Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    ಅಪರಾಧ

    ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice

    vartha chakraBy vartha chakraಆಗಷ್ಟ್ 3, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಆ.3- ಸಾವು ಎನ್ನುವುದು ಹೇಗೆ, ಎಲ್ಲಿ, ಯಾವಾಗ ಬರುತ್ತದೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಬದುಕು ಎನ್ನುವುದು ಅನಿಶ್ಚಿತ, ಸಾವು ನಿಶ್ಚಿತ ಎನ್ನುವುದು. ಈ ನಾಣ್ನುಡಿಗೆ ಉದಾಹರಣೆ ಈ ಘಟನೆ.
    ಹಸಿವಿನಿಂದ ಕಂಗೆಟ್ಟಿದ್ದ ಅವರು ಊಟ ಮಾಡುತ್ತಿರುವ ವೇಳೆ ದಂಡೆತ್ತಿ ಬಂದ ಜವರಾಯ ಅವರ ಪ್ರಾಣವನ್ನು ಕಸಿದುಕೊಂಡು ಹೋಗಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ಶಿವಾಜಿನಗರದ ಬಸ್ ನಿಲ್ದಾಣದ ಬಳಿ ಇರುವ ಎಗ್ ರೈಸ್ ಅಂಗಡಿಗೆ ನಿನ್ನೆ ರಾತ್ರಿ ಅರುಳ್ (40) ಕೋಟಾ ನಾಗೇಶ್ವರರಾವ್(32) ಹಾಗೂ ಕರಣ್ ತಾಪ (32) ಮತ್ತಿತರರು ಊಟಕ್ಕೆ ಬಂದಿದ್ದಾರೆ.

    ಈ ವೇಳೆ ಎಗ್ ರೈಸ್ ಅಂಗಡಿಯ ಪಕ್ಕದ ಕಟ್ಟಡದ ಗೋಡೆ ಕುಸಿದು ನಾಲ್ಕು ಮಹಡಿಯ ಕಟ್ಟಡದ ಮೇಲಿಂದ ನೀರಿನ ಸಿಂಟೆಕ್ಸ್ ಟ್ಯಾಂಕ್ ಕುಸಿದು ಎಗ್‌ರೈಸ್ ಅಂಗಡಿ ಮೇಲೆ ಬಿದ್ದಿದೆ.ಇದರಿಂದಾಗಿ ಅಲ್ಲಿ ಊಟ ಮಾಡುತ್ತಿದ್ದ ಮೂವರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
    ಎಗ್ ರೈಸ್ ಅಂಗಡಿ ಮಾಲೀಕ ದಾಸ್ ಹಾಗೂ ಊಟಕ್ಕೆ ಬಂದಿದ್ದ ಕಪಿಲ್ ಗಾಯಗೊಂಡಿದ್ದು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅವರಲ್ಲಿ ಗಂಭೀರವಾಗಿ ಗಾಯಗೊಂಡಿರುವ ದಾಸ್ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ ಮೃತರಲ್ಲಿ ಅರುಳ್ ತಮಿಳುನಾಡು ಮೂಲದವರಾಗಿದ್ದು ಶಿವಾಜಿನಗರದಲ್ಲಿ ತರಕಾರಿ ವ್ಯಾಪಾರಿ ಮಾಡುತ್ತಿದ್ದರೆ,ಆಂಧ್ರಪ್ರದೇಶ ಮೂಲದ ಕೋಟಾ ನಾಗೇಶ್ವರರಾವ್ ಕೂಲಿ ಕೆಲಸ ಮಾಡುತ್ತಿದ್ದರು,ಮತ್ತೊಬ್ಬ ಕರಣ್ ತಾಪ ನೇಪಾಳಿ ಮೂಲದವರಾಗಿದ್ದು ಅವರು ಶಿವಾಜಿನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
    ಶಿವಾಜಿನಗರದ ಬಸ್ ನಿಲ್ದಾಣದ ಬಳಿಯ ಓಕ್ ಫರ್ನಿಚರ್ ಅಂಗಡಿಯ ಕಟ್ಟಡದ ನಾಲ್ಕು ಅಂತಸ್ತಿನ ಮೇಲಿಟ್ಟಿದ್ದ ಸಿಂಟೆಕ್ಸ್ ವಾಟರ್ ಟ್ಯಾಂಕ್ ಇಡಲಾಗಿತ್ತು,ನಗರದಲ್ಲಿ ಸುರಿದ ಮಳೆ ಹಾಗೂ ಟ್ಯಾಂಕ್ ಕೆಳಭಾಗದ ತೆವದಿಂದ   ಗೋಡೆ ತೋಯ್ದಿತ್ತು
    ನೀರು ಪೂರ್ತಿ ತುಂಬಿಹೋಗಿದ್ದ ಟ್ಯಾಂಕ್ ಭಾರಕ್ಕೆ ಶಿಥಿಲಗೊಂಡಿದ್ದ ಗೋಡೆ ರಾತ್ರಿ 10.30ರ ವೇಳೆ ಏಕಾಏಕಿ ಮುರಿದು ಗೋಡೆ ಟ್ಯಾಂಕ್ ಎರಡೂ ಎಗ್‌ರೈಸ್ ಅಂಗಡಿ ಮೇಲೆ ಬಿದ್ದಿವೆ.

    ಎರಡೂ ಬಿದ್ದ ರಭಸಕ್ಕೆ ಕ್ಷಣಾರ್ಧದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಇದೇ ವೇಳೆ ಸಮೀಪದಲ್ಲಿದ್ದ ಅಂಗಡಿ‌ ಮಾಲಕ‌ ದಾಸ್,ಕರಣ್ ತಾಪ. ಹಾಗೂ ಕಪಿಲ್  ತೀವ್ರ ಗಾಯಗೊಂಡಿದ್ದು ಸ್ಥಳೀಯರ ಸಹಾಯದಿಂದ ಅವರನ್ನು ತಕ್ಷಣ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಗಂಭೀರವಾಗಿ ಗಾಯಗೊಂಡಿದ್ದ ಕರಣ್ ತಾಪ ಚಿಕಿತ್ಸೆ ಫಲಕಾರಿಯಾಗದೇ ಬೆಳಿಗ್ಗೆ ಮೃತಪಟ್ಟಿದ್ದಾರೆ  ಎಂದು ‌ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
    ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ‌ಅಧಿಕಾರಿಗಳ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದು,ಕಟ್ಟಡದ ಮೇಲೆ ಓವರ್ ಟ್ಯಾಂಕ್ ಅವೈಜ್ಞಾನಿಕವಾಗಿ ನಿರ್ಮಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಬಿಡಿಎ ಅಧಿಕಾರಿಗಳಿಂದ  ಪರೀಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
    ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Bangalore bangalore news egg rice kannada news News ವ್ಯಾಪಾರ
    Share. Facebook Twitter Pinterest LinkedIn Tumblr Email
    Previous Articleಪತ್ನಿಯ ಬೆರಳು ಕಚ್ಚಿ ತಿಂದ ಪತಿರಾಯ | Bengaluru Crime News
    Next Article ಜಾಮೀನು ಕೊಡಿಸದ ವಕೀಲರ ಕಿಡ್ನ್ಯಾಪ್ | Kidnap
    vartha chakra
    • Website

    Related Posts

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    ಅಕ್ಟೋಬರ್ 3, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe