Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cyber crime City ಬೆಂಗಳೂರು
    ಅಪರಾಧ

    Cyber crime City ಬೆಂಗಳೂರು

    vartha chakraBy vartha chakraಫೆಬ್ರವರಿ 27, 2023Updated:ಫೆಬ್ರವರಿ 28, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.27- ದೇಶದಲ್ಲಿ ಅತಿ ಹೆಚ್ಚು ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳಲ್ಲಿ
    ಕರ್ನಾಟಕ ಮೂರನೇ ಸ್ಥಾನ ಪಡೆದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ರಾಜ್ಯದಲ್ಲಿ ಸೈಬರ್‌ ವಂಚನೆಯಲ್ಲಿ ನಿತ್ಯ 1 ಕೋಟಿ ರೂ.ಗೂ ಹೆಚ್ಚು ಹಣ ಕಳೆದು ಕೊಳ್ಳುತ್ತಿರುವುದು ಅಂಕಿ ಅಂಶಗಳಿಂದ ಕಂಡುಬಂದಿದೆ.
    ಕಳೆದ 2019 ರಿಂದ 2023ರ ಜನವರಿ ಅಂತ್ಯದವರೆಗಿನ ಸೈಬರ್‌ ವಂಚನೆಯಲ್ಲಿ ಕಳೆದುಕೊಂಡ ಹಣದ ಲೆಕ್ಕದ ಕುರಿತು ರಾಜ್ಯ ಪೊಲೀಸ್‌ ಇಲಾಖೆ ವಿಧಾನ ಪರಿಷತ್‌ ಕಲಾಪದಲ್ಲಿ ನೀಡಿರುವ ಅಧಿಕೃತ ಮಾಹಿತಿಯಲ್ಲಿ ಈ ಅಂಶ ಬಹಿರಂಗವಾಗಿದೆ.
    ಒಟಿಪಿ, ಕ್ರಿಪ್ಟೋ ಕರೆನ್ಸಿ ಹೂಡಿಕೆ, ಲಕ್ಕಿ ಡ್ರಾ, ಸಾಲ ನೀಡಿಕೆ, ಸ್ಕಿಮ್ಮಿಂಗ್‌, ಉಡುಗೊರೆ ನೆಪ, ಕ್ಯೂ ಆರ್‌ ಕೋಡ್‌ ಸ್ಕ್ಯಾ‌ನ್‌ ಸೇರಿ ಹತ್ತು ಹಲವು ವಂಚನಾ ಮಾರ್ಗಗಳ ಮೂಲಕ ಕಳೆದ ವರ್ಷ 363 ಕೋಟಿ ರೂ.ಗಳನ್ನು ವಂಚಕರು ಲಪಟಾಯಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ722 ಕೋಟಿ ರೂ. ವಂಚಕರ ಪಾಲಾಗಿದೆ. ಈ ಪೈಕಿ ಐಟಿ ಹಬ್‌ ಬೆಂಗಳೂರಿನಲ್ಲಿಯೇ 446 ಕೋಟಿ ರೂ.ಗಳಿಗೂ ಅಧಿಕ ಹಣ ಲೂಟಿ ಮಾಡಲಾಗಿದೆ. ಹಣ ಕಳೆದುಕೊಂಡವರಲ್ಲಿ ರಾಜಧಾನಿ ಬೆಂಗಳೂರು ಜನರದ್ದೇ ಸಿಂಹಪಾಲಾಗಿದೆ. ಉಳಿದಂತೆ ಮೈಸೂರು, ಮಂಡ್ಯ ಜಿಲ್ಲೆಗಳು ನಂತರದ ಸ್ಥಾನ ಪಡೆದಿವೆ.
    ಕ್ಷಣಾರ್ಧದಲ್ಲಿ ನಾಗರಿಕರ ಬ್ಯಾಂಕ್‌ ಖಾತೆಗಳಿಂದ ಹಣ ದೋಚುತ್ತಿರುವ ಆರೋಪಿಗಳಿಂದ ಹಣ ರಿಕವರಿ ಮಾಡುವುದೇ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಪೊಲೀಸರು ಹರಸಾಹಸಪಟ್ಟು 116 ಕೋಟಿ ರೂ.ರಿಕವರಿ ಮಾಡಲು ಸಫಲರಾಗಿದ್ದಾರೆ. ಉಳಿದ ಹಣ ರಿಕವರಿಯೇ ಕಷ್ಟಸಾಧ್ಯ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
    ಸೈಬರ್‌ ವಂಚಕರಲ್ಲಿ ಬಹುತೇಕರು ಗುರುತು ಮರೆಮಾಚಿಯೇ ಕೃತ್ಯ ಎಸಗುತ್ತಾರೆ. ಜತೆಗೆ, ಉತ್ತರ ಭಾರತದ ರಾಜಸ್ಥಾನ, ಜಾರ್ಖಂಡ್‌, ಹರಿಯಾಣ ಸೇರಿ ಇನ್ನಿತರೆ ರಾಜ್ಯಗಳು ಹಾಗೂ ಹೊರದೇಶಗಳಲ್ಲಿದ್ದುಕೊಂಡೇ ಬ್ಯಾಂಕ್‌ ಖಾತೆಗಳಿಗೆ ಕನ್ನ ಹಾಕುತ್ತಿದ್ದಾರೆ. ನಕಲಿ ಸಿಮ್‌ ಕಾರ್ಡ್‌, ಬೇರೊಬ್ಬರ ಬ್ಯಾಂಕ್‌ ಖಾತೆಗಳನ್ನು ವಂಚನೆಗೆ ಬಳಸಿ ಹಣ ಕ್ರೆಡಿಟ್‌ ಆದ ಕೆಲವೇ ಕ್ಷಣಗಳಲ್ಲಿಬೇರೆ ಬೇರೆ ಅಕೌಂಟ್‌ಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದು,ಈ ಅಂಶಗಳು ಹಣ ರಿಕವರಿಗೆ ತೊಡಕುಂಟಾಗಿದೆ. ಅಷ್ಟೇ ಅಲ್ಲದೆ ಸೈಬರ್‌ ಅಪರಾಧ ಪ್ರಕರಣಗಳ ಸಂತ್ರಸ್ತರು ದೂರು ಸಲ್ಲಿಸಲು ವಿಳಂಬ ಮಾಡುವುದು ಕೂಡ ನಷ್ಟ ಉಂಟಾದ ಹಣ ಜಪ್ತಿ ಮಾಡಲು ಕಠಿಣವಾಗುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.
    ಆರೋಪಿಗಳ ಪತ್ತೆ ಕಷ್ಟ:
    ಹಲವು ವಂಚನಾ ಮಾರ್ಗಗಳಲ್ಲಿಹಣ ದೋಚುವ, ಮಹಿಳೆಯರಿಗೆ ಕಿರುಕುಳ ಕೊಟ್ಟಿರುವ ಸೈಬರ್‌ ಆರೋಪಿಗಳ ಬಂಧನವೂ ಅತಿ ಕಡಿಮೆ ಪ್ರಮಾಣವಿದೆ. ಪೊಲೀಸ್‌ ಇಲಾಖೆ ಮೂರು ವರ್ಷಗಳಲ್ಲಿ11,125 ಸೈಬರ್‌ ಕ್ರೈಂ ಆರೋಪಿಗಳನ್ನು ಗುರುತು ಮಾಡಿದೆ.ಆದರೆ, ಕೇವಲ 1503 ಆರೋಪಿಗಳನ್ನಷ್ಟೇ ಬಂಧಿಸಲಾಗಿದೆ. ಈ ಪೈಕಿ 2020ರಲ್ಲಿ584 ಮಂದಿ ಆರೋಪಿಗಳನ್ನು ಬಂಧಿಸಿರುವುದು ಇದುವರೆಗಿನ ಗಣನೀಯ ಕೆಲಸವಾಗಿದೆ.
    ನಕಲಿ ದಾಖಲೆ ಬಳಕೆ:
    ಸಾಮಾನ್ಯ ಅಪರಾಧ ಪ್ರಕರಣಗಳಿಗಿಂತ ಸೈಬರ್‌ ಕ್ರೈಂ ಕೇಸ್‌ಗಳ ತನಿಖೆ ವಿಭಿನ್ನವಾಗಿರಲಿದೆ. ಶೇ. 75ರಷ್ಟು ತನಿಖಾ ಪ್ರಕ್ರಿಯೆ ತಾಂತ್ರಿಕ ನೈಪುಣ್ಯದಿಂದಲೇ ಕೂಡಿರಲಿದೆ. ಆರೋಪಿಗಳು ಬಳಸಿದ ಮೊಬೈಲ್‌ ನಂಬರ್‌, ಕಂಪ್ಯೂಟರ್‌ನ ಐಪಿ ವಿಳಾಸ, ಬ್ಯಾಂಕ್‌ ಖಾತೆಯ ವಿವರಗಳನ್ನು ಸಂಗ್ರಹಿಸಬೇಕು. ಬಹುತೇಕ ಕೇಸ್‌ಗಳಲ್ಲಿಈ ಎಲ್ಲಾದಾಖಲೆಗಳು ಆರೋಪಿಯಲ್ಲದವರ ಹೆಸರಿನಲ್ಲಿಯೇ ಇರುತ್ತವೆ. ನಕಲಿ ದಾಖಲೆಗಳನ್ನು ಬಳಸಿಯೇ ಆರೋಪಿ ಕೃತ್ಯ ಎಸಗಿರುತ್ತಾನೆ. ಹೀಗಾಗಿ, ಪ್ರಕರಣದ ನೈಜ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ವಿಳಂಬವಾಗಲಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದರು.

    crime m
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಠಾಣೆ ಮೆಟ್ಟಿಲೇರಿದ ಪರಮೇಶ್ವರ್
    Next Article Dangerous ವ್ಯಕ್ತಿ Mumbai ಪ್ರವೇಶ- ಕಟ್ಟೆಚ್ಚರಕ್ಕೆ ಸೂಚನೆ
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಯೋಧರಿಗೆ DCM ಬಂಪರ್ ಕೊಡುಗೆ .

    ಮೇ 28, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • uclowbyac ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • https://newtreatmentupdate.com/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ГЁ possibile ottenere cefixime economico senza ricetta ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe