Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024
    Viral

    ಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024

    vartha chakraBy vartha chakraಡಿಸೆಂಬರ್ 26, 202324 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    New Year 2024
    Share
    Facebook Twitter LinkedIn Pinterest Email WhatsApp

    ಬೆಂಗಳೂರು ,ಡಿ.26 -ಮಹಾಮಾರಿ ಕೊರೊನಾ ಆತಂಕವನ್ನು ಬದಿಗೊತ್ತಿ ನಗರದಲ್ಲಿ 31ರ ರಾತ್ರಿ ನಡೆಯಲಿರುವ ಹೊಸ ವರ್ಷಾಚರಣೆಯನ್ನು ಸಂಭ್ರಮ (New Year 2024) ಸಡಗರದಿಂದ ಆಚರಿಸಲು ಸಮರೋಪಾದಿಯ ಸಿದ್ಧತೆಗಳು ನಡೆಯುತ್ತಿದ್ದು, ಸಂಭ್ರಮದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.
    ಹೊಸ ವರ್ಷಾಚರಣೆಯ ವೇಳೆ‌ ಕೋವಿಡ್‌ ಮಾರ್ಗಸೂಚಿಯ ನಿಯಂತ್ರಣ ಇರಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿ‌
    ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧದ ಸೂಚನೆಗಳನ್ನು ನೀಡದೇ ಬಿಗಿ ಭದ್ರತೆ, ವಾಹನ ಸಂಚಾರ ಬದಲಾವಣೆಯ ವಿವರಗಳನ್ನು ನೀಡಿದರು.

    ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸಂಭ್ರಮ (New Year 2024) ಸಡಗರದಿಂದ ಆಚರಿಸಲು ಅನುವು ಮಾಡಿಕೊಡಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,ಸಂಭ್ರಮದ ವೇಳೆ ಕಾನೂನು ಮೀರಿದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಹೊಸ ವರ್ಷಾಚರಣೆಗೆ ಸಂಬಂಧಿಸಿ ಎರಡು ಸುತ್ತಿನ ಸಭೆ ಮಾಡಿದ್ದೇವೆ. ಗೃಹಮಂತ್ರಿಯ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಯ ಜೊತೆಗೆ ಚರ್ಚೆ ನಡೆಸಿದ್ದೇವೆ. ಚರ್ಚೆಗಳ ಒಟ್ಟು ಹಿನ್ನೆಲೆಗಳನ್ನು ಇಟ್ಟುಕೊಂಡು ಭದ್ರತೆ, ಸುರಕ್ಷತೆಯ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದು ತಿಳಿಸಿದರು.
    ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಎಂ.ಜಿ ರಸ್ತೆ ಬ್ರಿಗೇಡ್ ರಸ್ತೆ, ಇಂದಿರಾ ನಗರ, ಕೋರಮಂಗಲ ಸೇರಿದಂತೆ ಎಲ್ಲಾ ಕಡೆ ಸೂಕ್ತ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ ಎಂದರು.
    ಹೆಚ್ಚುವರಿ ಪೊಲೀಸ್ ಆಯುಕ್ತರು, ಒಬ್ಬರು ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿ 15, ಎಸಿಪಿ 45, ಪೊಲೀಸ್ ಇನ್ಸ್ ಪೆಕ್ಟರ್ 160, ಪಿಎಸ್‌ಐ 600, ಎಎಸ್‌ಐ 600 ಸೇರಿ 5200 ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದ್ದು,ಪರಿಸ್ಥಿತಿಯ ಮೇಲೆ ಹದ್ದಿನ ಕಣ್ಣಿಡಲಾಗುವುದು ಎಂದು ಹೇಳಿದರು.

    ವರ್ಷಾಚರಣೆಯಲ್ಲಿ ಭಾಗವಹಿಸುವ ಮಹಿಳೆಯರ ಸುರಕ್ಷತೆಯ ಹಿನ್ನೆಲೆಯಲ್ಲಿ ಪೊಲೀಸ್ ಕಿಯೋಸ್ಕ್ ಗಳನ್ನು ತೆರೆಯಲಾಗುತ್ತದೆ.ತುರ್ತು ಪರಿಸ್ಥಿತಿಯಲ್ಲಿ ಸೇವೆ ಬಳಸಬಹುದಾಗಿದೆ,ಕಳೆದ ಬಾರಿ ವಿಪರೀತ ಮದ್ಯಪಾನ ಮಾಡಿ ಅವಾಂತರ ಮಾಡಿದವರನ್ನು ಠಾಣೆಗೆ ಕರೆಸಿ ಎಚ್ಚರಿಕೆ ಕೊಡಲಾಗಿದೆ ಎಂದರು.
    ಈ ಬಾರಿ ತಡರಾತ್ರಿ 1 ಗಂಟೆ ವರೆಗೆ ಅನುಮತಿ ನೀಡಲಾಗಿದೆ. ಈಗಾಗಲೆ ಕ್ಲಬ್, ಪಬ್ ಗಳ ಮಾಲೀಕರ ಜೊತೆ ಸಭೆ ನಡೆಸಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅಸ್ಪದ ನೀಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
    ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಏರ್ ಪೋರ್ಟ್ ರಸ್ತೆ ಪಡಿಸಿ ಫ್ಲೈ ಓವರ್‌ ಹೊರತುಪಡಿಸಿ ಉಳಿದೆಲ್ಲಾ ಫ್ಲೈ ಓವರ್‌ ರಸ್ತೆಯಲ್ಲಿ ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 6ರ ವರೆಗೂ ಬಂದ್ ಆಗಿರಲಿದೆ.
    ಎಂಜಿ ರಸ್ತೆ ಸುತ್ತಮುತ್ತ ರಾತ್ರಿ 8 ಗಂಟೆಯಿಂದ ತಡರಾತ್ರಿ 1 ಗಂಟೆಯವರೆಗೆ ವಾಹನ ಸಂಚಾರ ನಿಷೇಧ ಮಾಡಲಾಗಿದ್ದು,ಭಾರಿ ವಾಹನಗಳ ಸಂಚಾರಕ್ಕೆ ರಾತ್ರಿ 11 ಗಂಟೆಯ ಬಳಿಕ ಅವಕಾಶ ಮಾಡಿಕೊಡಲಾಗುತ್ತದೆ.
    ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ತಡೆಯುವುದು ಪಾನಮತ್ತರಾಗಿ ವಾಹನ ಚಲಾಯಿಸುವುದನ್ನು ತಡೆಯಲು 48 ಕಡೆಗಳಲ್ಲಿ ನಾಕಾಬಂದಿ ಮಾಡಿ ತಪಾಸಣೆಗಳನ್ನು ನಡೆಸಲಾಗುತ್ತದೆ ಎಂದು ವಿವರ ನೀಡಿದರು.

     

    ALSO READ | Latest Kannada News | News In Kannada

    ಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations

    #kannada art Bangalore Congress Government kannada news Karnataka m new year 2024 News Politics Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ ಪ್ರತಾಪ್ ಸಿಂಹ ಸೋದರ ಮರಗಳ್ಳನಾ? | Pratap Simha
    Next Article ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cheap tobacco ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • manchester cigarettes ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • ZThomasAlkargo ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe