ಬೆಂಗಳೂರು,ಏ.29-
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಮೇಲೆ ಹಲ್ಲೆ ಲ್ಲೆ ಮಾಡಲು ಮುಂದಾದ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು ಎಂದು ಪ್ರಶ್ನಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯವಾಗುವ ಸಮಯ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಅವರಿಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಮನೆಮಂದಿಯ ಮೇಲೆ ರೇಗಾಡುವ ಹಾಗೆ ಸರ್ಕಾರಿ ಅಧಿಕಾರಿಗಳ ಮೇಲೆ ರೇಗಾಡುತ್ತಿದ್ದಾರೆ, ಪೊಲೀಸ್ ಅಧಿಕಾರಿಯ ಮೇಲೆ ಕೈ ಎತ್ತುತ್ತಿದ್ದಾರೆ, ಮಹಿಳೆಯರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದೆ.
ದರ್ಪದಿಂದ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆದುಕೊಳ್ಳುತ್ತಿರುವುದು ಮುಖ್ಯಮಂತ್ರಿ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ. ಸಿಎಂ ಅವರೇ, ನಿಮ್ಮ ಗೂಂಡಾಗಿರಿಗೆ ಕೊನೆಯೆಂದು? ನಿಮ್ಮ ಮೇಲೆ ರೌಡಿ ಶೀಟರ್ ಏಕೆ ತೆರೆಯಬಾರದು? ಎಂದು ಪ್ರಶ್ನಿಸಿದೆ.
Previous Articleವೈದ್ಯರಿಗೆ Facebook status ತಂದ ಆಪತ್ತು!
Next Article ವಕೀಲ್ ಸಾಬ್ ಜೈಲಿಂದ ಬಿಡುಗಡೆ

1 ಟಿಪ್ಪಣಿ
mcluck new customer promo https://mcluckcasinogm.com/ mcluck Kansas