Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿವಾದದ ಸುಳಿಯಲ್ಲಿ ಸಚಿವ ಡಿ.ಸುಧಾಕರ್ | D Sudhakar
    Viral

    ವಿವಾದದ ಸುಳಿಯಲ್ಲಿ ಸಚಿವ ಡಿ.ಸುಧಾಕರ್ | D Sudhakar

    vartha chakraBy vartha chakraಸೆಪ್ಟೆಂಬರ್ 12, 2023Updated:ಸೆಪ್ಟೆಂಬರ್ 12, 2023508 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.12- ಯೋಜನಾ ಸಚಿವ ಡಿ.ಸುಧಾಕರ್ ಸಂಕಷ್ಟಕ್ಕೆ ಸಿಲುಕಿದ್ದಾರೆ.ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
    ಈ‌ ವಿಡಿಯೋದಲ್ಲಿ ಸಚಿವ ಸುಧಾಕರ್ ಅವರು ಹೇ ಕೇಳಮ್ಮ ಮಾದಕ್ಕ ಕೇಳು. ಹೇ ಕೇಳಮ್ಮ ಸುಮ್ಮನೆ ನಂಗೆ ರೇಗಿಬಿಡುತ್ತೆ ನನ್ನತ್ರ ಗಾಂಚಾಲಿ, ಗಿಂಚಾಲಿ ಎಲ್ಲ ನಡೋಯಲ್ಲ. ಆಂಧ್ರದಲ್ಲಿ ಮಚ್ಚು ಕೊಡಲಿ ಇಟ್ಕೊಂಡು ಓಡಾಡಿದ್ದೀನಿ. ಯಲಹಂಕ ಏನು ದೊಡ್ಡದಲ್ಲ ಎಂದು ಹೇಳಿದ್ದಾರೆ.

    ಈ ಕುರಿತಂತೆ ‌ಡಿ.ಸುಧಾಕರ್ ಅವರ ವಿರುದ್ಧ ಯಕಹಂಕ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಹಾಗೂ ಇತರೆ ಆರೋಪಗಳ ದೂರು ದಾಖಲಾಗಿದ್ದು ಎಫ್ಐಆರ್ ಹಾಕಲಾಗಿದೆ. ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ ಇದೀಗ ಡಿ.ಸುಧಾಕರ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ ಜಾಲತಾಣಗಳಲ್ಲಿ ಲಭ್ಯವಿರುವ ಸುಧಾಕರ್ ಬೆದರಿಕೆಯ ವಿಡಿಯೋ ಲಗತ್ತಿಸಿ‌ ಟ್ವೀಟ್ ಮಾಡಿರುವ ಬಿಜೆಪಿ, ಯಾವ ಪುಡಿ ರೌಡಿಗಿಂತಲೂ ಕಡಿಮೆ‌ ಇಲ್ಲ ಸಚಿವ ಡಿ. ಸುಧಾಕರ್ ಅವರ ಗೂಂಡಾವರ್ತನೆ ಎಂದು ಹೇಳಿದೆ.
    ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಜಾತಿ ನಿಂದಕರು, ಗೂಂಡಾಗಳೇ ತುಂಬಿ ತುಳುಕುತ್ತಿದ್ದಾರೆ.
    ಸಿದ್ದರಾಮಯ್ಯ ಅವರಿಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾದರೆ, ಸಚಿವ ಡಿ. ಸುಧಾಕರ್ ಅವರಿಗೆ ದಲಿತರನ್ನು ಅವಮಾನಿಸಿ ಗೂಂಡಾಗಿರಿ ಮಾಡುವ ಅಹಂ ಸಿದ್ಧಿಸಿದೆ ಎಂದು ಆಪಾದಿಸಿದೆ.

    ಈ ಬೆಳವಣಿಗೆ ನಡುವೆ ಸಚಿವ ಸುಧಾಕರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಪ್ರಕರಣದ ಕುರಿತು ವಿವರಣೆ ನೀಡಿದ್ದಾರೆ.
    ಹಳೆಯ ವಿಡಿಯೋ:
    ನಂತರ ‌ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಸಾಮಾಜಿಕ ಜಾಲತಾಣದಲ್ಲಿ ಲಭ್ಯ ಇರುವ ವಿಡಿಯೋ ಹಳೆಯದು ಈಗ ಪ್ರಸಾರವಾಗುತ್ತಿರುವ ವಿಡಿಯೋಗಳ ತುಣಕನ್ನು ಒಂದಕ್ಕೊಂದು ಜೋಡಿಸಲಾಗಿದೆ ಎಂದು ಹೇಳಿದರು.
    ಘಟನೆ ನಡೆದ ದಿನ ನಾನು ಚಿತ್ರದುರ್ಗದಲ್ಲಿದ್ದೆ. ನನಗೂ, ಅದಕ್ಕೂ ಸಂಬಂಧವಿಲ್ಲ ನನ್ನ ಮಾತುಗಳಿಗೆ ಮೊದಲು ದೂರುದಾರರು ಯಾವ ರೀತಿ ಪ್ರಚೋದನಕಾರಿಯಾಗಿ ನಡೆದುಕೊಂಡರು ಎಂಬುದನ್ನು ನಡೆಸಿಕೊಳ್ಳಬೇಕು. ಸದ್ಯಕ್ಕೆ ತಮಗೆ ನೆನಪಿಲ್ಲ ಎಂದರು.

    ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ತಾವು ಹೆದರಿಕೊಂಡೇ ಕಾನೂನಿನ ಚೌಕಟ್ಟಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಏಕಾಏಕಿ ಈ ಹಂತಕ್ಕೆ ಬಂದಿಲ್ಲ. ಕಷ್ಟಪಟ್ಟು ಬೆಳೆದಿದ್ದೇನೆ. ನಾನು ಸಚಿವನಾದಾಗಲೆಲ್ಲಾ ಈ ರೀತಿಯ ವಿವಾದಗಳನ್ನು ಸೃಷ್ಟಿಸಲಾಗುತ್ತಿದೆ. 2008 ರಲ್ಲಿ ಸಚಿವನಾಗಿದ್ದಾಗ ಸಿಬಿಐ ಕೇಸು ಹಾಕಿಸಿದ್ದರು. ಅದು ನ್ಯಾಯಾಲಯದಲ್ಲಿ ಊರ್ಜಿತವಾಗಲಿಲ್ಲ ಎಂದು ತಿಳಿಸಿದರು.
    ತಮ್ಮನ್ನು ಶಾಸಕರನ್ನಾಗಿ ಮಾಡಿದ್ದೇ ನನ್ನ ರಾಜಕೀಯ ಗುರು ಕೆ.ಎಚ್. ರಂಗನಾಥ್. ಇಂತದ್ದರಲ್ಲಿ ನಾನು ಪರಿಶಿಷ್ಟ ಸಮುದಾಯಗಳ ಜಾತಿನಿಂದನೆ ಮಾಡಲು ಸಾಧ್ಯವೇ? ಅನಗತ್ಯವಾದ ತೇಜೋವಧೆಗಳು ಮನಸ್ಸಿಗೆ ನೋವುಂಟು ಮಾಡುತ್ತವೆ. ನಾನು ಯಾರ ಜಾತಿನಿಂದನೆಯೂ ಮಾಡಿಲ್ಲ, ಭೂಮಿಯನ್ನೂ ಕಬಳಿಸಿಲ್ಲ. ನನ್ನ ಮೇಲಿನ ಆರೋಪಗಳು ಸಂಪೂರ್ಣ ನಿರಾಧಾರ ಎಂದು ಸ್ಪಷ್ಟಪಡಿಸಿದರು.

    ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ನನ್ನ ಪರವಾದ ಸಮರ್ಥನೆಗಳನ್ನು ದಾಖಲೆ ಸಮೇತ ನೀಡಿದ್ದೇನೆ. ಹತ್ತು-ಹದಿನೈದು ವರ್ಷಗಳ ಹಿಂದೆ ನಡೆದ ಜಮೀನು ಖರೀದಿ ವ್ಯವಹಾರ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಈಗ ಅದನ್ನು ಮುನ್ನೆಲೆಗೆ ತಂದು ಕೇಸು ಹಾಕಿಸಲಾಗಿದೆ.
    ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದೇನೆ. ನನ್ನ ವಿರುದ್ಧ ಕೇಳಿಬಂದಿರುವ ಭೂಕಬಳಿಕೆಯ ಆರೋಪಕ್ಕೆ ಒಂದೇ ಒಂದು ದಾಖಲೆಗಳಿಲ್ಲ. ಆದರೂ ನಿರಂತರವಾಗಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೇಳಿದರು.

    D Sudhakar ನ್ಯಾಯ ರಾಜಕೀಯ ವೈರಲ್ ವ್ಯವಹಾರ ವ್ಯಾಪಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಪರ ಯಡಿಯೂರಪ್ಪ ಬ್ಯಾಟಿಂಗ್ | Vijayendra
    Next Article ಚೈತ್ರಾ ಕುಂದಾಪುರ ಎಂಬ ನಯವಂಚಕಿ | Chaitra Kundapura
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasnoids ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • ZacharyHaf ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • http://ev-gateway.com/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe