ಗದಗ : ನಗರದ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಒಂದಾದ ಶಿವಾನಿ ವೆಜ್ ಹೋಟೆಲ್ ಗೆ ಹೋಗಿದ್ದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯ ಟೇಬಲ್ ಗೆ ಅಪ್ರಾಪ್ತ ಬಾಲಕ ಸರ್ವ್ ಮಾಡಲು ಮುಂದಾಗಿದ್ದ, ಸದ್ಯ ಬಾಲಕನ್ನು ರಕ್ಷಿಸಿ ಕುಟುಂಬಸ್ಥರ ಸುಪರ್ದಿಗೆ ಒಪ್ಪಿಸಲಾಗಿದೆ.
ಕಚೇರಿ ಕೆಲಸದ ಮಧ್ಯೆ ಮಕ್ಕಳ ರಕ್ಷಣಾ ಘಟಕದ ಡಿಸಿಪಿಒ ಅನುಪಮಾ ಅವರು ಸಿಬ್ಬಂದಿಯೊಂದಿಗೆ ತಿಂಡಿ ತಿನ್ನೋದಕ್ಕೆ ಹೋಟೆಲ್ ಗೆ ಹೋಗಿದ್ರು. ಈ ವೇಳೆ ಅವರ ಟೇಬಲ್ ಗೆ ಬಾಲಕನೋರ್ವ ಸರ್ವ್ ಮಾಡಿದ್ದು, ಅವನನ್ನು ವಿಚಾರಿಸಿದಾಗ ಬಾಲಕನಿಗೆ 15ವರ್ಷ ಅಂತ ತಿಳಿದು ಬಂದಿದೆ. ಕೂಡಲೇ ವಿಷಯವನ್ನು ಕಾರ್ಮಿಕರ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯ್ತು. ಲೇಬರ್ ಇನ್ಸಪೆಕ್ಟರ್ ಗಿರೀಶ್ ಬಂಕದಮನಿ, ಬಾಲ ಕಾರ್ಮಿಕರ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸ್ಥಳಕ್ಕೆ ಬಂದಿದು ಹೋಟೆಲ್ ಮ್ಯಾನೇಜರ್, ಬಾಲಕನಿಂದ ಮಕ್ಕಳ ಘಟಕ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ. ಅಲ್ಲದೆ, ಬಾಲಕನ್ನು ಶಾಲೆಗೆ ಸೇರಿಸಿ ದಾಖಲಾತಿಗಳನ್ನು ಒದಗಿಸುವಂತೆ ತಾಕೀತು ಮಾಡಿದ್ದಾರೆ.