Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಇಲಾಖೆಯಲ್ಲಿ ಜಟಾಪಟಿ ಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿಗೆ ಮೊರೆ
    Viral

    ಪೊಲೀಸ್ ಇಲಾಖೆಯಲ್ಲಿ ಜಟಾಪಟಿ ಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿಗೆ ಮೊರೆ

    vartha chakraBy vartha chakraಫೆಬ್ರವರಿ 9, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.9-

    ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳ ನಡುವಿನ ಮುಸುಕಿನ ಗುದ್ದಾಟ ಹಾಗೂ ಶ್ರೇಣಿ ಕುರಿತಾದ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು,ರಾಜ್ಯ
    ಆಂತರಿಕ ಭದ್ರತೆ ವಿಭಾಗದ ಪೊಲೀಸ್ ಮಹಾ‌ನಿರ್ದೇಶಕ (ಡಿಜಿಪಿ) ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
    ಬರುವ ಮೇ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗಲಿರುವ ಡಿಜಿಪಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
    ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಸರಿ ಸಮಾನವಾದ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರ ನಿವೃತ್ತಿಗೆ ಕೆಲವೇ ತಿಂಗಳ ಮೊದಲು ವೈಯಕ್ತಿಕ ಕಾರಣವನ್ನು ನೀಡಿ ಸ್ವಯಂ ನಿವೃತ್ತಿ ಕೋರಿ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಮೂಲಗಳ ಪ್ರಕಾರ ರಾಜ್ಯ ಪೊಲೀಸ್ ಮಹಾ‌ನಿರ್ದೇಶಕ(ಡಿಜಿ-ಐಜಿಪಿ) ಅಲೋಕ್ ಮೋಹನ್ ಅವರು ಇವರಿಗೆ ಸೇವೆಯ ಕುರಿತಂತೆ ಮೆಮೋ ನೀಡಿದರು ಎಂಬ ಕಾರಣಕ್ಕೆ ಕೋಪಗೊಂಡ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ ಕೋರಿದ್ದಾರೆ ಎನ್ನಲಾಗಿದೆ.
    ಇದಕ್ಕೆ ಪ್ರಮುಖ ಕಾರಣ ತಮ್ಮದೇ ದರ್ಜೆಯ‌ ಅಧಿಕಾರಿ ತಾಂತ್ರಿಕ ಕಾರಣದಿಂದ ಉನ್ನತ ಹುದ್ದೆಯಲ್ಲಿದ್ದೇನೆ ಎಂಬ ಕಾರಣಕ್ಕೆ ಸಮಾನ ದರ್ಜೆಯ ಅಧಿಕಾರಿಗೆ ಮೆಮೋ ನೀಡುವುದನ್ನು ಬಹುತೇಕ ಅಧಿಕಾರಿಗಳು ಇಷ್ಟಪಡುವುದಿಲ್ಲ.ಇದು‌ ತಮಗೆ ಮಾಡುವ ಅಪಮಾನ ಎಂದೇ ಭಾವಿಸುತ್ತಾರೆ.

    ಸದ್ಯ ಪ್ರತಾಪ್ ರೆಡ್ಡಿ ನಿರ್ವಹಿಸುತ್ತಿರುವ ಆಂತರಿಕ ಭದ್ರತಾ ವಿಭಾಗ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಸರಿ ಸಮಾನವಾದ ಹುದ್ದೆಯಾಗಿದೆ.
    ಅಲೋಕ್ ಮೋಹನ್ ಹಾಗೂ ಪ್ರತಾಪ್ ರೆಡ್ಡಿ ಇಬ್ಬರು ಡಿಜಿಪಿಗಳಾಗಿದ್ದು ಮೆಮೋ ‌ನೀಡಿದ್ದರಿಂದ ಬೇಸರಗೊಂಡು ಪ್ರತಾಪ್ ರೆಡ್ಡಿ
    ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
    ಪ್ರತಾಪ್ ರೆಡ್ಡಿ ಅವರು ಈ ಹಿಂದೆ ಬೆಂಗಳೂರುನಗರ ಪೊಲೀಸ್ ಆಯುಕ್ತರಾಗಿ‌ಯೂ ಸೇವೆ ಸಲ್ಲಿಸಿದ್ದರು. ರಾಜ್ಯದ ಪೊಲೀಸ್ ಆಡಳಿತದ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ಹಿರಿಯ ಐಪಿಎಸ್ ಅಧಿಕಾರಿ ಸಿ. ಹೆಚ್ ಪ್ರತಾಪ್ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು.
    ಪ್ರತಾಪ್ ರೆಡ್ಡಿ ಬಿ.ಟೆಕ್ ಪದವೀಧರರಾಗಿದ್ದು, 1991ರಲ್ಲಿ ಕರ್ನಾಟಕ ಕೆಡರ್ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ ಆಗಿ ಪ್ರತಾಪ್ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.

    ಪ್ರತಾಪ್ ರೆಡ್ಡಿ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದಾರೆ.
    ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಕಮಲ್ ಪಂತ್ ಅವರ ಬಳಿಕ ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.ಅತ್ಯುತ್ತಮ ಸೇವೆಗಾಗಿ ಪ್ರತಾಪ್ ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

    Verbattle
    Verbattle
    Verbattle
    ಕಾನೂನು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ.ರವಿ ಎಂಬ‌ ನಡೆಯದ ನಾಣ್ಯ | CT Ravi
    Next Article ಡ್ರಗ್ಸ್ ದಂಗೆಕೋರರ ವಿರುದ್ಧ ಬುಲ್ಡೋಜರ್ ಕಾನೂನು
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    2 ಪ್ರತಿಕ್ರಿಯೆಗಳು

    1. Xufmqp on ಫೆಬ್ರವರಿ 11, 2026 8:27 ಅಪರಾಹ್ನ

      betmgm Vermont betmgm-play mgm online casino login

      Reply
    2. Crvupe on ಫೆಬ್ರವರಿ 19, 2026 5:52 ಅಪರಾಹ್ನ

      Immerse in the symphony of spinning reels and cheering wins. In coins crown casino, cashback offers soften any losses. Spin with confidence today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Llwfbv ರಲ್ಲಿ ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    • Kfdxtx ರಲ್ಲಿ ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ
    • Tracymix ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.