Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳ ಮಾರಾಟ ಜಾಲ ಪತ್ತೆ | Child Trafficking
    ಸುದ್ದಿ

    ಮಕ್ಕಳ ಮಾರಾಟ ಜಾಲ ಪತ್ತೆ | Child Trafficking

    vartha chakraBy vartha chakraಏಪ್ರಿಲ್ 28, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಲಕ್ನೋ ,ಏ.27- ಬೃಹತ್‌ ಮಾನವ ಕಳ್ಳ ಸಾಗಾಣೆಯ ಜಾಲವೊಂದು ಬೆಳಕಿಗೆ ಬಂದಿದ್ದು, ಬಿಹಾರದಿಂದ ಉತ್ತರಪ್ರದೇಶ ರಾಜ್ಯಕ್ಕೆ ಸಾಗಾಟವಾಗುತ್ತಿದ್ದ 95ಕ್ಕೂ ಅಧಿಕ ಮಕ್ಕಳನ್ನು ರಕ್ಷಿಸಲಾಗಿದೆ.
    ಪೊಲೀಸರ ಸಹಾಯದಿಂದ ಮಕ್ಕಳನ್ನು ರಕ್ಷಿಸಿ ಆಹಾರ ಮತ್ತು ಔಷಧ ಪೂರೈಕೆ ಮಾಡಿದ್ದಾರೆ. ಇನ್ನು ಈ ಮಕ್ಕಳು 4-12 ವರ್ಷ ವಯೋಮಿತಿಯವರಾಗಿದ್ದು, ಅವರನ್ನು ಕರೆದುಕೊಂಡು ಬಂದವರ ಬಳಿಕ ಮಕ್ಕಳ ಪೋಷಕರ ಒಪ್ಪಿಗೆ ಪತ್ರವಾಗಲೀ, ಇತರೆ ಯಾವುದೇ ದಾಖಲೆಗಳು ಇರಲಿಲ್ಲ.

    ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಸರ್ವೇಶ್‌ ಅವಸ್ಥಿ ಅವರು ಮಾತನಾಡಿ ನಿನ್ನೆ ಬೆಳಗ್ಗೆ 9 ಗಂಟೆಗೆ ಉತ್ತರಪ್ರದೇಶ ಮಕ್ಕಳ ಹಕ್ಕುಗಳ ಆಯೋಗ ಸದಸ್ಯೆ ಸುಚಿತ್ರಾ ಚತುರ್ವೇದಿ ಕರೆ ಮಾಡಿ, ಬಿಹಾರದಿಂದ ಸಹರಾನ್‌ಪುರಕ್ಕೆ ಮಕ್ಕಳನ್ನು ಅಕ್ರಮವಾಗಿ ಸಾಗಾಟ ಆಗುತ್ತಿದೆ. ಮಕ್ಕಳು ಸದ್ಯ ಗೋರಕ್‌ಪುರದಲ್ಲಿದ್ದು, ಅಯೋಧ್ಯೆ ಮೂಲಕ ಅವರನ್ನು ಬೇರೆಡೆ ಸಾಗಿಸಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದರು.
    ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸರ್ವೇಶ್‌ ಅವಸ್ಥಿ ಪೊಲೀಸರ ಸಹಾಯದಿಂದ ಮಕ್ಕಳ ರಕ್ಷಿಸಲಾಗಿದ್ದು, ಮಕ್ಕಳನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಸದ್ಯ ಮಕ್ಕಳ ರಕ್ಷಿಸಲಾಗಿದ್ದು, ಅವರ ಪೋಷಕರನ್ನು ಸಂಪರ್ಕಿಸಿ ಅವರಿಗೆ ಒಪ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಕೆಲವು ದಿನಗಳ ಹಿಂದೆಯಷ್ಟೇ ಬಿಹಾರದಿಂದ ಮಕ್ಕಳ ಗುಂಪೊಂದನ್ನು ವಿವಿಧ ರಾಜ್ಯಗಳ ಮದರಸಾಗಳಿಗೆ ಕಳುಹಿಸಲಾಗಿತ್ತು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಗೋರಖ್‌ಪುರದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ಮಕ್ಕಳನ್ನು ರಕ್ಷಿಸಿತ್ತು. ದೇಶದ ಸಂವಿಧಾನ ಮಕ್ಕಳಿಗೆ ಶಿಕ್ಷಣದ ಹಕ್ಕನ್ನು ನೀಡಿದೆ. ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ಹೋಗಲೇಬೇಕು. ಹೀಗಿರುವಾಗಿ ಮಕ್ಕಳನ್ನು ಕಳ್ಳ ಸಾಗಾಟ ಮಾಡಿ ಮದರಸಾಗಳಿಗೆ ಕೊಂಡೊಯ್ದು ಅಲ್ಲಿ ಅವರ ಹೆಸರಿನಲ್ಲಿ ಸಾವಿರಾರು ರೂಪಾಯಿ ದೇಣಿಗೆ ಪಡೆಯುವುದು ಕಾನೂನು ಬಾಹಿರ ಎಂದು ಸರ್ವೇಶ್‌ ಹೇಳಿದ್ದಾರೆ.
    ಇನ್ನು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ, ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಅವರು ಏಕ್ಸ್ ನಲ್ಲಿ ಪೋಸ್ಟ್‌ನಲ್ಲಿ ಮಕ್ಕಳ ರಕ್ಷಣೆಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಹಾಗೂ ಘಟನೆಗಳ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಆಯೋಗಕ್ಕೆ ತಿಳಿಸಿವಂತೆ ಮನವಿ ಮಾಡಿದ್ದಾರೆ.

    child Child Trafficking traffic ಕಾನೂನು ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ಅವರಿಗೆ ತಪ್ಪು ತಿಳುವಳಿಕೆ ನೀಡಲಾಗಿದೆಯಂತೆ
    Next Article ಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldfloca ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • togel88 login ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • DonaldUlcer ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe