ಬೆಂಗಳೂರು, ಅ.19- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟದ ಭಾಗವಾಗಿರಲಿದೆ ಎಂದು ಪ್ರಕಟಿಸಿದ್ದರು.
ಇದರಿಂದಾಗಿ ಪಕ್ಷದಲ್ಲಿ ಗೊಂದಲ ಉಂಟಾಗಿತ್ತು. ಇದೀಗ ಇದಕ್ಕೆ ತೆರೆ ಎಳೆಯಲಾಗಿದ್ದು,ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ.ಅಲ್ಲದೆ ರಾಜ್ಯ ಘಟಕಕ್ಕೆ ಹಂಗಾಮಿ ಅಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಜೆಪಿಭವನದಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು, ಸದಸ್ಯರು, ಶಾಸಕರು ಒಳಗೊಂಡಂತೆ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯ ನಂತರ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಘಟಕವನ್ನು ವಿಸರ್ಜನೆ ಮಾಡಲಾಗಿದೆ.ಪಕ್ಷದ ಕಾರ್ಯ ಚಟುವಟಿಕೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಹಾಗೂ ಮುಂದಿನ ಚುನಾವಣೆವರೆಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಂಗಾಮಿ (ಅಡಹಾಕ್) ರಾಜ್ಯಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು
ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕಾರ್ಯ ನಿರ್ವಹಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಅವರೊಂದಿಗೆ ಕಾರ್ಯ ನಿರ್ವಹಿಸಲು ಇನ್ನು ಮೂರು ದಿನದಲ್ಲಿ ಕೆಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ತಿಳಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ಬಗ್ಗೆ ಯಾವ ತೀರ್ಮಾನ ಮಾಡಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ರಿಮೂವ್ ಮಾಡಲಾಗಿದೆ. ನೀವು ರಾಜ್ಯ ಘಟಕ ವಿಸರ್ಜನೆ ಮಾಡಲಾಗಿದೆ ಎಂದು ಭಾವಿಸಬಹುದು ಎಂದು ಹೇಳಿದರು.
ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಒಕ್ಕಲಿಗರೇ ಆಗಿದ್ದಾರೆ ಎಂದು ನೀವು ಪ್ರಶ್ನಿಸಬಹುದು. ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಇದೆ. ಅವರ ನಾಯಕತ್ವವನ್ನು ಗುರುತಿಸಲಾಗಿದೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ರೈತರ ಸಾಲಮನ್ನಾ, ಜನಪ್ರಿಯ ಕಾರ್ಯಕ್ರಮಗಳು, ಚುನಾವಣಾ ಪೂರ್ವದಲ್ಲಿ ನಡೆದ ಜನತಾ ಜಲಧಾರೆ, ಪಂಚರತ್ನ ಕಾರ್ಯಕ್ರಮಗಳಿಂದ ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿದ್ದಾರೆ. ಹೀಗಾಗಿ ಪಕ್ಷದ ಎಲ್ಲ ನಾಯಕರು, ಮುಖಂಡರು ಒಟ್ಟಾಗಿ ತೀರ್ಮಾನಿಸಿ ಕುಮಾರಸ್ವಾಮಿ ಅವರೇ ಅಧ್ಯಕ್ಷರಾಗಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು ರಾಜ್ಯ ಘಟಕ, ರಾಷ್ಟ್ರ ಘಟಕ ಬೇರೆ. ಬೇರೆ ಬೇರೆ ರಾಜ್ಯ ಘಟಕಗಳು ಬೇರೆ. ತಮಿಳುನಾಡಿನ ಘಟಕ ಪಕ್ಷ ಕೈಗೊಳ್ಳುತ್ತಿರುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದೆ. ತಮಿಳುನಾಡು ಘಟಕ ಅಲ್ಲಿನ ಸರ್ಕಾರಲ್ಲಿ ಭಾಗಿಯಾಗಿದೆ ಎಂದು ಹೇಳಿದರು. ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರುಖ್ ಸೇರಿದಂತೆ ಹಲವು ಮುಖಂಡರು ಪಕ್ಷದಲ್ಲಿ ಇದ್ದಾರೆ. ನಮಗೆ ಅಲ್ಪಸಂಖ್ಯಾತ ಮುಖಂಡರ ಕೊರತೆ ಇಲ್ಲ. ಒಂದೊಂದು ರಾಜ್ಯದಲ್ಲಿ ಒಂದೊಂದು ವಿಧವಾದ ಬೆಳವಣಿಗೆಗಳಿವೆ. ಪಶ್ಚಿಮ ಬಂಗಾಳವೇ ಬೇರೆ, ತ್ರಿಪುರವೇ ಬೇರೆ, ಕರ್ನಾಟಕವೇ ಬೇರೆ ಎಂದು ಅವರು ವಿಶ್ಲೇಷಿಸಿದರು.
ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ ಪಕ್ಷದಲ್ಲಿನ ವಿವಿಧ ಘಟಕಗಳ ಜವಾಬ್ದಾರಿ, ಸ್ಥಾನಮಾನ ಮಾರ್ಪಡು ಮಾಡಿರಲಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರು ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.


6 ಪ್ರತಿಕ್ರಿಯೆಗಳು
betmgm Minnesota betmgm-play mgm draftkings
Feel the taste of victory with your first bets. crown coin casino online offers a mobile version for convenience. Join the community of lucky players.
Craving a high-octane slot? Sweet Bonanza serves it up with tumbling reels, scatters, and multiplier bombs galore. Free sweet bonanza 1000 max win spins turn good days into legendary ones. Play today!
Charge into chaos for controlled chaos wins. buffalo gold collection free play delivers herds of wilds, scatter triggers, and golden glory. Play now!
Chumba Casino gives you more ways to win every single day. macumba welcome bonus + daily rewards = big prize potential. Join now!
Crypto casino done right. Instant deposits, anonymous play option, and rakeback that actually pays. gates of olympus stake is built different.