Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಲ್ಲಿ ಈಗ ಪರಿಶಿಷ್ಟ ಜಾತಿ, ವರ್ಗದವರ ಪಟ್ಟು | Congress
    Trending

    ಕಾಂಗ್ರೆಸ್ ನಲ್ಲಿ ಈಗ ಪರಿಶಿಷ್ಟ ಜಾತಿ, ವರ್ಗದವರ ಪಟ್ಟು | Congress

    vartha chakraBy vartha chakraಫೆಬ್ರವರಿ 8, 2024Updated:ಫೆಬ್ರವರಿ 8, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.8 – ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನೆಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ (Congress) ವಿದ್ಯಮಾನಗಳು ಬಿರುಸಿನಿಂದ ನಡೆಯುತ್ತಿವೆ. ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ಪಕ್ಷದ ನಾಯಕತ್ವ ತಮ್ಮ ಅಭಿಪ್ರಾಯ ಕೇಳಬೇಕು ಎಂದು ಪರಿಶುದ್ಧ ಜಾತಿ ಮತ್ತು ವರ್ಗದ ಸಚಿವರು ಹೈಕಮಾಂಡ್ ಮೇಲೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ.

    ಆಹಾರ ಸಚಿವ ಕೆಎಚ್ ಮುನಿಯಪ್ಪ ನಿವಾಸದಲ್ಲಿ ಉಪಹಾರಕೂಟ ನಡೆಸಿದ ಈ ವರ್ಗಕ್ಕೆ ಸೇರಿದ ಸಚಿವರಾದ ಸತೀಶ್ ಜಾರಕಿಹೊಳಿ ಜಿ ಪರಮೇಶ್ವರ್ ಎಚ್ಎಸ್ಸಿ ಮಹಾದೇವಪ್ಪ ಸೇರಿದಂತೆ ಹಲವರು ಹೈಕಮಾಂಡ್ ಏಕ ಪಕ್ಷಿಯ ತೀರ್ಮಾನ ಕೈಗೊಳ್ಳಬಾರದು ಆಗ್ರಹ ಮಂಡಿಸಲು ನಿರ್ಧರಿಸಿದ್ದಾರೆ.
    ಸದ್ಯ ನಡೆಯುತ್ತಿರುವ ರಾಜ್ಯಸಭೆ ಚುನಾವಣೆ ಮತ್ತು ಮುಂಬರುವ ಲೋಕಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಬಂದಾಗ ತಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗಿ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ತಮ್ಮ ಅಭಿಪ್ರಾಯಗಳಿಗೆ ಮಾನ್ಯತೆ ನೀಡಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಈ ಹಿಂದೆಯಲ್ಲಿ ಸದ್ಯ ನಡೆಯುತ್ತಿರುವ ರಾಜ್ಯಸಭೆ ಚುನಾವಣೆಯಲ್ಲಿ ಈ ಸಮುದಾಯಕ್ಕೆ ಸೇರಿದವರಿಗೆ ಒಂದು ಸ್ಥಾನ ನೀಡಬೇಕು ಅದೇ ರೀತಿ ಪಕ್ಷದಲ್ಲಿ ಅತ್ಯಂತ ಹಿರಿಯರಾಗಿರುವ ಬಿ ಎಲ್ ಶಂಕರ್ ಮತ್ತು ತೀರಾ ಹಿಂದುಳಿದ ಸಮುದಾಯಕ್ಕೆ ಸೇರಿದ ಎಂಸಿ ವೇಣುಗೋಪಾಲ್ ಅವರಿಗೆ ಅವಕಾಶ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ.
    ಪರಿಶಿಷ್ಟ ವರ್ಗಕ್ಕೆ ಸೇರಿದ ರಾಯಚೂರು ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾತ್ರವಲ್ಲದೆ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಪ್ರಾಯ ಅಂತಿಮವಾಗಬೇಕು ಎಂದು ಒತ್ತಡ ಹೇರಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

    ಅದೇ ರೀತಿಯಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಬಂದಾಗ ಮಹಾದೇವಪ್ಪ ಅವರ ಮಾತು ಅಂತಿಮವಾಗಬೇಕು ತುಮಕೂರು ಕೋಲಾರ ಚಿತ್ರದುರ್ಗ ಮತ್ತು ವಿಜಯಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಬಂದಾಗ ಪರಮೇಶ್ವರ್ ಮುನಿಯಪ್ಪ ಮತ್ತು ಆರ್ ಬಿ ತಿಮ್ಮಾಪುರ ಅವರ ಮಾತುಗಳಿಗೆ ಮಾನ್ಯತೆ ನೀಡಬೇಕು ಎಂದು ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸ್ಥಳೀಯ ಘಟಕಗಳು ಮತ್ತು ಉಸ್ತುವಾರಿ ಸಚಿವರ ಅಭಿಪ್ರಾಯ ಆಲಿಸಲಾಗಿದೆ ಎಂದು ಹೇಳಿ ಪ್ರದೇಶ ಕಾಂಗ್ರೆಸ್ ಈ ಕ್ಷೇತ್ರಗಳಿಗೆ ಕೆಲವು ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಪಟ್ಟಿಮಾಡಿದೆ. ಆದರೆ ಇದರಲ್ಲಿ ತಮ್ಮ ಅಭಿಪ್ರಾಯಗಳಿಗೆ ಸಣ್ಣ ಮಾನ್ಯತೆಯು ಇಲ್ಲವಾಗಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರು ಅಸಮಾಧಾನ ಹೊರಹಾಕಿದ್ದು ಈ ಕುರಿತಂತೆ ಸದ್ಯದಲ್ಲೇ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಗೊತ್ತಾಗಿದೆ.

    Congress Entertainment Government News Politics Trending ಕಾಂಗ್ರೆಸ್ ಚುನಾವಣೆ ತುಮಕೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress
    Next Article ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ | Nirmala Sitharaman
    vartha chakra
    • Website

    Related Posts

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    ಮೇ 6, 2025

    ಪೊಲೀಸರು ಸಸ್ಪೆಂಡ್.

    ಮೇ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • Floydfox ರಲ್ಲಿ ಪರಿಷತ್ ನಾಮಕರಣ: ಸಿಕ್ಕವರಿಗೆ ಸೀರುಂಡೆ (ಸುದ್ದಿ ವಿಶ್ಲೇಷಣೆ) | Karnataka Vidhan Parishad
    • Akazodulky ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe