Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    Viral

    ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka

    vartha chakraBy vartha chakraನವೆಂಬರ್ 18, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.18- ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಧಗದಗಿಸುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಾಖ್ಯಾನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಫಲಿತಾಂಶ ಬಂದ ಆರು ತಿಂಗಳ ನಂತರ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಗೌರವ ಕೊಟ್ಟಿದೆ. ಆದರೆ ಈ ಆಯ್ಕೆ ವೇಳೆ ಅವರದೇ ಪಕ್ಷದ ಶಾಸಕರು ಮಾಡಿರುವ ಆರೋಪಗಳಿಗೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

    ಹಿಂದೆ ಅಶೋಕ್ ಅವರಿಗೆ ಮಂಡ್ಯದಲ್ಲಿ ಗೋಬ್ಯಾಕ್ ಎಂಬ ಪೋಸ್ಟರ್ ಹಾಕಲಾಗಿತ್ತು. ಮತ್ತೆ ಬಿಜೆಪಿ ಕಚೇರಿಯಿಂದ ಗೋಬ್ಯಾಕ್ ಅಶೋಕ್ ಪೋಸ್ಟರ್ ಬರಬಹುದು ಎಂದು ವ್ಯಂಗ್ಯವಾಡಿದ ಅವರು,
    ಬಿಜೆಪಿಯನ್ನು ಒಂದು ಕುಟುಂಬದ ಪಕ್ಷವಾಗಲು ಬಿಡುವುದಿಲ್ಲ. ಬೆಟ್ಟದ ಹುಲಿ ಮಾಡಬೇಡಿ, ರಾಜ್ಯಾಧ್ಯಕ್ಷ ಸ್ಥಾನದ ಖರೀದಿಗೆ ಬಂದಿದ್ದರು ಎಂಬೆಲ್ಲ ಹೇಳಿಕೆಯನ್ನು ಅವರದೇ ಪಕ್ಷದವರು ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎಷ್ಟು ಕೊಟ್ಟರು ಎಂದು ಪ್ರಶ್ನಿಸಿದರು
    ಆದರೂಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಅವರಿಗೆ ಅಭಿನಂದಿಸುತ್ತೇನೆ. ಈ ಆಯ್ಕೆಯಿಂದ ಕಾಂಗ್ರೆಸ್‍ಗೆ ಖುಷಿಯಾಗಿದೆ. ಆದರೆ ಬಿಜೆಪಿಗೆ ಸಂತೋಷವಿಲ್ಲ. ಚಾಪ್ಟರ್-2 ಸುಲಭವಾಗಲಿದೆ ಎಂದರು.

    ಕಾದು ನೋಡಿ:
    ಮತ್ತೊಂದೆಡೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ,ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಭವಿಷ್ಯ ನುಡಿದರು.
    ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಆಪಾದಿಸಿದರು.
    ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೂರಿದರು.

    BJP bjp karnataka Government Karnataka News Politics Trending ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    Next Article ಜಟಾಪಟಿಗಿಳಿದ ಸಿದ್ದರಾಮಯ್ಯ-ಕುಮಾರಸ್ವಾಮಿ | Siddaramaiah
    vartha chakra
    • Website

    Related Posts

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Vikiwkj ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Did Kamal Nath cause the defeat of Congress in MP?
    ಕಮಲ್ ನಾಥ್ ಹೇಗೆ ಕಾಂಗ್ರೆಸ್ ಸೋಲಿಸಿದರು ಗೊತ್ತಾ? #kannada
    Subscribe