ನವದೆಹಲಿ: ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಹಿರಿಯ ನಾಯಕ ಕಪಿಲ್ ಸಿಬಲ್ ಅಧಿಕೃತವಾಗಿ ಕಾಂಗ್ರೆಸ್ ತೊರೆದಿದ್ದಾರೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಕಪಿಲ್ ಅವರ ಬೆನ್ನಿಗೆ ನಿಂತಿದೆ. ಮೇ 16ರಂದೇ ಕಾಂಗ್ರೆಸ್ ತೊರೆದಿರುವುದಾಗಿ ಕಪಿಲ್ ಸಿಬಲ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ನ ಭಿನ್ನಮತೀಯ ಗುಂಪು ‘ಜಿ23’ರಲ್ಲಿ ಪ್ರಮುಖರಾಗಿದ್ದ ಸಿಬಲ್ ಅವರು ಪಕ್ಷದ ಪುನರ್ರಚನೆಗೆ ಒತ್ತಾಯಿಸಿದ್ದರು.
ಉತ್ತರ ಪ್ರದೇಶದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರ ಕಾಲಾವಧಿ ಜುಲೈಗೆ ಕೊನೆಯಾಗಲಿದೆ.
ನಾನು ಕಾಂಗ್ರೆಸ್ ಮುಖಂಡನಾಗಿದ್ದೆ. ಕಾಂಗ್ರೆಸ್ಗೆ ಮೇ 16ರಂದು ರಾಜೀನಾಮೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಕುರಿತು ನಾನು ಏನನ್ನೂ ಹೇಳುವುದಿಲ್ಲ…ಯಾವುದೇ ಮಾತನ್ನು ಆಡುವುದೂ ನನಗೆ ಸರಿ ಕಾಣುತ್ತಿಲ್ಲ. 30–31 ವರ್ಷಗಳ ಸುದೀರ್ಘ ಸಂಬಂಧವನ್ನು ಕಳಚಿಕೊಳ್ಳುವುದು ಸುಲಭದ ಸಂಗತಿಯಲ್ಲ ಎಂದು ನಾಮಪತ್ರ ಸಲ್ಲಿಕೆ ಬಳಿಕ ಕಪಿಲ್ ಸಿಬಲ್ ಹೇಳಿದ್ದಾರೆ.
ನಾನೀಗ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ದೇಶದಲ್ಲಿ ಸದಾ ಸ್ವತಂತ್ರ ಅಭ್ಯರ್ಥಿಯಾಗಲು ಬಯಸುತ್ತೇನೆ… ಅದು ಮುಖ್ಯವೂ ಆಗಿದೆ. ವಿರೋಧ ಪಕ್ಷದಲ್ಲಿದ್ದಾಗ ನಾವು ಮೈತ್ರಿ ಮಾಡಿಕೊಳ್ಳುವ ಮೂಲಕ ಮೋದಿ ಸರ್ಕಾರವನ್ನು ವಿರೋಧಿಸುವ ಪ್ರಯತ್ನ ನಡೆಸಿದೆವು ಎಂದು ಹೇಳಿದರು.
ಪಕ್ಷದ ಸದಸ್ಯರಾಗಿ ನಾವು ಆ ಪಕ್ಷದ ಶಿಸ್ತಿಗೆ ಒಳಪಟ್ಟಿರುತ್ತೇವೆ. ಆದರೆ, ಸ್ವತಂತ್ರ ದನಿಯನ್ನು ಹೊಂದಿರುವುದು ಮುಖ್ಯವಾಗುತ್ತದೆ. ಅಖಿಲೇಶ್ ಯಾದವ್ ಅವರಿಗೆ ಆಭಾರಿಯಾಗಿದ್ದೇನೆ… ನಾವು, ಹಲವು ಜನರು 2024ರ ಚುನಾವಣೆಗಾಗಿ ಒಗ್ಗೂಡಿದ್ದೇವೆ. ಜನರ ಮುಂದೆ ನಮ್ಮ ಎಲ್ಲರ ಅಭಿಪ್ರಾಯಗಳನ್ನು ತೆರೆದಿಡಲಿದ್ದೇವೆ. ಕೇಂದ್ರ ಸರ್ಕಾರದ ದೋಷಗಳನ್ನು ಬಿಡಿಸಿಡಲಿದ್ದೇವೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
