ಬೆಂಗಳೂರು, ಡಿ.5- ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಉಗ್ರ ಹಿಂದುತ್ವದ ಭಾಷಣಕಾರ್ತಿ ಚೈತ್ರಾ ಕುಂದಾಪುರಗೆ (Chaitra Kundapura) ಕೋರ್ಟ್ ಜಾಮೀನು ನೀಡಿದ್ದು ಆಕೆ ಇಂದು ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚೈತ್ರಾ ಕುಂದಾಪುರ ಜತೆ ಸಹ ಆರೋಪಿ ಶ್ರೀಕಾಂತ್ ಕೂಡಾ ಬಿಡುಗಡೆಯಾಗಿದ್ದಾನೆ.ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಸೆಪ್ಟೆಂಬರ್ 12ರ ರಾತ್ರಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು.
ಅದೇ ಸಂದರ್ಭದಲ್ಲಿ ಆಕೆಯ ಸಹಚರ ಗಗನ್ ಕಡೂರ್, ಪ್ರಜ್ವಲ್, ಶ್ರೀಕಾಂತ್ ಕೂಡಾ ಸೆರೆಯಾಗಿದ್ದರು. ಮುಂದೆ ಕಡೂರಿನ ರಮೇಶ್ ಮತ್ತು ಧನರಾಜ್ ಹಾಗೂ ಚೆನ್ನಾ ನಾಯ್ಕ್ ಸೆರೆಸಿಕ್ಕಿದ್ದರು. ಅದಾದ ಕೆಲವೇ ದಿನದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕಟಕ್ನಲ್ಲಿ ಬಂಧಿಸಲಾಗಿತ್ತು. ಹಾಲಶ್ರೀ ಸ್ವಾಮೀಜಿಗೆ ನವೆಂಬರ್ 11ರಂದು ಕೋರ್ಟ್ ಜಾಮೀನು ನೀಡಿತ್ತು. ಇದೀಗ ಪ್ರಕರಣದ ಮೊದಲ ಆರೋಪಿ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತ್ಗೆ 3ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್ ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಎರಡು ಲಕ್ಷ ಬಾಂಡ್ ನೀಡುವಂತೆ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಷರತ್ತು ವಿಧಿಸಿದೆ. ಆರೋಪಿಗಳಿಂದ ಈಗಾಗಲೇ ಅವರು ವಂಚನೆ ಮಾಡಿದ ಲಕ್ಷಾಂತರ ರೂ. ನಗದು, ಆಸ್ತಿ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ.


4 ಪ್ರತಿಕ್ರಿಯೆಗಳು
References:
Chumash casino
References:
https://de.kzen.dev/index.php/user/letterpastry9
References:
Best steroid stack for cutting
References:
https://git.healthathome.com.np/eloise20610227
References:
Gmc bodybuilding
References:
https://espin.fi/Toiminta/Blogi/index.php/;focus=PLNT15_com_cm4all_wdn_Flatpress_347988&path=&frame=PLNT15_com_cm4all_wdn_Flatpress_347988?x=entry:entry250711-131407%3Bcomments:1
References:
Canadian online casino
References:
https://schoolido.lu/user/caketruck30/