Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga
    Trending

    ಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga

    vartha chakraBy vartha chakraಜನವರಿ 31, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.31: ಲೋಕಸಭೆ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿವೆ.
    ಬಹುತೇಕ ಹಾಲಿ ಸಂಸದರು ಮರು ಆಯ್ಕೆ ಬಯಸಿದ್ದು ಪಕ್ಷದ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಸೋಲುವ ಭೀತಿಯಿಂದ ಕೇಂದ್ರ ಮಂತ್ರಿಯೊಬ್ಬರು ಸಕ್ರಿಯ ರಾಜಕಾರಣದಿಂದ ದೂರ ಸರಿಯಲು ತೀರ್ಮಾನಿಸಿದ್ದಾರೆ ಎಂದು ಗೊತ್ತಾಗಿದೆ.

    ಚಿತ್ರದುರ್ಗ (Chitradurga) ಮೀಸಲು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ ನಾರಾಯಣಸ್ವಾಮಿ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಇವರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡಿ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು. ಅದರಂತೆ ಇಲಾಖೆಯಲ್ಲಿ ಅತ್ಯುತ್ತಮ ಕೆಲಸ ಮಾಡುವ ಮೂಲಕ ಕ್ರಿಯಾಶೀಲ ಮಂತ್ರಿ ಎಂದೆ ಖ್ಯಾತಿ ಪಡೆದಿದ್ದರು.
    ಇವರ ಕಾರ್ಯಶೀಲತೆಯನ್ನು ಮೆಚ್ಚಿದ ನಾಯಕತ್ವ ಇವರಿಗೆ ರಾಜ್ಯ ಬಿಜೆಪಿಯ ನಾಯಕತ್ವದ ಪಟ್ಟ ಕಟ್ಟಲು ಚಿಂತನೆ ನಡೆಸಿತ್ತು. ಆದರೆ, ಜಾತಿವಾರು ಲೆಕ್ಕಾಚಾರ ಮಾಡಿದ ಹೈಕಮಾಂಡ್ ಈ ಪ್ರಸ್ತಾಪ ಕೈಬಿಟ್ಟಿತ್ತು.
    ಹೈಕಮಾಂಡ್ ವಿಶ್ವಾಸಗಳಿಸಿದ ನಾರಾಯಣಸ್ವಾಮಿ ಕ್ಷೇತ್ರದಲ್ಲಿ ಮಾತ್ರ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣರಾಗಿದ್ದಾರೆ ಎನ್ನಲಾಗಿದೆ.

    ಬೆಂಗಳೂರು ಹೊರವಲಯದ ಆನೇಕಲ್ ನಿವಾಸಿಯಾದ ನಾರಾಯಣಸ್ವಾಮಿ ಅವರಿಗೆ ಚಿತ್ರದುರ್ಗದ ಜೊತೆ ಸಂಪರ್ಕ ಕಡಿಮೆ. ಹೀಗಿದ್ದರೂ ಹೈಕಮಾಂಡ್ ಹಲವಾರು ಲೆಕ್ಕಾಚಾರ ಮಾಡಿ ಚಿತ್ರದುರ್ಗ ಕ್ಷೇತ್ರದಿಂದ ಕಣಕ್ಕಿಳಿಸಿತು.ಬಿಜೆಪಿ ಅಭ್ಯರ್ಥಿ ಎಂಬ ಕಾರಣಕ್ಕೆ ಎಲ್ಲಾ ರೀತಿಯ ಶ್ರಮಹಾಕಿ ಅವರನ್ನು ಗೆಲ್ಲಿಸಲಾಯಿತು.ಆದರೆ ಗೆದ್ದ ನಂತರ ಅವರು ಕ್ಷೇತ್ರದಲ್ಲಿ ಪಕ್ಷ ಸಂಘಟನೆಯ ಕಡೆ ಗಮನ ಕೊಡಲಿಲ್ಲ ಎಂದು ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
    ಅದರಲ್ಲೂ ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕೇಂದ್ರ ಮಂತ್ರಿಯಾಗಿ ನಾರಾಯಣಸ್ವಾಮಿ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಯಾವುದೇ ಪ್ರಯತ್ನ ನಡೆಸಲಿಲ್ಲ ಎಂದು ಸೋತ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖವಾಗಿ ಜಿಲ್ಲೆಯಲ್ಲಿ ಗೆದ್ದಿರುವ ಏಕೈಕ ಅಭ್ಯರ್ಥಿ ಹೊಳಲ್ಕೆರೆ ಚಂದ್ರಪ್ಪ ಸೋತಿರುವ ತಿಪ್ಪಾರೆಡ್ಡಿ,ತಿಪ್ಪೇಸ್ವಾಮಿ, ರಾಜೇಶ್ ಗೌಡ ಗೂಳಿಹಟ್ಟಿ ಶೇಖರ್ ಸೇರಿದಂತೆ ಹಲವರು ನಾರಾಯಣಸ್ವಾಮಿ ನಾಯಕತ್ವದ ವಿರುದ್ಧ ಸಿಡಿದೆದಿದ್ದಾರೆ ಎಂದು ಗೊತ್ತಾಗಿದೆ.

    ಕ್ಷೇತ್ರದಲ್ಲಿ ಇವರ ಸಮುದಾಯಕ್ಕೆ ಸೇರಿದ ಮತದಾರರ ಪ್ರಮಾಣ ಗಣನೀಯ ಸಂಖ್ಯೆಯಲ್ಲಿದ್ದರೂ,ಚುನಾವಣೆ ಸಮಯದಲ್ಲಿ ಈ ಮತಗಳನ್ನು ಬಿಜೆಪಿಗೆ ಸೆಳೆಯಲು ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
    ಪಕ್ಷದ ವರಿಷ್ಠರಿಗೆ ಯಾವುದೇ ಕಾರಣಕ್ಕೂ ಈ ಬಾರಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಕೊಡಬೇಡಿ ಮತ್ತೆ ಅವರು ಕಣಕ್ಕಿಳಿದಿದ್ದೆ ಆದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದು ಪಕ್ಷದ ನಾಯಕತ್ವ ಅಭ್ಯರ್ಥಿ ಬದಲಾವಣೆಯಚಿಂತನೆ ಆರಂಭಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಒಂದು ವೇಳೆ ಪಕ್ಷ ಟಿಕೆಟ್ ನಿರಾಕರಿಸಿದರೆ ಅನಗತ್ಯವಾಗಿ ಮುಜುಗರಕ್ಕೀಡಾಗಬಹುದು ಎಂದು ಭಾವಿಸಿರುವ ನಾರಾಯಣಸ್ವಾಮಿ ಇದೀಗ ಚುನಾವಣೆ ರಾಜಕಾರಣದಿಂದ ನಿವೃತ್ತಿಯಾಗುವ ಚಿಂತನೆ ಆರಂಭಿಸಿದ್ದಾರೆ ಈ ಕುರಿತಂತೆ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಸಮಾಲೋಚನೆ ನಡೆಸಿರುವ ಅವರು ಸದ್ಯದಲ್ಲೇ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹುಲ್ಲು ತಿಂದು ಕೊಳಚೆ ನೀರು ಕುಡಿದು ಬದುಕುತ್ತಿರುವ ಪೆಲೆಸ್ತೀನಿಯರು | Palestine
    Next Article ಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    8 ಪ್ರತಿಕ್ರಿಯೆಗಳು

    1. 9vkg9 on ಜೂನ್ 4, 2025 3:38 ಅಪರಾಹ್ನ

      can i get generic clomiphene without insurance can you buy clomid prices how can i get clomid price get clomiphene online clomid challenge test where can i buy clomid without prescription clomid challenge test protocol

      Reply
    2. can you buy cialis online on ಜೂನ್ 9, 2025 12:07 ಫೂರ್ವಾಹ್ನ

      The thoroughness in this break down is noteworthy.

      Reply
    3. dosage of flagyl for dogs on ಜೂನ್ 10, 2025 5:56 ಅಪರಾಹ್ನ

      Thanks an eye to sharing. It’s first quality.

      Reply
    4. 6v7mb on ಜೂನ್ 12, 2025 6:41 ಅಪರಾಹ್ನ

      zithromax 250mg us – order sumycin 500mg online metronidazole 400mg cheap

      Reply
    5. vacc2 on ಜೂನ್ 18, 2025 12:44 ಫೂರ್ವಾಹ್ನ

      propranolol sale – cost methotrexate 2.5mg methotrexate over the counter

      Reply
    6. 9oj1m on ಜೂನ್ 20, 2025 9:28 ಅಪರಾಹ್ನ

      amoxil cheap – combivent brand generic ipratropium 100mcg

      Reply
    7. m4chy on ಜೂನ್ 23, 2025 1:19 ಫೂರ್ವಾಹ್ನ

      buy azithromycin 250mg for sale – buy tinidazole 300mg for sale buy nebivolol online

      Reply
    8. ytj9v on ಜೂನ್ 25, 2025 3:42 ಫೂರ್ವಾಹ್ನ

      amoxiclav pill – atbioinfo buy ampicillin no prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kcsq3 ರಲ್ಲಿ ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    • n6i1u ರಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಂಚು | Neha Hiremath
    • DannyTom ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe