Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CM ವಿರುದ್ಧ ತನಿಖೆ ಹೇಗೆ..?
    Trending

    CM ವಿರುದ್ಧ ತನಿಖೆ ಹೇಗೆ..?

    vartha chakraBy vartha chakraಸೆಪ್ಟೆಂಬರ್ 26, 202430 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.26-
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿರುವ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಯಾವ ನಿಯಮಾವಳಿಗಳ ಆಧಾರದಲ್ಲಿ ತನಿಖೆ ನಡೆಸಬೇಕು ಎಂಬ ಜಿಜ್ಞಾಸೆ ಉಂಟಾಗಿದೆ.
    ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ದಂಡ ಸಂಹಿತೆ(CRPC) ಅಡಿ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ ನೀಡಿದೆ ಆದರೆ ಕೇಂದ್ರ ಸರ್ಕಾರ ಸಿ ಆರ್ ಪಿ ಸಿ ಬದಲಿಗೆ ಭಾರತೀಯ ನ್ಯಾಯ ಸಂಹಿತೆಯನ್ನು ಜಾರಿಗೆ ತಂದಿದೆ. ಅಲ್ಲದೆ ಇನ್ನು ಮುಂದೆ ಎಲ್ಲಾ ಪ್ರಕರಣಗಳನ್ನು ಸಿಆರ್ ಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಅಧಿ ಸೂಚನೆ ಮೂಲಕ ತಿಳಿಸಿದೆ ಆದರೆ ಜನಪ್ರತಿನಿಧಿಗಳ ನ್ಯಾಯಾಲಯ ಈ ಪ್ರಕರಣ ಕುರಿತಂತೆ ಸಿ ಆರ್ ಪಿ ಸಿ ಅಡಿಯಲ್ಲಿ ತನಿಖೆಗೆ ಆದೇಶದಿದೆ ಇದು ತನಿಖಾ ಅಧಿಕಾರಿಗಳನ್ನು ಜಿಜ್ಞಾಸೆಯಲ್ಲಿ ಬೀಳುವಂತೆ ಮಾಡಿದೆ.
    ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಪ್ರಕರಣವನ್ನು ಯಾವ ನಿಯಮಗಳ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಮತ್ತೊಮ್ಮೆ ನ್ಯಾಯಾಲಯದ ಅಭಿಪ್ರಾಯ ಕೇಳುವ ಕುರಿತಂತೆ ಚಿಂತನೆ ಆರಂಭಿಸಿದ್ದಾರೆ.
    ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿರುವಂತೆ ಸಿಆರ್‌ಪಿಸಿ ಅಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಹೊಸದಾಗಿ ಜಾರಿಯಲ್ಲಿರುವ ಬಿಎನ್‌ಎಸ್‌‍ಎಸ್‌‍ ನಿಯಮಗಳ ಅಡಿ ಪ್ರಕರಣ ದಾಖಲಿಸಲು ಆದೇಶಿಸಿದ್ದರೆ ಸೂಕ್ತವಾಗುತ್ತಿತ್ತು ಎಂದು ಹೇಳಿದ್ದಾರೆ.
    ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸಿಆರ್‌ಪಿಸಿ 156/3ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆದೇಶಿಸಿದೆ. ಆದರೆ ಈಗ ಸಿಆರ್‌ಪಿಸಿ ಅಸ್ತಿತ್ವದಲ್ಲಿ ಇಲ್ಲ ಎಂದು ಹೇಳಿದರು.
    ಬಿಎನ್‌ಎಸ್‌‍ಎಸ್‌‍ ನಿಯಮಗಳು 2024ರ ಜುಲೈ 1 ರಿಂದಲೂ ಚಾಲ್ತಿಯಲ್ಲಿದೆ. ಅದರ ಅಡಿ ಪ್ರಕರಣ ದಾಖಲಿಸಿ ಕಾನೂನು ಪ್ರಕ್ರಿಯೆ ಮುಂದುವರಿಸಲು ಅವಕಾಶವಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಕುರಿತು ಚರ್ಚೆಗಳು ನಡೆಯುತ್ತಿವೆ. ಕಾನೂನು ತಜ್ಞರ ತಂಡ ಪರಿಶೀಲನೆ ನಡೆಸಿ ಯಾವ ರೀತಿಯ ವರದಿ ನೀಡಲಿದೆ ಎಂದು ಕಾಯುತ್ತಿದ್ದೇವೆ. ವರದಿಯ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
    ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ನ ವಿಭಾಗೀಯ ಪೀಠ, ಸುಪ್ರೀಂ ಕೋರ್ಟ್‌ ಸೇರಿ ಬೇರೆ ಬೇರೆ ಹಂತಗಳಲ್ಲಿ ಪ್ರಶ್ನಿಸಲು ಅವಕಾಶ ಇದೆ.ಹೈಕೋರ್ಟ್‌ನ ತೀರ್ಪಿನಿಂದ ನಮಗೆ ಸಮಾಧಾನವಾಗಿಲ್ಲ. ನಾವು ನೀಡಿದ ಸಾಕ್ಷ್ಯಗಳು, ಪುರಾವೆಗಳನ್ನು ತೀರ್ಪು ನೀಡುವ ವೇಳೆ ಪರಿಗಣಿಸಲಾಗಿಲ್ಲ. ಹೀಗಾಗಿ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದರು.

    Bangalore Government Karnataka m News Politics Trending Varthachakra ಕಾಂಗ್ರೆಸ್ ಕಾನೂನು ನ್ಯಾಯ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಗೆ ರಾಹುಲ್ ಗಾಂಧಿ ಕೊಟ್ಟ ಸೂಚನೆ ‌
    Next Article BJP ಬೇಗುದಿ ನಿಲ್ಲೋದು ಯಾವಾಗ.
    vartha chakra
    • Website

    Related Posts

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ctoda-498 ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • aviator_ljEi ರಲ್ಲಿ ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    • ctoda-365 ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe