನೆಯಲ್ಲಿ ಭೇಟಿ ಮಾಡಿದ ಜಾರಕಿಹೊಳಿ, ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ ಮಾಡಿದರು. ಆದರೆ ಇದಕ್ಕೂ ಮೊದಲು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಲು ಸಿಎಂ ಸಲಹೆ ನೀಡಿದ್ದಾರೆ. ಆದರೆ ಇದಕ್ಕೆ ಸಮ್ಮತಿಸದ ಜಾರಕಿಹೊಳಿ ಸಿಎಂ ನಡೆಯಿಂದ ಅಸಮಾಧಾನಗೊಂಡು ದೆಹಲಿಗೆ ತೆರಳಿದ್ದಾರೆ.
ದೆಹಲಿಯಲ್ಲಿ ಪ್ರಮುಖವಾಗಿ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆ ರಾಜ್ಯ BJP ಪ್ರಭಾರಿ ಅಧಿಕಾರಿ ಅರುಣ್ ಸಿಂಗ್ (Arun Singh) ಅವರನ್ನು ಭೇಟಿ ಮಾಡಲಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಇಬ್ಬರನ್ನೂ ಒತ್ತಾಯ ಮಾಡಲಿದ್ದಾರೆ ಎನ್ನಲಾಗಿದೆ.
4 ಪ್ರತಿಕ್ರಿಯೆಗಳು
электрокарнизы для штор цена электрокарнизы для штор цена .
быстрый вывод из запоя в стационаре vyvod-iz-zapoya-sochi11.ru .
снятие ломки наркомана снятие ломки наркомана .
бизнес-идеи для малого бизнеса бизнес-идеи для малого бизнеса .